ಹೆಚ್.ಐ.ವಿ. ಮತ್ತು ಏಡ್ಸ್ ಸೋಂಕಿತರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ನಡೆಸಲು ಮಾನಸಿಕವಾಗಿ ಸಿದ್ಧರಾಗಿ: ಕೆ.ಲೀಲಾವತಿ

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಹೆಚ್.ಐ.ವಿ. ಮತ್ತು ಏಡ್ಸ್ ಸೋಂಕಿನಿಂದ ಬಾಧಿತದವರಿಗೆ, ಸರ್ಕಾರದಿಂದ ವೈದ್ಯಕೀಯ ತಪಾಸಣೆ ಮತ್ತು ಔಷಧೀಯ ಸೌಲಭ್ಯಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಹಿಂಜರಿಕೆ ಇಲ್ಲದೇ ಸೋಂಕಿತರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು, ಉತ್ತಮ ಜೀವನ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕೆಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಯೋಜನಾ ನಿರ್ದೇಶಕರಾದ ಕೆ.ಲೀಲಾವತಿ ಅವರು ತಿಳಿಸಿದರು.

hulukudi maharathotsava
Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ತಾಲ್ಲೂಕು ಆರೋಗ್ಯಧಿಕಾರಿಗಳು ದೇವನಹಳ್ಳಿ ಹಾಗೂ ಜಿಲ್ಲೆಯ ಇತರೆ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ಅಸಮಾನತೆಯನ್ನು ಕೊನೆಗೊಳಿಸಿ, ಏಡ್ಸ್ ಕೊನೆಗೊಳಿಸಿ’ ಎಂಬ ಘೋಷವಾಕ್ಯದಡಿ “ವಿಶ್ವ ಏಡ್ಸ್ ದಿನ-2021” ಪ್ರಯುಕ್ತ ಹೆಚ್.ಐ.ವಿ ಮತ್ತು ಏಡ್ಸ್ ಸಭಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹೆಚ್.ಐ.ವಿ. ಮತ್ತು ಏಡ್ಸ್ ರೋಗದಿಂದ ಬಾಧಿತರಾದವರು ತೆಗದುಕೊಳ್ಳಬೇಕಾದ ಕ್ರಮಗಳ ಹಾಗೂ ಸೋಂಕು ಹರಡದಂತೆ ತಡೆಯುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಅರಿವು ಮೂಡಿಸುವುದು ನಮ್ಮೆಲ್ಲರ ಜವಬ್ದಾರಿಯಾಗಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಎಂದರು. 

Hulukudi mahajathre
Aravind, BLN Swamy, Lingapura

ಶಾಲಾ ಕಾಲೇಜುಗಳಲ್ಲಿ ಹೆಚ್.ಐ.ವಿ. ಮತ್ತು ಏಡ್ಸ್ ಕುರಿತ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಲ್ಲಿ ಆರೋಗ್ಯಕರ ಜೀವನ ನಡೆಸುವಂತೆ ತಿಳಿ ಹೇಳಬೇಕು, ಸಮಾಜದಲ್ಲಿ ಸೋಂಕು ಬಾಧಿತ ವ್ಯಕ್ತಿಗೆ ತಾರತಮ್ಯಕ್ಕೆ ಒಳಪಟ್ಟರೆ ಅಂತಹವರು ಕಾನೂನು ನೆರವು ಪಡೆಯಬಹುದುದಾಗಿದೆ ಎಂದು ಸಲಹೆ ನೀಡಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ಹೆಚ್.ಐ.ವಿ. ಸೋಂಕಿತರಿಗೆ ಜೀವನ ಪಯರ್ಂತ ಉಚಿತವಾಗಿ ಎ.ಆರ್.ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರಲ್ಲದೆ, ಸೋಂಕಿತರು ಯಾವುದೇ ಭಯವಿಲ್ಲದೇ ಚಿಕಿತ್ಸೆಗೆ ಸ್ಪಂದಿಸಿ ಅತ್ಯುತ್ತಮ ಜೀವನವನ್ನು ನಡೆಸಬಹುದು. ಕರಪತ್ರ, ಪೋಸ್ಟರ್, ಬ್ಯಾನರ್, ಜಾಥಾ, ಗೋಡೆ ಬರಹಗಳ ಮೂಲಕ ಜನರಲ್ಲಿ, ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು. ಹೆಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟಲು ಸಂಬಂಧಿಸಿದ ಇಲಾಖೆ ಅಥವಾ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಬೇಕು ಎಂದು ಹೇಳಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ ಸೋಂಕು ಹೊಂದಿರುವ ವ್ಯಕ್ತಿಯು ಮಾನಸಿಕವಾಗಿ ಧೃತಿಗೆಡದೆ ಚಿಕಿತ್ಸೆ ಪಡೆದುಕೊಳ್ಳಬೇಕು, ಸಮಾಜದಲ್ಲಿ ಎಲ್ಲರಂತೆ ಸೋಂಕಿತರು ಸರಿ ಸಮನಾಗಿ ಬದುಕಲು ಅವಕಾಶ ಕಲ್ಪಿಸುವ ಮುಖಾಂತರ ಅವರಿಗೆ ನೈತಿಕ ಬೆಂಬಲ ಸೂಚಿಸಬೇಕು. ಜಿಲ್ಲೆಯಲ್ಲಿ ಪ್ರತಿವರ್ಷ ನಾಲ್ಕು ತಾಲ್ಲೂಕುಗಳಲ್ಲಿ ಜಾನಪದ ಕಲಾ ತಂಡಗಳಿಂದ ಆಯ್ದ ಪ್ರಮುಖ ಜನನಿಬಿಡ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಹೆಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬದ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಅವರು ಮಾತನಾಡಿ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಆಕಾಶ್ ಹಾಗೂ ಎಂ.ವಿ.ಜೆ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಪ್ತ ಸಮಾಲೋಚನೆ ಸೌಲಭ್ಯ ಮತ್ತು ಉಚಿತವಾಗಿ ಹೆಚ್.ಐ.ವಿ ಪರೀಕ್ಷೆ ಮಾಡಲಾಗುವುದು. ಸೋಂಕು ಹರಡುವ ವಿಧಾನಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತಡೆಗಟ್ಟುವ ಮಾರ್ಗವನ್ನು ಎಲ್ಲರೂ ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದ ಮೊದಲಲ್ಲಿ “ವಿಶ್ವ ಏಡ್ಸ್ ದಿನಾಚರಣೆ” ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕೆಂಪು ವರ್ಣದ ಬಲೂನ್‍ಗಳನ್ನು ಬಾನೆತ್ತರಕ್ಕೆ ಆರಿಸಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಸೋಂಕು ಕುರಿತು ಅರಿವು ಮೂಡಿಸುವಂತಹ ಕಿರು ನಾಟಕಗಳನ್ನು ಪ್ರದರ್ಶಿಸಲಾಯಿತು. ಏಡ್ಸ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಿಬ್ಬಂದಿಯ ವರ್ಗದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಕೀಲಾ.ಎನ್, ಆಕಾಶ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಕಮ್ಯುನಿಟಿ ಮೆಡಿಸನ್ ಮುಖ್ಯಸ್ಥರಾದ ಡಾ.ಸುನಿಲ್ ಕುಮಾರ್ ದೊಡ್ಡೇರಿ, ಎಸ್.ವಿ.ವೈ.ಎಂ. ತಾಂತ್ರಿಕ ನಿರ್ದೇಶಕ ಡಾ.ದೀಪಕ್‍ಮೂರ್ತಿ.ಹೆಚ್.ಜೆ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಚತ್ ಅಧ್ಯಕ್ಷರಾದ ಡಾ ಹುಲಿಕಲ್ ನಟರಾಜ್, ಕುಷ್ಠರೋಗ ನಿವಾರಣಾಧಿಕಾರಿ ಡಾ.ಶಾಂತಲಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಧಮೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!