![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶ್ರೀ ಆದಿಗುರು ಶಂಕರಾಚಾರ್ಯರ ಪುತ್ಥಳಿ ಅನಾವರಣ ಮಾಡಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಮೊದಲಿಗೆ ಕೇದಾರನಾಥನ ದರ್ಶನ ಪಡೆದ ಅವರು ಶಂಕರಾಚಾರ್ಯರ ಪುತ್ಥಳಿ ಅನಾವರಣಗೊಳಿಸಿದ್ದಾರೆ.
ನಂತರ ಅಭಿವೃದ್ಧಿಪಡಿಸಲಾದ ಶಂಕರಾಚಾರ್ಯರ ಸಮಾಧಿ ಸ್ಥಳ ವೀಕ್ಷಿಸಿದರು. 400 ಕೋಟಿ ರೂಪಾಯಿ ವೆಚ್ಚದ ಕೇದಾರಪುರಿ ಮರು ನಿರ್ಮಾಣ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಶಂಕರಾಚಾರ್ಯರ ಭವ್ಯ ಪುತ್ಥಳಿಯನ್ನು ನಿರ್ಮಿಸಿದ್ದಾರೆ. 5 ತಲೆಮಾರಿನಿಂದ ಕಲ್ಲಿನ ಕೆತ್ತನೆಯಲ್ಲಿ ಅರುಣ್ ಯೋಗಿರಾಜ್ ಕುಟುಂಬ ನೈಪುಣ್ಯತೆ ಪಡೆದುಕೊಂಡಿದೆ.
ಪ್ರಧಾನಿ ಕಚೇರಿಯಿಂದ ಅವರಿಗೆ ಪುತ್ಥಳಿ ಸ್ಥಾಪನೆಗೆ ತಿಳಿಸಲಾಗಿತ್ತು. 12 ಅಡಿ ಎತ್ತರದ 35 ಟನ್ ತೂಕದ ಶಂಕರಾಚಾರ್ಯರ ಪುತ್ಥಳಿ ಕುಳಿತ ಭಂಗಿಯಲ್ಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……