ಬಿಬಿಎಂಪಿ ಕಸ ಮಾಫಿಯಕ್ಕೆ ಗ್ರಾಮೀಣ ಜನರ ಆರೋಗ್ಯ ಹಾಳಾಗುತ್ತಿದೆ: ಸಿದ್ಧರಾಮ ಚೈತನ್ಯಸ್ವಾಮಿ

Channel Gowda
Hukukudi trust

ದೊಡ್ಡಬಳ್ಳಾಪುರ: ಕಸ ಟೆಂಡರ್ ಪಡೆದವರ ಏಕೈಕ ಉದ್ದೇಶ ಬೆಂಗಳೂರು ನಗರದಿಂದ ಕಸ ಹೊರ ಹೋಗಬೇಕು ಎನ್ನುವುದೇ ಹೊರತು ಕಸದ ರಾಶಿ ಹಾಕುವ ಪ್ರದೇಶದಲ್ಲಿನ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ ಎಂದು ಕುಣಿಗಲ್ ತಾಲ್ಲೂಕಿನ ಕಿತ್ನಾಮಂಗಲ-ಕಾಡುಮತ್ತಿಕೆರೆ ಶ್ರೀಅರೆಶಂಕರಮಠದ ಸಿದ್ಧರಾಮಚೈತನ್ಯ ಮಹಾಸ್ವಾಮೀ ದೂರಿದ್ದಾರೆ.

hulukudi maharathotsava
Aravind, BLN Swamy, Lingapura

ತಾಲ್ಲೂಕಿನ ಚಿಗರನೇಹಳ್ಳಿಯ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಗ್ರಾಮಸ್ಥರು ನಡೆಸುತ್ತಿರುವ ಧರಣಿಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದರು.

ಅವೈಜ್ಞಾನಿಕ ಕಸ ವಿಲೇವಾರಿಯಿಂದಾಗಿ ಇಲ್ಲಿನ ಗ್ರಾಮಗಳ ಜನರ ಬದುಕು ನರಕಮಯವಾಗಿದೆ. ಈ ಕುರಿತಂತೆ ಹಲವಾರು ಬಾರಿ ಪ್ರತಿಭಟನೆಗಳನ್ನು ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವಕಾಶ ನೀಡಿದ್ದಾರೆ. ಅದರೂ ಸಹ ತಮ್ಮ ತಪ್ಪುಗಳನ್ನು ತಿದ್ದಿಕೊಂಡಿಲ್ಲ. ಹೀಗಾಗಿ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸುವವರೆಗೂ ಧರಣಿಯನ್ನು ಮುಂದುವರೆಸುವುದೇ ಅಂತಿಮ ನಿರ್ಧಾರವಾಗಬೇಕಿದೆ. ಜನಪರವಾದ ಹೋರಾಟಗಳನ್ನು ನಡೆಸುವ ಮುಂದಾಳತ್ವವಹಿಸುವವರ ಮೇಲೆ ಆರೋಪಗಳು ಬರುವುದು ಸಹಜ. ಈ ಎಲ್ಲಾ ಆರೋಪಗಳನ್ನು ಮೆಟ್ಟಿನಿಂತಾಗ ಮಾತ್ರ ನಮ್ಮ ಮತ್ತು ನಮ್ಮ ಮುಂದಿನ ಪೀಳಿಗೆಯ  ಜನರ ಬದುಕು ಸುಧಾರಿಸಲು ಸಾಧ್ಯ. ನಮ್ಮ ಸುತ್ತಲಿನ ಪರಿಸರ ಕೆಟ್ಟರೆ ಮತ್ತೆ ಸರಿಪಡಿಸಲು ದಶಕಗಳೇ ಬೇಕಾಗಲಿದೆ. ಕಸದ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ರಾಜಕೀಯ ಲಾಭಗಳನ್ನು ಹುಡುಕದೆ ಪ್ರಮಾಣಿಕ ಹೋರಾಟ ನಡೆಸಬೇಕಿದೆ ಎಂದರು.

Hulukudi mahajathre
Aravind, BLN Swamy, Lingapura

ಧರಣಿಯ ಮುಂದಾಳತ್ವ ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸಿದ್ದಲಿಂಗಯ್ಯ ಮಾತನಾಡಿ, 2015 ರಿಂದಲೆ ಕಸ ವಿಲೇವಾರಿಯನ್ನು ವಿರೊಧಿಸುತ್ತಲೇ ಬಂದಿದ್ದೇವೆ. ದಿನಕ್ಕೆ 400 ಮೆಟ್ರಿಕ್ ಟನ್ ಕಸ ವಿಲೇವಾರಿ ಮಾಡುವುದಾಗಿ ಹೇಳಲಾಗಿತ್ತು. ಈಗ ಘಟಕದ ಕಸ ವಿಲೇವಾರಿ ಸಾಮರ್ಥ್ಯವನ್ನು ಮೀರಿ ದಿನಕ್ಕೆ 4,500 ಸಾವಿರ ಮೆಟ್ರಿಕ್ ಟನ್ ಬೆಂಗಳೂರಿನ ಕಸವನ್ನು ಇಲ್ಲಿಗೆ ತಂದು ಸುರಿಯಲಾಗುತ್ತಿದೆ. ನಮ್ಮ ಗ್ರಾಮಗಳಿಗೆ ಬಿಬಿಎಂಪಿ ನೀಡುವ ಸೌಲಭ್ಯಗಳು ಬೇಕಿಲ್ಲ. ಎಂಎಸ್ ಪಿ ಘಟಕವನ್ನು ಇಲ್ಲಿಂದ ಎತ್ತಂಗಡಿ ಮಾಡಿ ನಮ್ಮ ಬದುಕನ್ನು ಉಳಿಸಲಿ ಎಂದು ಆಗ್ರಹಿಸಿದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಹಾಗೂ ಜೆಡಿಎಸ್ ಮುಖಂಡ ಹರೀಶ್ ಗೌಡ ಧರಣಿ ಸ್ಥಳಕ್ಕೆ ಭೇಟಿ ಮಾಹಿತಿ ಪಡೆದಿದ್ದಲ್ಲದೆ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್, ಮುಖಂಡರಾದ ಅಶ್ವತ್ಥನಾರಾಯಣ, ದೇವರಾಜಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಲತಾ,ಪ್ರಸನ್ನ ಸೇರಿದಂತೆ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಕದ್ದುಮುಚ್ಚಿ ಭೇಟಿ: ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಇಷ್ಟೊಂದು ದಾರಿತಪ್ಪಿ ನಡೆಯಲು  ಪರಿಸರ ಮಾಲಿನ್ಯ ನಿಯಂತ್ರ ಮಂಡಲಿಯರವರೇ ಹೊಣೆ. ಹೀಗಾಗಿ ಇಲ್ಲಿಗೆ ಭೇಟಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಧರಣಿ ನಿರತರಿಗೆ ತಿಳಿಯದಂತೆ ಎಂಎಸ್ ಜಿಪಿ ಘಟಕ ಪ್ರವೇಶ ಮಾಡಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಪರಿಸರ ಅಧಿಕಾರಿ ಸುನಿತಾ, ಸಹಾಯಕ ಅಧಿಕಾರಿ ವಾಣಿ ಅವರನ್ನು ಹಿಂಬಾಲಿಸಿ ಹೋಗಿ ಕಸದಿಂದ ಹೊರ ಬಂದಿರುವ ಕಲುಷಿತ ನೀರನ್ನು ಸಂಗ್ರಹ ಮಾಡಿಕೊಳ್ಳುವಂತೆ ಹಾಗೂ ಅಲ್ಲಿನ ವಾಸ್ತವ ಸ್ಥಿತಿಯ ಕುರಿತು ವರದಿ ನೀಡುವಂತೆ ಮನವಿ ಮಾಡಿದರು.

‘ಇಲ್ಲಿನ ಕಸ ವಿಲೇವಾರಿ ಘಟಕದಿಂದ ಆಗುತ್ತಿರುವ ತೊಂದರೆಗಳ ಕುರಿತಂತೆ ಹಲವಾರು ಬಾರಿ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳಿಗೆ ನೋಂದಾಯಿತ ಅಂಚೆ ಮೂಲಕ ದೂರು ನೀಡಿದ್ದರು ಒಂದು ಪತ್ರಕ್ಕು ಉತ್ತರ ನೀಡಿಲ್ಲ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮಾಡಿಲ್ಲ. ಧರಣಿ ಆರಂಭಿಸಿದ್ದರಿಂದ ಇಂದು ಇಲ್ಲಿಗೆ ಭೇಟಿ ನೀಡಿದ್ದೀರಿ. ಈಗಲಾದರು ಸರಿಯಾದ ರೀತಿಯಲ್ಲಿ ವರದಿ ನೀಡಿ’ ಎಂದು  ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಉತ್ತರಿಸಿದ ಪರಿಸರ ನಿಯಂತ್ರಣ ಮಂಡಲಿ ಅಧಿಕಾರಿಗಳಾದ ಸುನಿತಾ ‘ನಮಗೆ ಇದುರೆಗೂ ಯಾವುದೇ ಮನವಿಯು ಬಂದಿಲ್ಲ’ ಎಂದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ಮಾಧ್ಯಮದಲ್ಲಿ ಸ್ಟೋರಿನ ಪ್ಲಾಂಟ್ ಮಾಡಿಸ್ತಾರೆ, ನಡ್ಡಾ ಭೇಟಿ ಯಾದೆವು, ಆದ್ರೆ ಅವರು ಯಾವುದೇ ಫೋಟೋ ಬೇಡ ಎಂದರು ಎನ್ನುತ್ತಾರೆ. ಅವರು ಯಾರನ್ನೂ ಭೇಟಿಯೇ ಆಗಿಲ್ಲ ಎಂದರು. ಈ ಆಟಗಳನ್ನು ಬಿಡಲಿಲ್ಲ ಅಂದರೆ ಈ ರಾಜ್ಯದ

[ccc_my_favorite_select_button post_id="102289"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!