ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ಸಿದ್ದರಾಮಯ್ಯ

Channel Gowda
Hukukudi trust

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು. ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

hulukudi maharathotsava
Aravind, BLN Swamy, Lingapura

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾವಿಸಿ ಮಾತನಾಡಿದರು.

ಕಾನೂನು ಆಯೋಗಕ್ಕೆ ಮನವಿ ನೀಡಿದ್ದ ಆರ್ ಎಸ್ ಎಸ್ ಬೆಂಬಲಿಗರ ತಂಡದಲ್ಲಿ ಚಿದಾನಂದ ಮೂರ್ತಿ, ನರಹರಿ, ಬಿ.ಎನ್ ಮೂರ್ತಿ, ಜೈದೇವ್, ಆರ್.ಲೀಲಾ, ಮತ್ತೂರ್ ಕೃಷ್ಣಮೂರ್ತಿ ಇದ್ದರು. ನಮ್ಮ ಸರ್ಕಾರದ ಕಾಲದಲ್ಲಿ ಕಾನೂನು ಇಲಾಖೆಯ ಕೈ ಸೇರಿದ್ದ ಕರಡು ಕಾನೂನನ್ನು 2015ರಲ್ಲಿಯೇ ತಿರಸ್ಕರಿಸಿದ್ದೆವು.

Hulukudi mahajathre
Aravind, BLN Swamy, Lingapura

ಕರಡನ್ನು ನಾವು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ಮಾಡಿಲ್ಲ, ಅನುಮೋದನೆಯನ್ನೂ ನೀಡಿಲ್ಲ. ಮುಖ್ಯಮಂತ್ರಿ ಈ ರೀತಿ ಸಂಪುಟ ಚರ್ಚೆಗೆ ತನ್ನಿ ಎಂದ ಅನೇಕ ವಿಷಯಗಳು, ಕಡತಗಳು ತಿರಸ್ಕರಿಸಲ್ಪಟ್ಟಿವೆ, ಕೆಲವು ಮುಂದೂಡಲ್ಪಟ್ಟಿವೆ, ಇನ್ನು ಕೆಲವು ಸಂಪುಟ ಉಪ ಸಮಿತಿಗೆ ಹೋಗಿವೆ.

ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮ ರೂಪಿಸಲಾಗಿದೆ.

ಸಾಮಾನ್ಯರು ಮತಾಂತರವಾದಾಗ ಒಂದು ಶಿಕ್ಷೆ, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಅಪ್ರಾಪ್ತರು, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇಂತಹುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು. 

ಕಾನೂನು ಇಲಾಖೆ ಮೂಲಕ ಬಂದಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ನಮ್ಮ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಸಂಪುಟದ ಮುಂದೆ ತರುವ ಅಗತ್ಯವಿಲ್ಲ ಎಂದು ಷರಾ ಬರೆದು ತಿರಸ್ಕರಿಸಿದ್ದರು.

ತಿರಸ್ಕೃತಗೊಂಡ ಕರಡು ಕಾಯ್ದೆ ನಮ್ಮ ಸರ್ಕಾರದ ಕಾಲಾವಧಿಯಲ್ಲಿ ಮತ್ತೆಂದೂ ಚರ್ಚೆಗೆ ಬರಲಿಲ್ಲ. ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015 ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದರ ಕಡೆ ಗಮನ ನೀಡದೆ ಇರುತ್ತಿದ್ದೆವಾ..? ಎಂದು ಪ್ರಶ್ನಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಕೈವಾಡದಿಂದ ರೂಪುಗೊಂಡಿದ್ದರಲ್ಲಿ ಅನುಮಾನವೇ ಇಲ್ಲ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದಬಳಕೆಯಿಂದ ಕೂಡಿದೆ. ಒಬ್ಬರೇ ಮೂರೂ ಕರಡು ಕಾಯ್ದೆಗಳನ್ನು ತಯಾರು ಮಾಡಿದಂತಿದೆ. 

ನಾವು ಸಂವಿಧಾನದ ಆಶಯಕ್ಕನುಗುಣವಾಗಿ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ಯಾರ ಪರ-ವಿರೋಧವೂ ಇಲ್ಲ. ಇದು ಒಂದೆರಡು ಧರ್ಮಗಳನ್ನು ಗುರಿಯಾಗಿರಿಸಿರುವ ಕಾನೂನು. ನಿರುದ್ಯೋಗ, ಭ್ರಷ್ಟಾಚಾರ, ಅತಿವೃಷ್ಟಿ ಪರಿಹಾರ, ಬೆಲೆಯೇರಿಕೆ ಹೀಗೆ ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದಾವೆ, ಇವುಗಳಿಂದ ಜನರನ್ನು ವಿಮುಖಗೊಳಿಸಲು ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರದ ಜಾರಿಗೊಳಿಸಲು ಹೊರಟಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!