Site icon ಹರಿತಲೇಖನಿ

ದೊಡ್ಡಬಳ್ಳಾಪುರ: ಗಾರ್ಮೆಂಟ್ಸ್ ಗಳಲ್ಲಿ ಬಟ್ಟೆ ಕದಿಯುತ್ತಿದ್ದವರ ಪತ್ತೆ ಹಚ್ಚಿದ ಗ್ರಾಮಾಂತರ ಠಾಣೆ ಪೊಲೀಸರು / ಇಬ್ಬರ ಬಂಧನ

Channel Gowda
Hukukudi trust

ದೊಡ್ಡಬಳ್ಳಾಪುರ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಬಟ್ಟೆ ಕದ್ದು, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Aravind, BLN Swamy, Lingapura

ಕೈಗಾರಿಕಾ ಪ್ರದೇಶದಲ್ಲಿನ ಸ್ಕಾರ್ಟ್ಸ್ ಮತ್ತು ಬಾಂಬೆ ರೆಯಾನ್ ಕಾರ್ಖಾನೆಯಲ್ಲಿ ಸುಮಾರು 1 ಲಕ್ಷ 50 ಸಾವಿರ ಮೌಲ್ಯದ ರೆಡಿ ಮೇಡ್ ಬಟ್ಟೆಗಳನ್ನು ಕದ್ದಿರುವ ಕುರಿತು ದೂರು ದಾಖಲಾಗಿತ್ತು ಎ‌ನ್ನಲಾಗಿದೆ.

ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದ ತಂಡ ಹಲವು ಕೋನಗಳಲ್ಲಿ ತನಿಖೆ ನಡೆಸಿದ್ದು, ಆರೋಪಿಗಳು ವಾಟ್ಸಪ್ ಮೂಲಕ ಬಟ್ಟೆ ಮಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

Aravind, BLN Swamy, Lingapura

ಈ ಕುರಿತಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version