ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿನ ಅಡುಗೆ ಅನಿಲ ಸೋರಿಕೆಯಾಗಿ ಹಲವು ಮಂದಿ ಗಾಯಗೊಂಡಿರುವ ಪ್ರಕರಣ ಮಾಸುವ ಮುನ್ನವೆ, ಬಾಶೆಟ್ಟಹಳ್ಳಿಯ ವಿನಾಯಕ ನಗರದಲ್ಲಿ ಇಂದು ಬೆಳಗ್ಗೆ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ವ್ಯಾಪಿಸಿ ಮೂವರಿಗೆ ಗಾಯಗಳಾಗಿವೆ.
ಉತ್ತರಪ್ರದೇಶ ಮೂಲದ ಮೂರು ಮಂದಿ ಯುವಕರು ವಿನಾಯಕ ನಗರದಲ್ಲಿ ಒಟ್ಟಾಗಿ ವಾಸವಿದ್ದು, ಅಡುಗೆ ಬಳಕೆಗೆ ಸಿಲಿಂಡರ್ ಬಳಸಿದ್ದಾರೆ. ರಾತ್ರಿ ಮಲಗುವ ಮುನ್ನ ಸಿಲಿಂಡರ್ ಆಫ್ ಮಾಡಿದ್ದರು ಸಹ ಅನಿಲ ಸೋರಿಕೆಯಾಗಿದ್ದು, ಇಂದು ಬೆಳಗ್ಗೆ ವಿದ್ಯುತ್ ಸ್ವಿಚ್ ಹಾಕಿದಾಗ ಬೆಂಕಿ ಹತ್ತಿಕೊಂಡು ಮೂರು ಜನರಿಗೂ ಗಾಯಗಳಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಶ್ರೇಯಸ್ ನಾಥ್ ಗುಪ್ತ (25 ವರ್ಷ) ಎನ್ನುವ ಯುವಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಉಳಿದ ಮನಂಜಿತ್ (26ವರ್ಷ), ಸಾಗರ್ ಚೌಹಾನ್ (19 ವರ್ಷ) ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ವ್ಯಾಪಿಸಿದ ರಭಸಕ್ಕೆ ಮನೆಯ ಸಿಮೆಂಟ್ ಶೀಟ್ಗಳು ಹಾರಿ ಹೋಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನೆಡೆಸಿದ್ದಾರೆ.
ಕೈಗಾರಿಕಾ ಪ್ರದೇಶ, ಬಾಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಮರು ಭರ್ತಿ ಸಿಲೆಂಡರ್ ಬಳಕೆ ಹಾಗೂ ಅನಧಿಕೃತ ಸಿಲಿಂಡರ್ ಬಳಕೆಯಿಂದ ಈ ರೀತಿಯ ಪ್ರಕರಣಗಳು ಪದೇ ಪದೇ ನಡೆಯಲು ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……