ಬೆಂಗಳೂರು: ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ‘ದಾಸೋಹ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು ಅಕ್ಷರಶಃ ಪಾಲಿಸಿದವರು ಶ್ರೀ ಶಿವಕುಮಾರಸ್ವಾಮಿಗಳು. ದಾಸೋಹ ದಿನವನ್ನು ಸಿದ್ದಗಂಗಾ ಮಠದಲ್ಲಿ ಆಚರಣೆ ಮಾಡಬೇಕೆಂದು ಸರ್ಕಾರ ತೀರ್ಮಾನಿಸಿದೆ. ನಮ್ಮ ಸರ್ಕಾವೂ ಅದೇ ದಾರಿಯಲ್ಲಿ ನಡೆಯುತ್ತಿದೆ. 4 ಕೆ.ಜಿ ನೀಡಲಾಗುತ್ತಿದ್ದ ಅಕ್ಕಿಯನ್ನು 5 ಕೆ.ಜಿಗೆ ಹೆಚ್ಚಿಸಿದೆ. ಜಿಲ್ಲೆಗಳ ಆಹಾರ ಪದ್ಧತಿ ಅನುಗುಣವಾಗಿ ರಾಗಿ, ಜೋಳ ಇತ್ಯಾದಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ವಿದ್ಯಾ ದಾಸೋಹವನ್ನೂ ಸರ್ಕಾರ ಕೈಗೊಂಡಿದ್ದು, ಕಾರ್ಮಿಕರ ಹಾಗೂ ರೈತರ ಮಕ್ಕಳಿಗೆ ವಿದ್ಯಾರ್ಥಿ
ವೇತನ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ. 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….