ವಿದ್ಯಾರ್ಥಿಯ ಬಳಿ ತೆರಳಿ ಸಂಕಷ್ಟ ಆಲಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಸಂಪರ್ಕ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ ವಿದ್ಯಾರ್ಥಿಯ ಬಳಿಗೆ ಶಿಕ್ಷಣ ಸಚಿವರೆ ತೆರಳಿ ಸಮಸ್ಯೆ ಆಲಿಸಿರುವ ಘಟನೆ ಹೊಳಲೆ ಗ್ರಾಮದಲ್ಲಿ ನಡೆದಿದೆ.

ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆದರ್ಶ ಎಂಬ ವಿದ್ಯಾರ್ಥಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ವಿವರಿಸಿದ್ದು,ತಾವು ಕೈ ಗೊಂಡ ಕ್ರಮದ ಕುರಿತು ಈ ಕೆಳಕಂಡಂತೆ ವಿವರಿಸಿದ್ದಾರೆ.

ಮೂರು ದಿವಸಗಳ ಹಿಂದೆ ಓರ್ವ ಪತ್ರಕರ್ತ ಗೆಳೆಯರ ಮೂಲಕ ನನಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹೊರಳೆ ಎಂಬ ಗ್ರಾಮದ ಆದರ್ಶ ಎಂಬ  ಒಬ್ಬ ಬಾಲಕನ ಆಡಿಯೋ ಸಂದೇಶ ದೊರಕಿತು. 

10ನೇ ತರಗತಿಯಲ್ಲಿ ಓದುತ್ತಿರುವ ಆದರ್ಶ ತನ್ನ ಹಳ್ಳಿಯಲ್ಲಿ ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಯಾವುದೂ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ.‌

ಆ ಬಾಲಕನನ್ನು ಸಂಪರ್ಕಿಸಲು ಮಾಡಿದ ನನ್ನ ಪ್ರಯತ್ನ ಸಫಲವಾಗಲಿಲ್ಲ. ಆಗ  ತಕ್ಷಣ ನಿರ್ಧರಿಸಿದೆ, ಹೊಳಲೆ ಗ್ರಾಮಕ್ಕೇ ಹೋಗಿ ಆದರ್ಶನನ್ನು ಅವನ ಮನೆಯಲ್ಲಿಯೇ ಭೇಟಿ ಮಾಡಬೇಕೆಂದು. 

ಅದೇ ರೀತಿ ನಿನ್ನೆ ಗ್ರಾಮಕ್ಕೆ ಬೆಳಿಗ್ಗೆ 7.30 ಸುಮಾರಿಗೆ ಭೇಟಿಕೊಟ್ಟು ಅವನ ಮನೆಯಲ್ಲಿಯೇ ಆದರ್ಶ ಮತ್ತು  ಅವನ ರೀತಿ ಸಮಸ್ಯೆಗಳನ್ನು ಎದುರಿಸುತ್ತಿರುವ  ವಿದ್ಯಾರ್ಥಿಗಳನ್ನು ಭೇಟಿ ಮಾಡಿದೆ.  ಅವರ ಕಷ್ಟಸುಖಗಳನ್ನು ವಿಚಾರಿಸಿದೆ.  ಅವರಿಗೆ ಏನಾದರೂ ಪರಿಹಾರ ಕೊಡುತ್ತೇನೆಂದು ಭರವಸೆ ನೀಡಿದೆ.

ನಂತರ ಅದೇ ತಾಲೂಕಿನ ಕಿತ್ತಲೆ ಗೂಳಿ ಹಂಚಿನಕೂಡಿಗೆ, ಹುಲುತಾಳು ಮತ್ತು ಬೈರದೇವರ ಗ್ರಾಮಗಳಿಗೂ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಮಾತನಾಡಿಸಿದೆ ಅವರೆಲ್ಲರ ಸಮಸ್ಯೆ ಆಲಿಸಿದೆ.

ಮೆಣಸಿನಹಾಡ್ಯ ಕ್ಕೆ ಹೋಗಿ ಅಲ್ಲಿ ಕಲ್ಪನಾ ಎಂಬ ವಿದ್ಯಾರ್ಥಿಯನ್ನು ಭೇಟಿ ಮಾಡಿದೆ.  ಆಕೆ  ಪರೀಕ್ಷೆಯ ಕೊನೆಯ ದಿನ ಮನೆಯಲ್ಲಿ ಅಡುಗೆ ಮಾಡುವಾಗ ಕಾಲು ಪೂರ್ತಿ ಸುಟ್ಟು ಹೋಗಿದ್ದರೂ ಸಹ ಧೈರ್ಯ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಂದು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದಿದ್ದಳು. 

ಅದೇ ರೀತಿ ಸಿಂಚನ ಎಂಬ ವಿದ್ಯಾರ್ಥಿಯನ್ನು  ಭೇಟಿ ಮಾಡಿದೆ.ಆಕೆ ಪರೀಕ್ಷೆಯ ಮೊದಲನೆಯ ದಿನವೇ ಅಂದರೆಅಂದರೆ ಜೂನ್ 25ರಂದು ಪರೀಕ್ಷೆ ಮುಗಿಸಿ ಹೋದ ನಂತರ ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟಕ್ಕೆ ಭಾರಿ ಪೆಟ್ಟು ಮಾಡಿಕೊಂಡಿದ್ದಳು.  ಆದರೆ ಆ ಪೆಟ್ಟು, ಆ ನೋವು.. ಅವಳ ಆತ್ಮವಿಶ್ವಾಸವನ್ನು ಸೋಲಿಸಲಾಗಲಿಲ್ಲ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಆವಳಿಗೆ ಅನುಕೂಲವಾಗುವಂತೆ ಮನೆಯ ಬಾಗಿಲಿಗೇ ವಾಹನವೊಂದನ್ನು ಕಳಿಸಿ ಅವಳು ಸಾಧ್ಯವಾದಷ್ಟು ಆರಾಮಾಗಿ  ಪರೀಕ್ಷಾ ಕೇಂದ್ರಕ್ಕೆ ಹಿತವಾಗುವ  ರೀತಿಯಲ್ಲಿ ಕರೆದುಕೊಂಡು ಹೋಗಿ ಪರೀಕ್ಷಾ ಕೇಂದ್ರದಲ್ಲಿ ಸಹ ಸಿಂಚನಾಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಆಕೆ  ತೊಂದರೆ ಇಲ್ಲದಂತೆ   ಪರೀಕ್ಷೆ ಬರೆಯಲು ಅನುವುಮಾಡಿಕೊಟ್ಟಿದ್ದರು.

ನಂತರ ಕೊಪ್ಪದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ 8, 9, ಮತ್ತು 10 ತರಗತಿಗಳ ಮಕ್ಕಳಿಗೆ ಚಂದನ ತರಗತಿಗಳನ್ನು ಸೂಕ್ತ ವ್ಯವಸ್ಥೆ ಕಲ್ಪಿಸಲು ತೀರ್ಮಾನ ಕೈಗೊಂಡಿದ್ದೇವೆ.  ಹೊಳಲೆ ಗ್ರಾಮಕ್ಕೆ  ವಿದ್ಯುಚ್ಛಕ್ತಿ ವ್ಯವಸ್ಥೆ ಕಲ್ಪಿಸಲೂ ಸಹ ಅಗತ್ಯ ಕ್ರಮ ಕೈಗೊಳ್ಳಲು ಸಹ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಡಿಡಿಪಿಐ, ಬಿಇಓ, ಸಮಾಜ ಕಲ್ಯಾಣ ಇಲಾಖೆ, ವಿದ್ಯುತ್ ವಿತರಣಾ ಇಲಾಖೆ ಗಳ  ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.‌

ನಿನ್ನೆ ಇಡೀ ದಿನ ಮಳೆಯಲ್ಲಿ  ಆ ಗುಡ್ಡಗಾಡಿನ  ರಸ್ತೆಗಳಲ್ಲಿ ಓಡಾಡಿ ಮಕ್ಕಳನ್ನು ಅವರ ಮನೆಗಳ ಪರಿಸರದಲ್ಲಿಯೇ ಕುಳಿತು‌ ಮಾತನಾಡಿಸಿದ್ದು ನನಗೆ ಅತ್ಯಂತ ಸಂತಸ ತಂದಿದೆ.

ಅವರ ಸಮಸ್ಯೆಗಳಿಗೂ ಪರಿಹಾರ ಸಧ್ಯದಲ್ಲಿಯೇ ದೊರಕಿಸಿಕೊಡುವ ವಿಶ್ವಾಸ ನನ್ನದ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

ದೊಡ್ಡಬಳ್ಳಾಪುರ (Doddaballapura): ನಿನ್ನೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಾಬಸಂದ್ರ ಬಳಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೊಸಹಳ್ಳಿ

[ccc_my_favorite_select_button post_id="104077"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!