Site icon
Harithalekhani

ದಿನ ಭವಿಷ್ಯ: ಶನಿವಾರ, ಡಿಸೆಂಬರ್ 25, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ವ್ಯಾಪಾರದಲ್ಲಿ ಅಭಿವೃದ್ಧಿ

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮಿಥುನ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ಕಟಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ.

ಸಿಂಹ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.

ಕನ್ಯಾ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ತುಲಾ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂದಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ವೃಶ್ಚಿಕ: ವಿನಯಪೂರ್ವಕವಾಗಿ ಕಾರ್ಯವನ್ನು ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.

ಧನಸ್ಸು: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು.

ಮಕರ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಯಂತ್ರಗಳಿಂದ ತೊಂದರೆ ಸಾಧ್ಯತೆ.

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನಬೇಕಾಗಿದೆ . ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

ತಿಥಿ: ಷಷ್ಠಿ 

ನಕ್ಷತ್ರ: ಪುಬ್ಬಾ ನಕ್ಷತ್ರ 

ರಾಹುಕಾಲ: 09:32 ರಿಂದ 10:57

ಗುಳಿಕಕಾಲ: 06:41 ರಿಂದ 08:06

ಯಮಗಂಡಕಾಲ: 01:48 ರಿಂದ 03:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version