Site icon ಹರಿತಲೇಖನಿ

ಈ ರಾಶಿಯವರ ಅತಿಯಾದ ಮಾತು ಅಪಾಯಕ್ಕೆ ಕಾರಣ / ದಿನ ಭವಿಷ್ಯ: ಶುಕ್ರವಾರ, ಜ.28,2022, ದೈನಂದಿನ ರಾಶಿ ಭವಿಷ್ಯ

Channel Gowda
Hukukudi trust

ಮೇಷ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

Aravind, BLN Swamy, Lingapura

ವೃಷಭ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

Aravind, BLN Swamy, Lingapura

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಸಿಂಹ: ಮಾನಸಮ್ಮಾನಗಳು ದೊರೆಯುವುದು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version