ದೊಡ್ಡಬಳ್ಳಾಪುರ: ತಾಲೂಕಿನ ಚಿಗರೇನಹಳ್ಳಿ ಬಳಿಯ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂಎಸ್ಜಿಪಿ ವಿರುದ್ಧ ನಡೆಯುತ್ತಿದ್ದ ಹೋರಾಟ ಮತ್ತೊಂದು ತಿರುವ ಪಡೆದಿದ್ದು, ಎಂಎಸ್ಜಿಪಿಯನ್ನು ತಾಲೂಕಿನಿಂದ ಶಾಶ್ವತವಾಗಿ ಒದ್ದೋಡಿಸುವಲ್ಲಿ ವಿವಿಧ ಸಂಘಟನೆಗಳು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ ಒಕ್ಕೋರಲಿನ ಬೆಂಬಲ ಘೋಷಿಸಿವೆ.
ನವ ಬೆಂಗಳೂರು ಹೋರಾಟ ಸಮಿತಿ 13 ದಿನಗಳ ನಿರಂತರ ಹೋರಾಟವನ್ನು ಜಿಲ್ಲಾ ಉಸ್ತುವಾರಿ ಸಚಿವರ ಭರವಸೆಯಂತೆ ತಾತ್ಕಾಲಿಕವಾಗಿ ಹೋರಾಟವನ್ನು ಹಿಂದಕ್ಕೆ ಪಡೆದಿದ್ದವು. ಆದರೆ ಸರ್ಕಾರ ಮಾತಿಗೆ ತಪ್ಪಿದ ಹಿನ್ನೆಲೆ ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಕಸವನ್ನು ಸುರಿಯಲು ಆರಂಭ ಮಾಡಿರುವ ಹಿನ್ನೆಲೆ ಮತ್ತೆ ಹೋರಾಟ ಹೊಸ ತಿರುವಿನೊಂದಿಗೆ ಚುರುಕು ಪಡೆದುಕೊಳ್ಳುತ್ತಿದೆ.
ಸಭೆಯಲ್ಲಿ ಮಾತನಾಡಿದ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಸಾರಥಿ ಸತ್ಯಪ್ರಕಾಶ್, ಅದಿವೇಶನ ಮುಗಿದ ನಂತರ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಕಸ ನಿಲ್ಲಿಸುವ ನಿರ್ಧಾರದ ಕುರಿತು ಮಾತನಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜು ಭರವಸೆ ನೀಡದ ನಂತರ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿತ್ತು. ಆದರೆ ಮಾತಿಗೆ ತಪ್ಪಿರುವ ಸರ್ಕಾರ ಕಸವನ್ನು ಮತ್ತೆ ಸುರಿಯಲು ಆರಂಭಿಸಿದೆ. ಈ ನಿಟ್ಟಿನಲ್ಲಿ ಈ ವ್ಯಾಪ್ತಿಯ 100ಕ್ಕೂ ಹೆಚ್ಚು ಗ್ರಾಮಗಳ ಜನ ಆಕ್ರೋಶಕ್ಕೆ ಒಳಗಾಗಿದ್ದು, ತಮ್ಮ ಮನೆ ಮಕ್ಕಳು, ಕುರಿ, ಮೇಕೆ, ಜಾನುವಾರಗಳೊಂದಿಗೆ ಬೀದಿಗೆ ಇಳಿದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಈಗಲೂ ಸರ್ಕಾರ ಎಚ್ಚುತ್ತುಕೊಳ್ಳದಿದ್ದರೆ. ಇದಕ್ಕೆ ನೇರ ಹೊಣೆ ಸರ್ಕಾರ, ಜಿಲ್ಲಾಡಳಿ, ಬಿಬಿಎಂಪಿ ಕಮೀಷನರ್ ಸರ್ಫರೋಜ್ ಖಾನ್ ನೇರ ಹೊಣೆಯಾಗಿರುತ್ತಾರೆ ಎಂದು ನೇರ ಎಚ್ಚರಿಕೆ ನೀಡಿದರು.
ಸಚಿವ ಮಾಧುಸ್ವಾಮಿ ಹೇಳಿಕೆಗೆ ಆಕ್ರೋಶ: ಅಧಿವೇಶನದಲ್ಲಿ ಶಾಸಕ ಟಿ.ವೆಂಕಟರಂಣಯ್ಯ ನವರು ಎಂಎಸ್ಜಿಪಿ ಘಟಕದಿಂದಾಗುತ್ತಿರುವ ಪರಿಣಾಮವನ್ನು ವಿವರವಾಗಿ ವಿವರಿಸಿ ಕಸವನ್ನು ನಿಲ್ಲಿಸುವಂತೆ ಆಗ್ರಹಿದ್ದಾರೆ. ಆದರೆ ಇದಕ್ಕೆ ನಾನು ಕಸ ವಿಲೇವಾರಿ ಘಟಕವನ್ನು ವೀಕ್ಷಣೆ ಮಾಡಿದ್ದೇನೆ ಮಾವತ್ತೂರು ಕೆರೆಗೆ ವಿಷಯುಕ್ತ ನೀರು ಹೊಗಿಲ್ಲ ಎಂದು ಹೇಳಿರುವ ಅವರಿಗೆ ತ್ಯಾಜ್ಯ ಘಟಕ ಎಲ್ಲಿದೆ ಎನ್ನುವುದೇ ಗೊತ್ತಿಲ್ಲ. ತ್ಯಾಜ್ಯ ವಿಲೇವಾರಿ ಎಂಬುದು ಒಂದು ದೊಡ್ಡ ಮಾಫಿಯಾ ಮಾಡಿಕೊಂಡಿರುವ ಇವರು ಬೆಂಗಳೂರಿನಲ್ಲಿ ನಾಯಿ ಕಚ್ಚಿದರೆ ಸಭೆ ಸಭೆ ಮೇಲೆ ಸೇರುತ್ತಾರೆ. ಅಲ್ಲಿನ ತ್ಯಾಜ್ಯ ನಮ್ಮನ್ನು ಕೊಲ್ಲುತ್ತಿದ್ದರು ಬೆಂಗಳೂರಿನ ತ್ಯಾಜ್ಯವನ್ನು ನಮ್ಮ ಗ್ರಾಮೀಣ ಪ್ರದೇಶಕ್ಕೆ ಸುರಿದು ನಮ್ಮನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಕನ್ನಡ ಪಕ್ಷ ಅಧ್ಯಕ್ಷ ಸಂಜೀವ್ನಾಯಕ್, ಕನ್ನಡ ಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್, ಭಕ್ತರಹಳ್ಳಿ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ, ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್, ಕರವೇ ನಾರಾಯಣಗೌಡ ಬಣದ ರಾಜ್ಯ ಕಾರ್ಮಿಕ ಸಂಘದ ಅಧ್ಯಕ್ಷ ಹನುಮಂತರೆಡ್ಡಿ, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ತಾಲೂಕು ಅಧ್ಯಕ್ಷ ಡಿ.ಎನ್.ಮಂಜುನಾಥ್, ಕರವೇ ಕನ್ನಡಿಗರ ಬಣ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ತಾಲೂಕು ಅಧ್ಯಕ್ಷ ತರಿದಾಳ್ ಶ್ರೀನಿವಾಸ್, ವಕೀಲರಾದ ಅಂಜನೇಗೌಡ, ಲೋಕೇಶ್, ಕಸಾಪ ಮಾಜಿ ತಾ.ಅಧ್ಯಕ್ಷೆ ಪ್ರಮೀಳಾ ಮಹದೇವ್, ಕನ್ನಡ ಪರ ಸಂಘನೆಗಳ ಒಕ್ಕೂಟದ ಅಗ್ನಿ ವೆಂಕಟೇಶ್, ಎ.ನಂಜಪ್ಪ ಸೇರಿದಂತೆ ಅನೇಕ ಸಂಘಟನೆಗಳ ಮುಂಖಡರು ಹಾಜರಿದ್ದು ಮುಂದಿನ ಹೋರಾಟದ ರೂಪುರೇಷೆಗಳ ತಯಾರು ಮಾಡುವಲ್ಲಿ ಹಲವು ಸೂಚನೆಗಳನ್ನು ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….