Site icon ಹರಿತಲೇಖನಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕರ್ನಾಟಕಕ್ಕೆ ರೂ 642.26 ಕೋಟಿ ಮಂಜೂರು

Channel Gowda
Hukukudi trust

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ರೂ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

Aravind, BLN Swamy, Lingapura

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಈ ಯೋಜನೆಯಡಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ.ವರೆಗೆ ಅನುದಾನ  ಲಭ್ಯವಾಗಲಿದೆ .ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಯೋಜನೆಯ ಮುಖ್ಯ ಉದ್ದೇಶಗಳನ್ನು ವಿವರಿಸಿದ ಸಚಿವರು,ಮಳೆ ನೀರು ಕೊಯ್ಲ ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು.ಪರ್ಯಾಯ ಬೆಳೆ ವ್ಯವಸ್ಥೆಗಳು,ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು,ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ.  ಆಸ್ತಿರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ (SHGs) ಉತ್ತೇಜಿಸುವುದು ವಿಕಲಚೇತನರು ಮತ್ತು ಮಹಿಳೆಯರಿಗೆ ಅಭಿವೃದ್ಧಿಪಡಿಸಿದ ಭೂಮಿ, ನೀರು ಮತ್ತು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವುದಾಗಿದೆ ಎಂದರು.

Aravind, BLN Swamy, Lingapura

ಜಲಾನಯನ ಅಭಿವೃದ್ಧಿ ಇಲಾಖೆಯ ಸಾಧನೆಗಳನ್ನು ಮುಂದುವರೆಸಿ ಮಾತನಾಡಿದ ಬಿ.ಸಿ.ಪಾಟೀಲ್, 2021-22 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ ಸುಜಲ-iii ಯೋಜನೆ ಮಾದರಿಯಲ್ಲಿ ವಿಶ್ವಬ್ಯಾಂಕ್ ಅನುದಾನದ ನೆರವಿನಲ್ಲಿ ಹೊಸ ರಿವಾರ್ಡ್ ( ಕೃಷಿಯ ಸುಸ್ಥಿರತೆಗಾಗಿ ನವೀನ ಅಭಿವೃದ್ಧಿಯ ಮೂಲಕ ಜಲಾನಯನ ಪ್ರದೇಶಗಳನ್ನು ಪುನಶ್ಚೇತನಗೊಳಿಸುವ ಯೋಜನೆ ಜಾರಿಗೊಳಿಸಿ ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ರೂ.ವೆಚ್ಚದಲ್ಲಿ ವಿಶ್ವಬ್ಯಾಂಕಿನ ಶೇ.70 ರಾಜ್ಯದ ಶೇ.30 ಪಾಲಿನಂತೆ ಯೋಜನೆಯನ್ನು ಮುಂದಿನ 5  ವರ್ಷಗಳ ಕಾಲ ಅನುಷ್ಠಾನಗೊಳಿಸಲಾಗಿದೆ ಎಂದರು.

ದೇಶದಲ್ಲಿಯೇ ಕರ್ನಾಟಕ ಕೃಷಿ ಇಲಾಖೆಯ ಜಲಾನಯನ ಇಲಾಖೆಯು ಇತರೆ ರಾಜ್ಯಗಳಿಗೆ ತಾಂತ್ರಿಕ ಸಲಹೆ ನೀಡಲು ಮಾದರಿಯಾಗಿದ್ದು, ಕರ್ನಾಟಕ ರಾಜ್ಯವನ್ನು ಕೇಂದ್ರ ಸರ್ಕಾರ “ಲೈಟ್ ಹೌಸ್” ಎಂದು ಗುರುತಿಸಿರುವುದು ಕರ್ನಾಟಕದ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version