ದೊಡ್ಡಬಳ್ಳಾಪುರ: ಸಚಿವರಿಗಾಗಿ ಅಂಗನವಾಡಿಗೆ ಮತ್ತೆ ಬಂದ ಮಕ್ಕಳು / ಶಾಲಾವಧಿ ಮುಗಿದ ನಂತರ ಮಕ್ಕಳಿಗೆ ಹೂ ನೀಡಿ ಸ್ವಾಗತ ಕೋರಿದ ಸಚಿವರು…!

ದೊಡ್ಡಬಳ್ಳಾಪುರ: ಕೋವಿಡ್-19ರ ಪಾಸಿಟಿವಿಟಿ ದರ ಶೇ.2ರಷ್ಟು ಕಡಿಮೆ ಇರುವುದರಿಂದ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಯು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ತಿಳಿಸಿರುವ ಹಿನ್ನೆಲೆ, 2021ರ ನವೆಂಬರ್ 08ರಂದು ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳನ್ನು ಪುನಃ ಕೇಂದ್ರಕ್ಕೆ ಆಹ್ವಾನಿಸುವ ಮುಖಾಂತರ ಚಾಲನೆ ನೀಡುವ ಕಾರ್ಯಕ್ರಮ ನಿಗದಿ ಶಾಲಾ ಅವಧಿ ಮುಗಿದ ನಂತರ, ಮತ್ತೆ ಸಚಿವರು ಮಕ್ಕಳನ್ನು ಸ್ವಾಗತ ಕೋರಿದ ಘಟನೆ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಡೆದ ಆದಿನಾರಾಯಣಹೊಸಹಳ್ಳಿ ಗ್ರಾಮದ ಅಂಗನವಾಡಿ ಪುನರ್ ಆರಂಭಕ್ಕೆ ಚಾಲನೆ, ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನೂತನ ಕಟ್ಟಡ ಉದ್ಘಾಟಿಸಲಾಯಿತು.

ಅಂಗನವಾಡಿ ಅವಧಿ 10 ರಿಂದ 12ರ ವರೆಗೆ ನಡೆಸಲು ಆದೇಶಿಸಲಾಗಿದ್ದರು, ಶಾಲಾ ಅವಧಿ ಮುಗಿದ ನಂತರ ಮಕ್ಕಳನ್ನು ಮತ್ತೆ ಕರೆಸಿ. ಸಚಿವರು 3.30 ಗಂಟೆಗೆ ಬಂದ ನಂತರ ಮಕ್ಕಳಿಗೆ ಹೂ ನೀಡಿ ಮತ್ತೆ ಅಂಗನವಾಡಿಗೆ ಸ್ವಾಗತ ಕೋರಿದ್ದು ಪೋಷಕರ ಬೇಸರಕ್ಕೆ ಕಾರಣವಾಯಿತು.

ಈ ವೇಳೆ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿನವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್, ರಾಜ್ಯ ಮಟ್ಟದ ತಜ್ಞರ ಸಮಿತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ರಾಜ್ಯಾದ್ಯಂತ 66,361 ಅಂಗನವಾಡಿ ಕೇಂದ್ರಗಳಲ್ಲಿ ತರಗತಿಗಳನ್ನು ಆರಂಭಿಸಲಾಗಿದೆ. ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿ ಅಂಗನವಾಡಿ ಕೇಂದ್ರದ ಆರಂಭವನ್ನು ಉದ್ಘಾಟಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 12 ರವರೆಗೆ ಅಂಗನವಾಡಿಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಈಗಾಗಲೆ ಅಂಗನವಾಡಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿದ್ದು,ಮಕ್ಕಳ ಪೋಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಇದರೊಂದಿಗೆ ಮಕ್ಕಳ ಪೋಷಕರ ಒಪ್ಪಿಗೆ ಪತ್ರವನ್ನು ಪಡೆಯುವಂತೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯ ಏರುಪೇರು ಆದಲ್ಲಿ ಅಂಗನವಾಡಿ ಕಾರ್ಯಕರ್ತರು ಮೊದಲು ಪೋಷಕರ ಗಮನಕ್ಕೆ ತರಬೇಕು. ಇದರೊಂದಿಗೆ ಮಕ್ಕಳ ಆರೋಗ್ಯ ಏರುಪೇರಾದರೆ ಶೀಘ್ರವೇ  ಅಗತ್ಯ  ಚಿಕಿತ್ಸೆ ನೀಡುವಲ್ಲಿ ಆಯಾ ಜಿಲ್ಲಾಡಳಿತಗಳು ಕ್ರೀಯಾತ್ಮಕವಾಗಿ ಕಾರ್ಯವಹಿಸಲು ಸೂಚನೆ ನೀಡಲಾಗಿದೆ. ಈ ಕುರಿತು ತಾಲ್ಲೂಕು ಆಡಳಿತ, ಸಂಬಂಧಿತ ಇಲಾಖಾ ಅಧಿಕಾರಿಗಳು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದರು. 

ಪೌಷ್ಠಿಕ ಆಹಾರ ನೇರವಾಗಿ ಮನೆಗೆ: ಮುನ್ನೆಚರಿಕೆ ಕ್ರಮವಾಗಿ ಅಂಗನವಾಡಿಯಲ್ಲಿ ಸಿದ್ದ ಆಹಾರಗಳನ್ನು ನೀಡುವುದನ್ನು ನಿಲ್ಲಿಸಲಾಗಿದೆ. ನೇರವಾಗಿ ಮಕ್ಕಳ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಸಂದರ್ಭದಿಂದಲೂ ಈ ಕಾರ್ಯ ಸುಗುಮವಾಗಿ ನಡೆಯುತ್ತಾ ಬಂದಿದೆ. ಕ್ಷೀರ ಭಾಗ್ಯ, ಸೃಷ್ಟಿ ಯೋಜನೆ, ಮಾತೃಪೂರ್ಣ ಯೋಜನೆಗಳ ಫಲಾನುಭವಿಗಳಿಗೂ ಮನೆಗಳಿಗೆ ಪೌಷ್ಠಿಕ ಆಹಾರ ತಲುಪುತಿದೆ. ಇದರೊಂದಿಗೆ ತೀವ್ರ ಅಪೌಷ್ಠಿಕತೆ ಇರುವ ಮಕ್ಕಳಿಗೆ ಪುನರ್ವಸತಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಮೂರು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ರಾಜ್ಯ ಮಟ್ಟದ ತಜ್ಞರ ತಾಂತ್ರಿಕ ಸಮಿತಿಯ ನೀಡಿರುವ ಮಾರ್ಗಸೂಚಿ ಅನ್ವಯದಂತೆ ಅಂಗನವಾಡಿ ಆರಂಭವಾಗಿವೆ ಎಂದರು. 

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ನಮ್ಮ ಜಿಲ್ಲೆಯಲ್ಲೆ ಅಂಗನವಾಡಿ ಕೇಂದ್ರ ಅಂಗನವಾಡಿ ಪುನರ್ ಆರಂಭದ ಉದ್ಘಾಟನೆ ಮಾಡಿ ಚಾಲನೆ ನೀಡಿರುವುದು ಸಂತಸ ತಂದಿದೆ. ಜಿಲ್ಲೆಯಲ್ಲಿ 1,230 ಅಂಗನವಾಡಿ ಕೇಂದ್ರಗಳು ಇಂದು ಆರಂಭವಾಗಿವೆ.ಎಲ್ಲಾ ಅಂಗನವಾಡಿ ಕೇಂದ್ರಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಸರ್ಕಾರದ ಮಾರ್ಗ ಸೂಚಿಗಳಂತೆ ಮಕ್ಕಳ ಆರೋಗ್ಯ ತಪಾಸಣೆ, ಆರೋಗ್ಯ ಏರುಪೇರಾದಾಗ ಸೂಕ್ತ ಚಿಕಿತ್ಸೆ ನೀಡಿ ಕೂಡಲೆ ಫೋಷಕರಿಗೆ ತಿಳಿಸಿ. ಈ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಆಡಳಿತ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜು, ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಡಿ.ಸಿದ್ದರಾಮಯ್ಯ, ಕೆಎಂಎಫ್ ನಿರ್ದೆಶಕ ಬಿ.ಸಿ.ಆನಂದ್ ಕುಮಾರ್, ಸಿಡಿಪಿಒ ಅನಿತಾಲಕ್ಷ್ಮೀ, ಬಿಜೆಪಿ ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ತಾಲ್ಲೂಕು ಅಧ್ಯಕ್ಷ ನಾಗರಾಜು ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ (Ivot

[ccc_my_favorite_select_button post_id="104093"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!