![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ನವದೆಹಲಿ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ನ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶನಿವಾರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಈ ಘಟನೆಯು ಸರ್ಕಾರ ರಾಷ್ಟ್ರವನ್ನು ರಕ್ಷಿಸಲು ಮಿಸ್ಟರ್ 56 ಅಸಮರ್ಥವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುತ್ತದೆ ಎಂದು ಆರೋಪಿಸಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮಣಿಪುರದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯು ಮೋದಿ ಸರ್ಕಾರಕ್ಕೆ ರಾಷ್ಟ್ರವನ್ನು ರಕ್ಷಿಸುವ ಸಾಮರ್ಥ್ಯವಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹುತಾತ್ಮರಿಗೆ ನನ್ನ ಸಂತಾಪ ಮತ್ತು ಅವರ ಕುಟುಂಬಗಳಿಗೆ ಸಂತಾಪಗಳು. ರಾಷ್ಟ್ರವು ನಿಮ್ಮ ತ್ಯಾಗವನ್ನು ಸ್ಮರಿಸುತ್ತದೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಅಸ್ಸಾಂ ರೈಫಲ್ಸ್ನ ಖುಗಾ ಬೆಟಾಲಿಯನ್ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಮತ್ತು ಅರೆಸೈನಿಕ ಪಡೆಯ ನಾಲ್ವರು ಸಿಬ್ಬಂದಿ ಶನಿವಾರ ಮಣಿಪುರದಲ್ಲಿ ನಡೆದ ಹೊಂಚುದಾಳಿಯಲ್ಲಿ ಹುತಾತ್ಮರಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……