Site icon Harithalekhani

ಆಮ್‌ಸ್ಟರ್‌ಡ್ಯಾಂ ನಿಂದ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 206 ಪ್ರಯಾಣಿಕರು

ದೊಡ್ಡಬಳ್ಳಾಪುರ: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ನೆದರ್‌ಲ್ಯಾಂಡ್ಸ್‌ನ ರಾಜಧಾನಿ ಆಮ್‌ಸ್ಟರ್‌ಡ್ಯಾಂನಿಂದ ಇಂದು ಬೆಳಗ್ಗೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೆರಡನೇ ಏರ್ ಇಂಡಿಯಾ ವಿಮಾನದಲ್ಲಿ 206 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. 

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 206 ಮಂದಿ ಪ್ರಯಾಣಿಕರಲ್ಲಿ 02 ಮಕ್ಕಳು, 204 ಪುರುಷರು ಮತ್ತು ಮಹಿಳೆಯರು ಇದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 206 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಕಳುಹಿಸಿಕೊಡಲಾಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

Exit mobile version