ಬೆಂಗಳೂರು: ಮದುವೆಗಳು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎನ್ನುವಂತೆ ಇಂದು ಕಲ್ಯಾಣನಗರಿ ಶ್ರೀ ಕ್ಷೇತ್ರ ಕೈವಾರದಲ್ಲಿ ಅಪರೂಪದ ಮದುವೆಯೊಂದು ನಡೆದಿದೆ.
ಫೋಟೋ ನೋಡಿದಾಕ್ಷಣ ಇದು ಮಕ್ಕಳ ಮದುವೆ ಎನ್ನುವಂತಿದೆ. ಅದರೆ ಗಂಡಿಗೆ 28 ವರ್ಷ ಹೆಣ್ಣಿಗೆ 25 ವರ್ಷವಾಗಿದ್ದರು ನೋಡಲು ವಾಮನ ಮೂರ್ತಿ ಗಳಂತೆ ಚಿಕ್ಕದಾಗಿ ಕಾಣುತ್ತಾರೆ.
ಹಸೆಮಣೆ ಏರಿದ ಗಂಡು ವಿಷ್ಣು ಬೆಂಗಳೂರಿನವರು. ಹೆಣ್ಣು ಜ್ಯೋತಿ ಕೋಲಾರ ಮೂಲದವರು. ಇಬ್ಬರೂ ಪದವೀಧರರಾಗಿದ್ದು, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.
ವಿಶೇಷವಾಗಿ ಕಂಡ ಅಪರೂಪದ ಜೋಡಿ ಕ್ಷೇತ್ರಕ್ಕೆ ಬಂದ ಭಕ್ತಾದಿಗಳನ್ನು ಆಕರ್ಷಿಸಿದರು. ಇವರ ದಾಂಪತ್ಯ ಜೀವನ ಅನ್ಯೋನ್ಯವಾಗಿ ಸಂತೋಷವಾಗಿರಲಿ ಎಂದು ಹಾರೈಸಿದರು.
ಸದ್ಗುರು ತಾತಯ್ಯನವರ ಸನ್ನಿಧಿಯಲ್ಲಿ ಮದುವೆಯಾದದ್ದು ನಮ್ಮ ಸೌಭಾಗ್ಯವೆಂದ ನೂತನ ವಧು-ವರರು. ಅರಿಶಿನ ಸೇವೆಯಲ್ಲಿ ಭಾಗವಹಿಸಿ ತಾತಯ್ಯನವರ ಆಶೀರ್ವಾದವನ್ನು ಪಡೆದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….