ಸಂಗೀತ ವಿದ್ಯೆ ಸಾಧಕನ ಸ್ವತ್ತಾಗಬೇಕು: ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರದಲ್ಲಿ ಅಭಿಮತ

Channel Gowda
Hukukudi trust

ಬೆಂಗಳೂರು: ನಮ್ಮ ಬಳಿ ಕಲಿತ ಅನೇಕ ಶಿಷ್ಯರು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಖುಷಿ ತಂದಿದೆ. ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ.  ಶಿಸ್ತಿನ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಬದ್ಧತೆಯಿಂದ ಸಂಗೀತ ಕಲಿತಾಗ ಮಾತ್ರ ಗಾಯನ ಕ್ಷೇತ್ರದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ವಿದ್ಯೆಯನ್ನು ಕಲಿಯಬೇಕು ಅದನ್ನು ಹೊರತು ಕದಿಯಬಾರದು ಎಂದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ನಾಡಿನ ಹೆಸರಾಂತ ಗಾಯಕ ಹಾಗೂ ಸ್ವರ ಸಂಯೋಜಕರಾದ ಪಂಡಿತ್ ಬಸವರಾಜ್ ಮುಗಳಖೋಡ ಸಂಗೀತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

hulukudi maharathotsava
Aravind, BLN Swamy, Lingapura

ಅವರು ನಗರದ ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಶ್ರೀ ಆರೂಢ ಜ್ಞಾನಸಭಾಂಗಣ ಸಿದ್ಧಾರೂಢ ಆಶ್ರಮದಲ್ಲಿ ಚಿರಂತನ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಇವರ ಸಹಕಾರದಲ್ಲಿ ನಡೆದ ಸ್ವರ ಚಿರಂತನ ಅರ್ಪಿಸುವ ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

Hulukudi mahajathre
Aravind, BLN Swamy, Lingapura

ಸಾಧನೆಗೆ ಸತತ ಪರಿಶ್ರಮವೇ ಮುಖ್ಯ.  ವಿದ್ಯೆಯೆಂಬ ಸಂಪತ್ತನ್ನ ಸಾಧನೆಯ ಅಭ್ಯಾಸದ ಮೂಲಕ ನಾವು ಡಿಪಾಜಿಟ್ ಮಾಡುತ್ತ ಹೋದರೆ ಯಾವಾಗ ಬೇಕಾದರೂ ಅದನ್ನು ಗಾಯನವೆಂಬ ವಿತ್ ಡ್ರಾ ಮೂಲಕ ಬಳಸಬಹುದು. ಸಾಧನೆ ಮಾಡದೆ ಯಾವುದನ್ನು ಬಳಸಲು ಆಗುವುದಿಲ್ಲ  ಎಂದು ಸೂಚ್ಯವಾಗಿ ತಿಳಿಸಿದರು.  

ನಾಡಿನ ಖ್ಯಾತ ಗಾಯಕಿ ಹಾಗೂ ಸಂಗೀತ ನಿರ್ದೇಶಕರಾದ ಸುಮಾ ಎಲ್.ಎನ್. ಶಾಸ್ತ್ರೀ ಅವರು ಮಾತನಾಡಿ, ಗುರುವಿನ ಮುಖೇನ ಕಲಿಯುವ ಶಿಕ್ಷಣಾರ್ಥಿಗಳು ಹೆಚ್ಚಾಗಬೇಕು. ನಾದಝೇಂಕಾರದಂತಹ ಶಾಸೀಯ ಸಂಗೀತ ಹಾಗೂ ವೈವಿಧ್ಯಮಯ ಕನ್ನಡ ಗೀತೆಗಳ ಪ್ರಸ್ತುತಿಯಿಂದ ಯುವ ಪ್ರತಿಭೆಗಳಿಗೆ ಅವಕಾಶದ ಜತೆಗೆ ಗುರುಪರಂಪರೆಯ ಸಂಗೀತ ಶಿಕ್ಷಣಕ್ಕೆ ಮುನ್ನುಡಿಯಾಗಲಿದೆ ಎಂದು ಹೇಳಿದರು. 

ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಕೇಳುವ, ಕಲಿಯುವ ಮತ್ತು ಅದನ್ನು ಪ್ರಸ್ತುತಿ ಪಡಿಸುವ ಕಲಿಕೆಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಾಗಲಿದೆ. ಜಂಜಾಟದ ಜೀವನದಲ್ಲಿ ಸಂಗೀತ ಎಲ್ಲರಿಗೂ ಚಿಕಿತ್ಸೆ ರೂಪದಲ್ಲಿ ನಮಗೆ ಮಾನಸಿಕ ಶಾಂತಿಯನ್ನು ಹಾಗೂ ಶಾರೀರಿಕ ತಾಲೀಮು ಅನ್ನು ನೀಡುತ್ತದೆ. ಕೊರೊನಾ ಸಂದರ್ಭದಲ್ಲೂ ಇಷ್ಟುಂದು ಜನ ಸಭಿಕರು ಸೇರಿರುವುದು ಸಂಗೀತಕ್ಕಿರುವ ಶಕ್ತಿಯನ್ನು ತೋರಿಸುತ್ತದೆ ಎಂದರು. 

ಸ್ವರ ಚಿರಂತನ, ನಾಟ್ಯಾಂಜನ, ಸಾಯಿ ಸ್ವರಾಂಜಲಿ, ಝೇಂಕಾರ ಭಾರತಿ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ಕಲಾವಿದರಿಂದ ವೈವುವಿಧ್ಯಮಯ ಗೀತಗಾಯನ ಹಾಗೂ ಭರತನಾಟ್ಯ ಕಾರ್ಯ ಸೊಗಸಾಗಿ ಮೂಡಿಬಂದಿತು. ಗಾಯಕ, ಗಾಯಕಿಯರಿಗೆ  ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಚಿರಂತನ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ  ವೀರೇಶ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರತಿಭಾ ಸಿ.ವಿ., ವಂದಿಸಿದರು. ಗುರುರಾಜ್ ನಿರೂಪಿಸಿದರು. ಶ್ರೀ ಆರೂಢ ಜ್ಞಾನ ಮಂದಿರದ ವ್ಯವಸ್ಥಾಪಕ ಪ್ರಕಾಶ್ ಬಾಗನ್ನವರ್, ಗುರುಶಾಂತನಂದ ಪ್ರೌಢಶಾಲೆಯ ಶಿಕ್ಷಕ ಆರ್.ಟಿ. ಹುದ್ದಾರ್, ಮ್ಯೂಸಿಕ್ ಇನ್ ಡಿವೈನ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಕುಮಾರ್, ಜಾಗೃತಿ ಸಂಸ್ಥೆಯ  ಅಧ್ಯಕ್ಷ  ಬಿ.ನಾಗೇಶ್,  ಶಿಕ್ಷಣ ತಜ್ಞೆ ಪ್ರೇಮ ಶಾಂತಕುಮಾರ್, ಸವಿತಾ ಕುಲಕರ್ಣಿ, ಬಸವರಾಜ್ ಅಜ್ಜಪ್ಪಘಿ, ಸೂರ್ಯಕಾಂತ್ ಬಿರಾದರ್, ಕಾರ್ತಿಕ್, ಕಿರುತೆರೆ ನಟಿ ರಶ್ಮಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   

ಜನಮನಸೂರೆಗೊಂಡ ಸಂಗೀತ: ಪಂಡಿತ್ ಬಸವರಾಜ ಮುಗಳಖೋಡ ಅವರು ಪ್ರಸ್ತುತಿ ಪಡಿಸಿದ ರಾಗ ಮಾಲ್‌ಕೌಂಸ್, ವಚನ ಕಂಸಾಳೆ, ಶಿಸುನಾಳ ಶರೀಪರ ತತ್ವಪದ, ಸಿದ್ಧರೂಢರ ಭಕ್ತಿಗೀತೆಗಳು ನಗರದ ಜನತೆಗೆ ಮುದ ನೀಡಿದವು.

ಗಾಯಕಿ ಸುಮಾ ಎಲ್. ಎನ್ ಶಾಸ್ತ್ರೀ ವಚನ, ಭಜನ್, ಭಕ್ತಿಗೀತೆಗಳನ್ನು ಸೂಶ್ರವ್ಯವಾಗಿ ಸಂಗೀತ  ಉಣಬಡಿಸಿದರು. ಪ್ರತಿಭಾ ವೀರೇಶ್ ಹಾಗೂ ಸ್ವರಚಿರಂತನ ತಂಡ ಜನಪದ, ದೇಶಭಕ್ತಿಗೀತೆ, ವಚನಗಾಯನ ಪ್ರಸ್ತುತಿ ಪಡಿಸಿದರು. 

ವಾದ್ಯ ಸಹಕಾರದಲ್ಲಿ  ವಿದ್ವಾನರುಗಳಾದ ಶ್ರೀನಿವಾಸಯ್ಯ ಜಿ. ಕೀಬೋರ್ಡ್ ನುಡಿಸಿದರು. ನವನೀತ್ ಶ್ಯಾಂ ಹಾರ್ಮೋನಿಯಂ ಸಾಥ್ ನೀಡಿದರು. ರಾಘವೇಂದ್ರ ಜೋಷಿ ಅವರು ತಬಲಾ ಸಾಥ್ ನೀಡಿದರು. ಶಶಿದರ್ ಅವರು ರಿಂದಂ ಪ್ಯಾಡ್ ನುಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!