ಬಿಬಿಎಂಪಿ ಕಸ ಕಂಟಕದ ವಿರುದ್ದ ಧರಣಿ 6ನೇ ದಿನ: ಜನ ಬೆಂಬಲ ದೊರಕದಿದ್ದರೆ ಪೊಲೀಸರ ಬಲಪ್ರಯೋಗದ ಸಾಧ್ಯತೆ

Channel Gowda
Hukukudi trust

ದೊಡ್ಡಬಳ್ಳಾಪುರ: ತಾಲೂಕಿನ ಚಿಗರೇನಹಳ್ಳಿಯ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ನಿರ್ವಹಣೆ ಘಟಕವನ್ನು ನಿಲ್ಲಿಸುವಂತೆ ನವ ಬೆಂಗಳೂರು ಹೋರಾಟ ಸಮಿತಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಯತಿವತಿಯಿಂದ ನಡೆಸುತ್ತಿರುವ ಧರಣಿ ಇಂದಿಗೆ 6ದಿ‌ನಕ್ಕೆ ಕಾಲಿಟ್ಟಿದೆ.

hulukudi maharathotsava
Aravind, BLN Swamy, Lingapura

ಆರಂಭಿಕ ದಿನಗಳಲ್ಲಿ ಸಿಕ್ಕ ಜನ ಬೆಂಬಲ ಹಾಗೂ ಅಧಿಕಾರಿಗಳ ಸ್ಪಂದನೆ ದಿನೇದಿನೇ ಕಡಿಮೆಯಾಗುತ್ತಿದ್ದು, ಪೊಲೀಸರ ಬಲ ಪ್ರಯೋಗದ ಸಾಧ್ಯತೆ ಕೇಳಿಬರುತ್ತಿದೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂಎಸ್ ಜಿಪಿಗೆ ಬರುತ್ತಿರುವ ತ್ಯಾಜ್ಯ ಹಾಗೂ ಅವೈಜ್ಞಾನಿ ಮತ್ತು ಅನುಮಾನಾಸ್ಪದ  ನಿರ್ವಹಣೆ ಈ ವ್ಯಾಪ್ತಿಯಲ್ಲಿನ ಜನರನ್ನು ಬಹಳಷ್ಟು ಸಂಕಷ್ಟಕ್ಕೆ ದೂಡಿದೆ.

Hulukudi mahajathre
Aravind, BLN Swamy, Lingapura

ಈ ಕುರಿತು ಘಟಕ ಮುಚ್ಚಿಸಲು ಹಲವು ಹೋರಾಟ, ಧರಣಿ ನಡೆದರು ಫಲಿತಾಂಶ ಮಾತ್ರ ಶೂನ್ಯ ಎಂಬುದು ತಾಲೂಕಿನ ಜನರಿಗೆ ತಿಳಿದಿರುವ ವಾಸ್ತವ.

ಈ ಮುಂಚೆ ಕಾರ್ಯನಿರ್ವಹಿಸುತ್ತಿದ್ದ ಟೆರ್ರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಪದೇ ಪದೇ ಬೆಂಕಿ ಅವಘಡ ಎಂಬ ಕಾರಣದಿಂದ ಈ ವ್ಯಾಪ್ತಿಯ ಜನತೆ ಭರಿಸಲಾಗದ ಹೊಗೆಯಿಂದ ತೀವ್ರವಾಗಿ ಪರದಾಡಬೇಕಿತ್ತು. ಆದರೆ ಅದು ಮುಚ್ಚಿದ ನಂತರ ಎಂಎಸ್ ಜಿಪಿ ಘಟಕದಿಂದ ಹೊರಬರುತ್ತಿರುವ ಕಲುಷಿತ, ವಿಷಯುಕ್ತ ನೀರು ಮಾನವ ಕುಲಕ್ಕೆ ಕಂಟಕವಾಗಿದೆ ಎಂಬುದು ಈ ವ್ಯಾಪ್ತಿಯ ಜನರ ಆಕ್ರೋಶಕ್ಕೆ ಕಾರಣ.

ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಕಸ ಮಾಡದೆ ಟೆಂಡರ್ ಪಡೆದವರ ಏಕೈಕ ಉದ್ದೇಶ ಬೆಂಗಳೂರು ನಗರದಿಂದ ಕಸ ಹೊರ ಹೋಗಬೇಕು ಎನ್ನುವುದೇ ಹೊರತು ಕಸದ ರಾಶಿ ಹಾಕುವ ಪ್ರದೇಶದಲ್ಲಿನ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವೆಂಬುದು ಈ ಪ್ರದೇಶಕ್ಕೆ ಭೇಟಿ ನೀಡಿದವರ ಅನಿಸಿಕೆ.

ತಾಲೂಕಿಗೆ ಶಾಪವಾಗಿರುವ ಎಂಎಸ್ ಜಿಪಿ ಘಟಕವನ್ನು ಮುಚ್ಚುವಂತೆ ನವ ಬೆಂಗಳೂರು ಹೋರಾಟ ಸಮಿತಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಯತಿವತಿಯಿಂದ ಏಕಾಏಕಿ ಆರಂಭವಾದ ಅನಿರ್ದಿಷ್ಟಾವಧಿ ಧರಣಿಗೆ ಕಂಟಕ ಎದುರಾಗುವ ಸಾಧ್ಯತೆ ಎದುರಾಗಿದೆ.

ಊಹಿಸಿದಂತೆ ಸಮಸ್ಯೆಗೆ ಒಳಗಾಗುತ್ತಿರುವ ಜನರಿಂದ ದೊರಕದ ಬೆಂಬಲ, ಧರಣಿ ಆಯೋಜನೆ ಕುರಿತು ಇತರೆ ಗ್ರಾಮಪಂಚಾಯಿತಿ, ತಾಲೂಕಿನ ಸಂಘಟನೆಗಳು ನಡುವೆ ನಡೆಯದ ಸಭೆ, ವಿಧಾನ ಪರಿಷತ್ ಚುನಾವಣೆ ಸಂದರ್ಭ, ಧರಣಿ ಹತ್ತಿಕ್ಕಲು ಕಾಣದ ಕೈಗಳಗಳ ಕೈವಾಡ, ಆಯೋಜಕರ ವಿರುದ್ದದ ಅಸಮಾಧಾನ ಮುಂತಾದ ಕಾರಣಗಳು ಧರಣಿ ನಡೆಸುತ್ತಿರುವವರಿಗೆ ಸಮಸ್ಯೆ ಎದುರಾಗಬಹುದು ಎನ್ನಲಾಗುತ್ತಿದೆ.

ಬಿಬಿಎಂಪಿ ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಒಪ್ಪಂದ ನೀಡಿದ್ದು, ಏಕಾಏಕಿ ಆರಂಭವಾದ ಧರಣಿಯನ್ನು ಹತ್ತಿಕ್ಕಲು ಹಲವು ಪ್ರಯತ್ನ ನಡೆಸಿದೆ. ಆದರೆ ಧರಣಿ ನಿರತರು ಸೊಪ್ಪುಹಾಕಿಲ್ಲ. ಆದರೆ ದಿನೇ ದಿನೇ ಕುಸಿಯುತ್ತಿರುವ ಜನ ಬೆಂಬಲ ಧರಣಿ ಹತ್ತಿಕ್ಕಲು ಕಾದುಕುಳಿತಿರುವ ಅಧಿಕಾರಿಗಳಿಗೆ ವರವಾಗುತ್ತಿದ್ದು ಧರಣಿ ನಿರತರನ್ನು ಬಂಧಿಸಿ. ತ್ಯಾಜ್ಯ ವಿಲೇವಾರಿಗೆ ಉಂಟಾಗಿರುವ ಅಡ್ಡಿಯನ್ನು ತೆರವು ಮಾಡಲು ಸಿದ್ದತೆ ನಡೆದಿದೆ ಎನ್ನಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿಗೆ ಶಾಪವಾಗಿರುವ ತ್ಯಾಜ್ಯ ಘಟಕವ ಬಂದ್ ಮಾಡಲು ತಾಲೂಕಿನ ಜನರ ಸಹಕಾರ ಅಗತ್ಯವಾಗಿದ್ದು, ತಾಲೂಕಿನ ಜನರ ಸಂಕಷ್ಟಕ್ಕೆ ಆಹ್ವಾನ ನೀಡಬೇಕಿಲ್ಲ ಎಂಬುದ ಅರಿತು ಪಕ್ಷಾತೀತವಾಗಿ ಹೋರಾಟದಲ್ಲಿ ಭಾಗವಹಿಸಿವಂತೆ ನವ ಬೆಂಗಳೂರು ಹೋರಾಟ ಸಮಿತಿಯ ಅಧ್ಯಕ್ಷ ಜಿ.ಎನ್.ಪ್ರದೀಪ್ ಮನವಿ ಮಾಡಿದ್ದಾರೆ.

ನ್ಯೂಸ್ ಡೆಸ್ಕ್ ಹರಿತಲೇಖನಿ

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ಮಾಧ್ಯಮದಲ್ಲಿ ಸ್ಟೋರಿನ ಪ್ಲಾಂಟ್ ಮಾಡಿಸ್ತಾರೆ, ನಡ್ಡಾ ಭೇಟಿ ಯಾದೆವು, ಆದ್ರೆ ಅವರು ಯಾವುದೇ ಫೋಟೋ ಬೇಡ ಎಂದರು ಎನ್ನುತ್ತಾರೆ. ಅವರು ಯಾರನ್ನೂ ಭೇಟಿಯೇ ಆಗಿಲ್ಲ ಎಂದರು. ಈ ಆಟಗಳನ್ನು ಬಿಡಲಿಲ್ಲ ಅಂದರೆ ಈ ರಾಜ್ಯದ

[ccc_my_favorite_select_button post_id="102289"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!