Site icon ಹರಿತಲೇಖನಿ

ಮಾಜಿ ಮುಖ್ಯಮಂತ್ರಿ ಮಾತಿಗೆ ನೋ ಕಾಮೆಂಟ್ ಎಂದ ಮುಖ್ಯಮಂತ್ರಿ

Channel Gowda
Hukukudi trust

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ  ಅದು ಅವರ ಪಕ್ಷದ ವಿಚಾರ, ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Aravind, BLN Swamy, Lingapura

ನಗರದಲ್ಲಿ ಬೊಮ್ಮಾಯಿ ಸುದ್ಧಿಗೋಷ್ಠಿ ನಡೆಸಿ, ಮಾತಾನಾಡಿದ ಅವರು, ನಮ್ಮ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಮ್ಮ ವಿಚಾರ ಹೆಚ್.ಡಿ.ಕುಮಾರಸ್ವಾಮಿ ಬಳಿ ವ್ಯಕ್ತಪಡಿಸಿದ್ದರು. ಜೆಡಿಎಸ್ ಅಭ್ಯರ್ಥಿ ಎಲ್ಲಿ ಸ್ಪರ್ಧಿಸಲ್ಲ ಅಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ಕೊಟ್ಟರೆ ಒಳ್ಳೆಯದು ಎಂದು ಕೇಳಿದರು. ನಾವೇನೂ ಅವರ ಬೆಂಬಲವನ್ನು ಕೇಳಿರಲಿಲ್ಲ. ಅವರು ಏನು ತೀರ್ಮಾನ ತಗೆದುಕೊಳ್ತಾರೆ ತಗೆದುಕೊಳ್ಳಲಿ ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ಡಿ.13ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಎರಡು ವರ್ಷದಿಂದ ವಿಧಾನಮಂಡಲ ಅಧಿವೇಶ ನಡೆದಿರಲಿಲ್ಲ. ನಿಗದಿಯಂತೆ ಅದಿವೇಶನ ನಡೆಯಲ್ಲಿದೆ. ಕೋವಿಡ್ ನಿಯಮ ಅನುಸರಿಸಿ ಅಧಿವೇಶನ ನಡೆಸುತ್ತೇವೆ. ಅಧಿವೇಶನದಲ್ಲಿ ಮಳೆ ಹಾನಿ, ಪರಿಹಾರದ ಬಗ್ಗೆ ಚರ್ಚೆ ಆಗಲಿದೆ ಎಂದರು.

Aravind, BLN Swamy, Lingapura

ಮುಂಗಾರು,ಹಿಂಗಾರು ಬೆಳೆ ಹಾನಿ ಬಗ್ಗೆ ಸರ್ವೇ ಮಾಡಲು ವಿಳಂಬವಾಗುತ್ತಿತ್ತು. ಈಗ ತುರ್ತು ಪರಿಹಾರಕ್ಕಾಗಿ ಕ್ರಮ‌ ವಹಿಸಲಾಗಿದೆ. ಇದುವರೆಗೆ 422 ಕೋಟಿ ರೂ. ಪರಿಹಾರ‌ ವಿತರಣೆ ಮಾಡಲಾಗಿದೆ ಈ ಭಾಗದಲ್ಲಿ ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಅದಕ್ಕೆ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version