ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿಸೆಂಬರ್ 10ರಂದು ಮತದಾನ: ಕೆ.ಶ್ರೀನಿವಾಸ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ ಘೋಷಿಸಲಾಗಿದ್ದು, ಡಿಸೆಂಬರ್‌ 10 ರಂದು ಮತದಾನ ಹಾಗೂ ಡಿಸೆಂಬರ್‌ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದರು.

hulukudi maharathotsava
Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆಯ ಸಂಬಂಧ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರನ್ವಯ 2021ರ ನವೆಂಬರ್ 16ರ ಮಂಗಳವಾರದಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರಗಳನ್ನು ಸಲ್ಲಿಸಲು 2021ರ ನವೆಂಬರ್ 23ರ ಮಂಗಳವಾರ ಕೊನೆಯ ದಿನವಾಗಿದ್ದು, 2021ರ ನವೆಂಬರ್ 24ರ ಬುಧವಾರ ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು 2021ರ ನವೆಂಬರ್ 26ರ ಶುಕ್ರವಾರ ಕೊನೆಯ ದಿನವಾಗಿದೆ. 2021ರ ಡಿಸೆಂಬರ್ 10ರ ಶುಕ್ರವಾರ ಬೆಳಿಗ್ಗೆ 8.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಮತದಾನ ನಡೆಯಲಿದ್ದು, 2021ರ ಡಿಸೆಂಬರ್ 14ರ ಮಂಗಳವಾರ ಬೆಳಿಗ್ಗೆ 8.00 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಹಾಗೂ 2021ರ ಡಿಸೆಂಬರ್ 16ರ ಗುರುವಾರದಂದು ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

Hulukudi mahajathre
Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಮತ್ತು ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಒಳಪಟ್ಟಿವೆ ಎಂದರಲ್ಲದೆ, 2021ರ ನವೆಂಬರ್ 11 ರಂದು ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಪ್ರಕಟಿಸಲಾಗಿದ್ದು, ಅದರನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಈ ಕ್ಷೇತ್ರದಲ್ಲಿ ಒಟ್ಟು 3898 ಮತದಾರರಿದ್ದು, ಈ ಪೈಕಿ 1862 ಪುರುಷ ಮತದಾರರು ಹಾಗೂ 2036 ಮಹಿಳೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು, ರಾಮನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಆರಕ್ಷಕ ಉಪ ಆಯುಕ್ತರು, ಈಶಾನ್ಯ ವಲಯದವರೊಂದಿಗೆ ಸುಧೀರ್ಘವಾಗಿ ಸಮಾಲೋಚಿಸಿ, ಈ ಕ್ಷೇತ್ರದ ಒಟ್ಟು ಮತಗಟ್ಟೆಗಳ ಪೈಕಿ ಅತಿ ಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಿಗೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಹೋಂ ಗಾರ್ಡ್ಸ್ ಸೇರಿದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗುವುದು ಎಂದರು.

ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ಮಾನದಂಡಗಳ ಮೇರೆಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಚುನಾವಣಾ ವೀಕ್ಷಕರುಗಳೊಂದಿಗೆ ಚರ್ಚಿಸಿ, ಈ ಜಿಲ್ಲೆಯಲ್ಲಿ Vulnerable ಮತಗಟ್ಟೆಗಳನ್ನು ಗುರುತಿಸಿ, ಅಂತಹ ಮತಗಟ್ಟೆಗಳಿಗೆ ವಿಶೇಷ ಭದ್ರತೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರ ಸಹಯೋಗದೊಂದಿಗೆ “ನಿಯೋಜನಾ ಯೋಜನೆ” (ಡೆಪ್ಲಾಯಿಮೆಂಟ್ ಪ್ಲಾನ್) ತಯಾರಿಸಲಾಗುವುದು ಹಾಗೂ ಮೈಕ್ರೋ ವೀಕ್ಷಕರನ್ನು, ವಿಡಿಯೋ ಗ್ರಾಫರ್‌ಗಳನ್ನು ನೇಮಕ ಮಾಡುವುದಲ್ಲದೆ, ಆಯ್ದ ಮತಗಟ್ಟೆಯಲ್ಲಿ ವೆಬ್ ಕ್ಯಾಮರಾ ಮುಖಾಂತರ ಮತಗಟ್ಟೆಯ ಆಗು ಹೋಗುಗಳನ್ನು ಸೆರೆಹಿಡಿಯುವುದು ಮುಂತಾದ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ತಿಳಿಸಿದರು.

ಈ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಒಬ್ಬ ಪಿ.ಆರ್.ಓ. ಮತ್ತು ಒಬ್ಬ ಮತಗಟ್ಟೆ ಅಧಿಕಾರಿ ಲೆಕ್ಕದಲ್ಲಿ, ಶೇ.10 ರಷ್ಟು ಮೀಸಲು ಸೇರಿ, ಒಟ್ಟು 600 ಸಿಬ್ಬಂದಿಯ ಸೇವೆಯು ಅವಶ್ಯಕತೆ ಇದ್ದು, ಈ ಸಿಬ್ಬಂದಿಯು ಈ ಕ್ಷೇತ್ರದ 8 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಲಭ್ಯವಿದ್ದು, ನೇಮಕಾತಿಗೆ ಕ್ರಮ ವಹಿಸಲಾಗುತ್ತಿದೆ. ಸದರಿ ಸಿಬ್ಬಂದಿಗಳಿಗೆ ಮಾಸ್ಟರ್ ಟ್ರೈನರ್ಸ್ ಗಳ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳಿಗೆ ಮತ್ತು ಮತದಾನ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ತಲುಪಿಸುವ ಕಾರ್ಯಕ್ಕಾಗಿ ಈ ಕ್ಷೇತ್ರಕ್ಕೆ ಅವಶ್ಯವಿರುವ ಬಸ್ ಮತ್ತು ಮಿನಿ ಬಸ್‌ಗಳನ್ನು ಕೆ.ಎಸ್.ಆರ್.ಟಿ.ಸಿ. ಅವರ ಮುಖಾಂತರ ಪಡೆದುಕೊಳ್ಳಲು ಹಾಗೂ ಜೀಪ್/ ವ್ಯಾನ್‌ಗಳನ್ನು ವಿವಿಧ ಇಲಾಖೆಗಳಿಂದ ಪಡೆದು ಸಂಬಂಧಪಟ್ಟವರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರಲ್ಲದೆ, ಮಾದರಿ ನೀತಿ ಸಂಹಿತೆ ಅನುಷ್ಠಾನದ ವಿಚಾರವಾಗಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಚುನಾವಣೆ ಸಂಬಂಧ “ದೂರು ನಿರ್ವಹಣಾ ಮತ್ತು ಸಹಾಯವಾಣಿ ಕೇಂದ್ರ”ವನ್ನು(Complaint Monitoring Cell) ಸ್ಥಾಪಿಸಲಾಗಿದ್ದು, ಈ ಘಟಕದಲ್ಲಿ 2 ಪಾಳಿಗಳಲ್ಲಿ (shift) ಕಾರ್ಯ ನಿರ್ವಹಿಸಲು ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಅದರಂತೆ, ಈ ಕ್ಷೇತ್ರದ 2 ಜಿಲ್ಲೆಗಳ 8 ತಾಲ್ಲೂಕು ಕಚೇರಿಗಳಲ್ಲೂ ದೂರು ನಿರ್ವಹಣಾ ಕೇಂದ್ರಗಳನ್ನು ತೆರೆದು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಚುನಾವಣೆಯಿಂದ ಭಾವಚಿತ್ರವಿರುವ ಮತಪತ್ರವನ್ನು ಆಯೋಗವು ಜಾರಿಗೆ ತಂದಿರುವುದರಿ,ದ, ಮತಪತ್ರದಲ್ಲಿ ಅಭ್ಯರ್ಥಿಗಳ ಹೆಸರಿನ ಮುಂದೆ ಭಾವಚಿತ್ರವನ್ನು ಸಹ ಮುದ್ರಿಸಲಾಗುವುದು ಎಂದರಲ್ಲದೆ, ಪ್ರಸ್ತುತ ಚುನಾವಣೆಯಲ್ಲಿ ಮತದಾನಕ್ಕೆ ಮತಪಟ್ಟಿಗೆಗಳನ್ನು ಬಳಸಲಾಗುತ್ತಿದ್ದು, ಈ ಚುನಾವಣೆಯಲ್ಲಿ NOTA (None of the above) ಜಾರಿಯಲ್ಲಿ ಇರುವುದಿಲ್ಲ ಹಾಗೂ ಮತಪತ್ರದಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳ ಹೆಸರಿನ ನಂತರ ಕೊನೆಯ ಅಂಕಣದಲ್ಲಿ NOTA ಎಂಬುದನ್ನು ನಮೂದು ಮಾಡಲಾಗುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರ-17ಕ್ಕೆ ಸಂಬಂಧಿಸಿದಂತೆ ಈ ಕ್ಷೇತ್ರಕ್ಕೆ ಒಳಪಡುವ ಎರಡೂ ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಧೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!