ಕರೊನಾ ನಡುವೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಮುಖ್ಯಾಂಶಗಳು 

* ಜೂ.19ಕ್ಕೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ 

* ನಾಮಿನಿ ನಿರ್ದೇಶಕರೇ ನಿರ್ಣಾಯಕ

* ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

* ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

* ಜೆಡಿಎಸ್ ಪಕ್ಷದ ಲೋಕೇಶ್ಗೆ ಅದೃಷ್ಟ..?

ದೊಡ್ಡಬಳ್ಳಾಪುರ: ನಿಯಂತ್ರಣಕ್ಕೆ ಬಾರದ ಕರೊನಾ ಸೋಂಕಿನ ಹಾವಳಿಯ ನಡುವೆಯೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆಡಳಿತ ಮಂಡಳಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜೂ.19ಕ್ಕೆ ಚುನಾವಣೆ ನಡೆಯಲಿದ್ದು.ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಆರಂಭವಾಗಿದೆ.

13 ಜನ ನಿರ್ದೇಶಕರ ಸದಸ್ಯತ್ವ ಬಲದ ದೊಡ್ಡಬಳ್ಳಾಪುರ,ನೆಲಮಂಗಲ ಹಾಗೂ ದೇವನಹಳ್ಳಿ ತಾಲ್ಲೂಕನ್ನು ಒಳಗೊಂಡಿರುವ ಎಪಿಎಂಸಿಯಲ್ಲಿ ಕಾಂಗ್ರೆಸ್ 7, ಜೆಡಿಎಸ್ 6 ಸ್ಥಾನಗಳನ್ನು ಹೊಂದಿವೆ.ಸರ್ಕಾರದಿಂದ ನಾಮ ನಿರ್ದೇಶನ ಹೊಂದುವ 3 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಕೆಲ  ದಿನಗಳ ಹಿಂದೆಯಷ್ಟೇ ಎಂ.ಸಿದ್ದಲಿಂಗಯ್ಯ ನಾಮ ನಿರ್ದೇಶನಗೊಂಡಿದ್ದಾರೆ. ಉಳಿದ 2 ಸ್ಥಾನಗಳು ಖಾಲಿ ಉಳಿದಿವೆ. ಚುನಾವಣೆ ಒಂದು ದಿನ ಇರುವಂತೆಯು ಸರ್ಕಾರ ನಾಮ ನಿರ್ದೇಶನ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ದೊಡ್ಡಬಳ್ಳಾಪುರದಿಂದ 5ಜನ, ದೇವನಹಳ್ಳಿ ತಾಲ್ಲೂಕಿನಿಂದ 2 ಜನ ಕಾಂಗ್ರೆಸ್ ಪಕ್ಷದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಜೆಡಿಎಸ್ ಪಕ್ಷದಿಂದ ದೊಡ್ಡಬಳ್ಳಾಪುರ 2, ನೆಲಮಂಗಲ 3 ಹಾಗೂ ದೇವನಹಳ್ಳಿ ತಾಲ್ಲೂಕಿನಿಂದ ಒಬ್ಬ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ದೇವನಹಳ್ಳಿ ತಾಲ್ಲೂಕಿಗೆ ನೀಡಲಾಗಿದೆ.ಹೀಗಾಗಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೀಡಬೇಕು ಎಂದು ಎರಡೂ ಪಕ್ಷದ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೆರುತಿದ್ದಾರೆ.

ಎರಡನೇ ಅವಧಿಯ 20 ತಿಂಗಳ ಆಡಳಿತಕ್ಕಾಗಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಜಿಂಕೆಬಚ್ಚಹಳ್ಳಿ ಬಿ.ವಿ.ಲೋಕೇಶ್, ಕಾಂಗ್ರೆಸ್ ಪಕ್ಷದಿಂದ ನಾರನಹಳ್ಳಿ ಎಂ.ಗೋವಿಂದರಾಜ್, ಹೊಸಹಳ್ಳಿಯ ವಿಶ್ವನಾಥರೆಡ್ಡಿ ಹಾಗೂ ಹಾಲಿ ಅಧ್ಯಕ್ಷರಾಗಿರುವ ಕುಂದಾಣದ ಕೆ.ವಿ.ಮಂಜುನಾಥ್ ಸಹ ಆಕಾಂಕ್ಷಿಗಳಾಗಿದ್ದಾರೆ.

ನಾಮಿನಿ ನಿರ್ದೇಶಕರೇ ನಿರ್ಣಾಯಕ

ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನ ಹೆಚ್ಚಾಗಿದ್ದರು ಸಹ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿವೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ಈಗ ಒಂದು ಸ್ಥಾನಕ್ಕೆ ನಾಮ ನಿರ್ದೇಶಕರಾಗಿರುವ ಎಂ.ಸಿದ್ದಲಿಂಗಯ್ಯ ಅವರು ಸಹ ಬಿಜೆಪಿ ಅಭ್ಯರ್ಥಿಗಳೇ ಆಗಿದ್ದು,ಉಳಿದಿಬ್ಬರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂರು ಪಕ್ಷಗಳಲ್ಲಿದೆ.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

ಮಿತ್ರ ಪಕ್ಷ ರಚಿಸಿಕೊಂಡು ರಾಜ್ಯದಲ್ಲಿ ಸರ್ಕಾರ ನಡೆಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಉಳಿದ ೨೦ ತಿಂಗಳಲ್ಲಿ ತಲಾ ಹತ್ತು ತಿಂಗಳು ಅಧಿಕಾರ ನಡುಸುವ ಸಾಧ್ಯತೆಗಳು ಹೆಚ್ಚಾಗಿದ್ದು,ಎರಡು ಪಕ್ಷಗಳ ಒಲವು ಏನಿರಲಿದೆ ಕಾದು ನೋಡಬೇಕಿದೆ.

ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

ಕಾಂಗ್ರೆಸ್ ಪಕ್ಷದಿಂದ ಗೋವಿಂದ ರಾಜ್ ಹಾಗೂ ವಿಶ್ವನಾಥ ರೆಡ್ಡಿ ಆಕಾಂಕ್ಷಿಗಳಾಗಿದ್ದರು.ಪಕ್ಷದ ಹಿರಿಯ ಮುಖಂಡ ಗೋವಿಂದರಾಜ್ ಪರವಾಗಿ ಹೈಕಮಾಂಡ್ ಒಲವನ್ನು ಹೊಂದಿದ್ದು.ಕಾಂಗ್ರೆಸ್ ಪಕ್ಷದ ಮೂಲಗಳು ಗೋವಿಂದರಾಜ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನುತ್ತಿರುವುದರಿಂದ, ಎಂ.ಗೋವಿಂದರಾಜ್ ಹಾಗೂ ಜೆಡಿಎಸ್ ಪಕ್ಷದ ಲೋಕೇಶ್ ನಡುವೆ ಸ್ಪರ್ದೆ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್ ಪಕ್ಷದ  ಲೋಕೇಶ್ಗೆ ಅದೃಷ್ಟ..?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿದ್ದು.ಜಾತಿ ರಾಜಕೀಯ ನಡೆದಿದ್ದೆ ಆದಲ್ಲಿ ಬಿಜೆಪಿ ಪಕ್ಷವು ಲಿಂಗಾಯಿತರಾದ ಲೋಕೇಶ್ ಆಯ್ಕೆಗೆ ಬೆಂಬಲಿಸಲಿದೆ ಎನ್ನುವ ಮಾತುಗಳು ರಾಜಕೀಯವಲಯದಲ್ಲಿ ಕೇಳಿಬರುತ್ತಿದೆ. 

******** ಹರಿತಲೇಖನಿ ವೆಬ್ ನ್ಯೂಸ್ ದೊಡ್ಡಬಳ್ಳಾಪುರ***********

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!