ದ.ರಾ.ಬೇಂದ್ರೆಯವರ ಜೀವನವೇ ಕಾವ್ಯ ಮತ್ತು ಕಾವ್ಯವೇ ಜೀವನವಾಗಿತ್ತು: ಕನ್ನಡ ಶಿಕ್ಷಕ ಜಿ.ಎಸ್.ಚೌಧರಿ

Channel Gowda
Hukukudi trust

ದೊಡ್ಡಬಳ್ಳಾಪುರ: ದ.ರಾ.ಬೇಂದ್ರೆಯವರ ಜೀವನವೇ ಕಾವ್ಯ ಮತ್ತು ಕಾವ್ಯವೇ ಜೀವನವಾಗಿತ್ತು. ಬೇಂದ್ರೆ ತಮ್ಮ ಜೀವನದಲ್ಲಿ ದುಃಖ, ನೋವು ಅನುಭವಿಸುತ್ತಲೇ ಸಹೃಯದರಿಗೆ ಸಾಹಿತ್ಯದ ಸವಿಯುಣಿಸುತ್ತಿದ್ದರು ಎಂದು ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಜಿ.ಎಸ್.ಚೌಧರಿ ತಿಳಿಸಿದರು. 

hulukudi maharathotsava
Aravind, BLN Swamy, Lingapura

ಅವರು ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ವರಕವಿ ದ.ರಾ.ಬೇಂದ್ರೆಯವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ  ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೇ ನೀಡುವೆನು ರಸಿಕ , ಕಲ್ಲು ಸಕ್ಕರೆಯಂತಹ ನಿನ್ನೆದೆಯು ಕರಗಿದರೆ ಅದರ ಸವಿಯುಣಿಸು ನನಗೆ ಎಂಬುದನ್ನು ವರಕವಿ ತಮ್ಮ ಕವನದಲ್ಲೆ ಹೇಳಿದ್ದಾರೆ ಎಂದರು.

ದೇಸಿ ಸೊಗಡಿನಲ್ಲಿ ಕಾವ್ಯ ಮಾಡಿರುವ ಬೇಂದ್ರೆಯವರು ಸಾಹಿತ್ಯದಲ್ಲಿ ದಾರ್ಶನಿಕತೆ ಇದೆ. ದಾರ್ಶನಿಕ ಕೃತಿಗಳು ಮೌಲ್ಯ ಶಿಕ್ಷಣ ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ದಾರ್ಶನಿಕ ಕೃತಿಗಳನ್ನು ಓದುವ ಮೂಲಕ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಕಲಿಯಬಹುದಾಗಿದೆ. ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ಕವಿತೆಗಳು  ಓದುಗರ ಮನಗೆದ್ದಿವೆ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ  ಹೊಸತನ ನೀಡಿದರು.

Hulukudi mahajathre
Aravind, BLN Swamy, Lingapura

ನರಬಲಿ ಕವನ ಬರೆದು ಜೈಲುವಾಸ ಅನುಭವಿಸಿದ ಬೇಂದ್ರೆಯವರು  ಗೆಳೆಯರ ಗುಂಪು ಕಟ್ಟಿ ಸಾಹಿತ್ಯ ಚಟುವಟಿಕಗಳನ್ನು ವಿಸ್ತರಿಸಿದರು. ಗರಿ, ಗಂಗಾವತರಣ, ನಾದಲೀಲೆ, ಸಖೀಗೀತ, ಉಯ್ಯಾಲೆ, ನಾಕುತಂತಿ, ಮೇಘದೂತ ಮುಂತಾದ ಹಲವಾರು ಕೃತಿಗಳು ಇಂದಿಗೂ ಕನ್ನಡ ಸಾಹಿತ್ಯ ಓದುಗರ ಮನಗೆದ್ದಿವೆ. ಜಾನಪದ ಶೈಲಿಯ ಕವನಗಳು, ಭಾವಗೀತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡುತ್ತಿದಾರೆ ಎಂದರು.

ಕಾಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಚ್.ಎನ್.ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ದ.ರಾ.ಬೇಂದ್ರೆಯವರ ಜೀವನ ಮತ್ತು ಅವರ ಸಾಹಿತ್ಯವನ್ನು ಅಧ್ಯಯನ  ಮಾಡಬೇಕಾಗಿದೆ. ಸಾಹಿತ್ಯಾಭಿರುಚಿಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಅಗಲಿದೆ. ಪಠ್ಯವಿಷಯಗಳಿಗೆ ನೀಡುವ ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಜೈಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಂ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಆರ್.ಗೋವಿಂದರಾಜು,  ಮಾಳವ ನಾರಾಯಣಸ್ವಾಮಿ, ಜಾನಪದ ಕಲಾವಿದ ಹಾಡೋನಹಳ್ಳಿ ಗೋವಿಂದರಾಜು, ಯುವಕವಿ ಅಂಜನಗೌಡ, ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!