Site icon ಹರಿತಲೇಖನಿ

ಸೃಜನಾತ್ಮಕ ವ್ಯಕ್ತಿಯಾಗಿ ರೂಪುಗೊಳ್ಳಲು ಕಲೆ ಸಹಕಾರಿ: ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಸೃಜನಾತ್ಮಕ ವ್ಯಕ್ತಿಯಾಗಿ ರೂಪುಗೊಳ್ಳಲು ಕಲೆ ಸಹಕಾರಿಯಾಗಲಿರುವುದರಿಂದ ಯುವಜನತೆ ವಿದ್ಯಾಭ್ಯಾಸದೊಂದಿಗೆ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿನ ಕಲೆಯ ಅನಾವರಣಕ್ಕೆ ಸಾಕ್ಷಿಯಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ ಅವರು ಹೇಳಿದರು. 

Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ 2021-22ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ, ಜಲಸಂರಕ್ಷಣೆ, ಭಾರತ ಸಂವಿಧಾನವು ಭಾರತ ಸಂವಿಧಾನ ರಚನಾ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26 ನೇ ನವೆಂಬರ್ 1949ರ ಸವಿನೆನಪಿಗಾಗಿ “ನವೆಂಬರ್ 26ರ ಭಾರತ ಸಂವಿಧಾನ ದಿನದ ಆಚರಣೆ” ಅಂಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ, ಅವರು ಮಾತಾನಾಡಿದರು.

ಕಲೆಗೆ ಯಾವುದೇ ರೀತಿಯ ಗಡಿರೇಖೆ ಇಲ್ಲದಿರುವುದರಿಂದ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಆದರೆ ಆಯ್ಕೆ ಮಾಡಿಕ್ಕೊಳ್ಳುವುದು ಕೆಲವರನ್ನು ಮಾತ್ರ. ಕಲಾವಿದರಾಗಿ ರೂಪುಗೊಳ್ಳುವ ಹಾದಿ ಹೆಚ್ಚು ಕಠಿಣವಾಗಿತ್ತದೆ ಎಂದರು.

Aravind, BLN Swamy, Lingapura

ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ನೃತ್ಯ ಪ್ರಕಾರಗಳಲ್ಲಿ, ಯುವಜನರು ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ದೇಶೀಯ ಕಲೆಗಳಿಗೂ ಆದ್ಯತೆ ನೀಡಿ, ವೇದಿಕೆಯನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಭರತನಾಟ್ಯ, ಯಕ್ಷಗಾನ, ಕುಚುಪುಡಿ, ಕಥಕ್ ಸೇರಿದಂತೆ ಶಾಸ್ತ್ರೀಯ ನೃತ್ಯ ಶೈಲಿಗೆ ಅದರದ್ದೇ ಆದ ಕ್ರಮಬದ್ಧ ಅಧ್ಯಯನ ಹಾಗೂ ಪರಂಪರೆ ಇದೆ. ಯುವ ಜನರು ಯಾವುದಾದರೂ ಒಂದು ಕಲೆಯಲ್ಲಿ ತೊಡಗಿಸಿಕೊಂಡರೆ ಸಂಗಾತಿಯಂತೆ ಜೊತೆಗಿರುತ್ತದೆ ಹಾಗೂ ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಕೃಷ್ಣಪ್ಪ ಮಾತನಾಡಿ ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನವೆಂದರೆ ಅದು “ಭಾರತ ಸಂವಿಧಾನ” ಎಂದರೆ ತಪ್ಪಾಗಲಾರದು. ನಮ್ಮ ಸಂವಿಧಾನದಲ್ಲಿರುವ ವಿಷಯಗಳಿಂದಾಗಿ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವ ಸಂದರ್ಭ ನಿರ್ಮಾಣವಾಗಿದ್ದು, ಸಮಾನತೆ, ಭ್ರಾತೃತ್ವ, ಜಾತ್ಯಾತೀತ ಹಾಗೂ ಮಾನವೀಯ ಮೌಲ್ಯಗಳನ್ನು ರೂಪಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಹಿರಿಮೆಗೆ ಪಾತ್ರವಾಗಿದೆ ಎಂದು ಹೇಳಿದರು. 

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಆಶಯದೊಂದಿಗೆ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯ ನೀಡುವ ಮೂಲಕ ನೆಮ್ಮದಿಯುತ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದೆ, ಇಂತಹ ವೇದಿಕೆ ಕಾರ್ಯಕ್ರಮಗಳು ಯುವಜನರಲ್ಲಿ ಉತ್ಸಾಹ ಹಾಗೂ ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.

ಯುವಜನೋತ್ಸವ ಕಾರ್ಯಕ್ರಮಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ಎಂ.ಆರ್.ನರಸಿಂಹಯ್ಯ, ಯೋಜನಾ ನಿರ್ದೇಶಕ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಜಿ.ನಾಗರಾಜ್, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಕಾರ್ಯಕ್ರಮದ ತೀರ್ಪುಗಾರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version