ಜೂನ್ 25 ರಿಂದ ಜಿಲ್ಲೆಯ 52 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ

ದೊಡ್ಡಬಳ್ಳಾಪುರ: ಎಸ್.ಎಸ್.ಎಲ್.ಸಿ. ಪರೀಕ್ಷೆಯು ಜೂನ್ 25 ರಿಂದ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ 13252  ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು  ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ತಿಳಿಸಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ  ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲ್ಲೂಕು ನೋಡಲ್  ಅಧಿಕಾರಿಗಳು  ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು

ಕೊರೋನ ವೈರಾಣು ಸೋಂಕು ಪಸರಿಕೆಭೀತಿ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತಾ ಹಿತದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿರುವ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸಂಪೂರ್ಣವಾಗಿ ಸೋಂಕು ನಿವಾರಕ  ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.  ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. ಕೆಮ್ಮು, ನೆಗಡಿ ಹಾಗೂ ಜ್ವರ ಲಕ್ಷಣ ಹೊಂದಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನೀಡುವ ಎನ್-95 ಮಾಸ್ಕ್ ಧರಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದರು.

ಕೊರೋನಾ ವೈರಾಣು ಸೋಂಕು ಹರಡದಂತೆ ತಡೆಯಲು, ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರತಿ ಕೊಠಡಿಗೆ ಗರಿಷ್ಟ 18 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು. ಪೆನ್, ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಬೇರೆ ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಉತ್ತಮವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿ.ಆರ್.ಪಿ.ಸಿ ಕಲಂ ಜಾರಿಮಾಡಲಾಗುವುದು ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ  ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ  ವಿನುತಾರಾಣಿ,  ಜಿಲ್ಲಾ  ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಮಾರೇಗೌಡ, ತಾಲ್ಲೂಕು  ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು  ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ ರೂ ಚೆಕ್ ನೀಡಿದ ಸಿಎಂ

ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ

ಬೆಂಗಳೂರು; 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ (shabana azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ

[ccc_my_favorite_select_button post_id="103935"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಆಲಹಳ್ಳಿ ಮೇಲ್ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿದ್ಯಾನಗರ ನಿವಾಸಿ 55 ವರ್ಷದ

[ccc_my_favorite_select_button post_id="103988"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!