ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ

ದೊಡ್ಡಬಳ್ಳಾಪುರ: ಪ್ರತಿಭಾವಂತರಿಗೆ ಸಮಾಜದಲ್ಲಿ ಎಂದಿಗೂ ಮನ್ನಣೆ ಇರುತ್ತದೆ.  ಸಾಧನೆ ಮಾಡಲು ಎಲ್ಲರಿಗೂ ಅವಕಾಶವಿರುತ್ತದೆ.ಶ್ರದ್ದೆ, ಪರಿಶ್ರಮ ಮತ್ತು ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಉತ್ತಮ ಸಾಧಕರಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ ತಿಳಿಸಿದರು. 

ಅವರು ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯಲ್ಲಿ ನಡೆದ  ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ವಿದ್ಯಾಭ್ಯಾಸ ದೊರೆಯಬೇಕೆಂಬುದು  ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಉದ್ದೇಶವಾಗಿದೆ. ಕೊಂಗಾಡಿಯಪ್ಪ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಎಲ್ಲರಿಗೂ ವಿದ್ಯಾಭ್ಯಾಸ ನೀಡಬೇಕೆಂಬ ಕೊಂಗಾಡಿಯಪ್ಪ ಅವರ ಕನಸನ್ನು ನಮ್ಮ ವಿದ್ಯಾಸಂಸ್ಥೆಯೂ ನನಸು ಮಾಡುತ್ತಿದೆ ಎಂದರು. 

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ  ವತಿಯಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉತ್ತಮ ಶಿಕ್ಷಣ ಶಿಕ್ಷಣದಿಂದ ಉತ್ತಮ ದೇಶವನ್ನು ನಿರ್ಮಾಣ ಮಾಡಲು  ಸಾಧ್ಯವಾಗುತ್ತದೆ.         ವಿದ್ಯಾರ್ಥಿಗಳೇ ಶಿಕ್ಷಣದ ಪ್ರಮುಖ ಶಕ್ತಿಯಾಗಿದ್ದಾರೆ.   ಸ್ಪರ್ಧಾ ಜಗತ್ತಿಗೆ ಅನುಗುಣವಾಗಿ ಶೈಕ್ಷಣಿಕ ಮಹತ್ವವನ್ನು ಅರಿತು  ವಿದ್ಯಾರ್ಥಿಗಳಿಗೆ ಕಲಿಸಬೇಕಾಗಿದೆ ಎಂದರು. 

ಕಾರ್ಯಕ್ರಮದಲ್ಲಿ  ಶ್ರೀಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎ.ಆರ್.ರಾಜಶೇಖರ್, ಖಜಾಂಚಿ ಎ.ರಾಮಶೆಟ್ಟಿ, ನಿರ್ದೇಶಕರುಗಳಾದ ಸಿ.ಎಸ್.ಜಗದೀಶಬಾಬು, ಕೆ.ಎಂ.ಕೃಷ್ಣಮೂರ್ತಿ, ಜೆ.ಲಲಿತಮ್ಮ. ಕೆ.ಸುನಂದಮ್ಮ, ಎಸ್.ರಾಜಲಕ್ಷ್ಮಿ,  ಜೆ.ಬಿ.ಮಹೇಶ್, ಎಸ್.ಪ್ರಕಾಶ್,  ರುಕ್ಮಿಣಿ, ಕೊಂಗಾಡಿಯಪ್ಪ ಪ್ರೌಢಶಾಲೆಯ ಮುಖ್ಯಶಿಕ್ಷಕ ಎ.ಜಯರಾಮ್. ಸಹ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಪ್ರತಿಭಾವಂತರಿಗೆ ಅಭಿನಂದನೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲಾಮಟ್ಟದಲ್ಲಿ ಉತ್ತಮ ಅಂಕಗಳನ್ನು ಪಡೆದ ಸಿ.ನರೇಂದ್ರಬಾಬು, ಪಿ.ಹರ್ಷವರ್ಧನ್,  ವರಪ್ರಸಾದ್, ಎಂ.ನಂದಿನಿ ಮತ್ತು  ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಕೆ.ಚಂದನಾ, ಕೆ.ನವ್ಯ, ವಿ.ಮೇಘನಾ, ಡಿ.ಎಸ್.ನಂದಿನಿ, ಸಂಸ್ಕೃತ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ  ಕೆ.ಧನ್ಯ, ಹಿಂದಿ ಭಾಷೆಯಲ್ಲಿ 100 ಅಂಕಗಳಿಗೆ 100 ಅಂಕಗಳನ್ನು ಪಡೆದ ತ್ರಿವೇಣಿ, ತನಿಷ್ಕ, ಯು.ಪ್ರಿಯದರ್ಶಿನಿ, ಸುಭಾಷ್, ಕೀರ್ತನಾ, ವಿಜಯಕುಮಾರ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಶಾಲಾ ಹಂತದಲ್ಲಿ  ಅಗ್ರಶ್ರೇಣಿಯಲ್ಲಿ ತೇರ್ಗಡೆಯಾದ 22 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!