ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ: ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕೆಂದ ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್

Channel Gowda
Hukukudi trust

ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2022ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

hulukudi maharathotsava
Aravind, BLN Swamy, Lingapura

ಇತಿಹಾಸ ತಜ್ಞ ಡಾ.ಎಸ್.ವೆಂಕಟೇಶ್ ಮಾತನಾಡಿ, ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು. ಹಲವಾರು ಮಹನೀಯರು ಪತ್ರಿಕೆಗಳ ಮೂಲಕ ಸಮಾಜವನ್ನು ತಿದ್ದುವ ಮೂಲಕ ಇತಿಹಾಸದಲ್ಲಿ ದಾಖಲಾಗಿರುವುದನ್ನು ನಾವು ಕಾಣಬಹುದಾಗಿದ್ದು, ದೊಡ್ಡಬಳ್ಳಾಪುರದಲ್ಲಿ ರುಮಾಲೆ ಚೆನ್ನಬಸವಯ್ಯನವರು ತಾಯಿನಾಡು ಪತ್ರಿಕೆ ಹೊರತಂದಿದ್ದರು. ಪತ್ರಿಕೆಗಳ ಮೂಲಕ, ಸಮಾಜದ ಓರೆಕೋರೆಗಳನ್ನು ತಿದ್ದುವ, ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದ್ದು, ಸಣ್ಣ ಪತ್ರಿಕೆಗಳು ಈ ದಿಸೆಯಲ್ಲಿ ಹೆಚ್ಚಿನ ಕಾರ್ಯ ಮಾಬಹುದಾಗಿದೆ. ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪತ್ರಿಕೆಗಳ ಪಾತ್ರ ಗಣನೀಯ ಎಂದರು.

Hulukudi mahajathre
Aravind, BLN Swamy, Lingapura

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿ,  90 ವಸಂತಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪೂರೈಸಿ ರಾಜ್ಯದಲ್ಲಿ ದೊಡ್ಡ ಸಂಘಟನೆಯಾಗಿ ಕಾರ್ಯನಿರ್ವಹಿಸುತ್ತಿದೆ.  ಆದರೆ ಪತ್ರಿಕೋದ್ಯಮದಲ್ಲಿರುವವರಿಗೆ ಭದ್ರತೆ ಇಲ್ಲವಾಗಿದೆ. ಆಧುನಿಕತೆಯ ದಿನದಲ್ಲಿ ಪತ್ರಕರ್ತರಿಗೆ ಸವಲತ್ತುಗಳು ದೊರಕದಾಗಿದೆ. ಪತ್ರಿಕಾಲಯಗಳು ವ್ಯಾಪಾರಿಕರಣದ ದೃಷ್ಟಿಯಿಂದ ಸೇವಾ ಪತ್ರವನ್ನು ನೀಡದೆ ವಂಚಿಸಲಾಗುತ್ತಿದೆ. ಪತ್ರಿಕೋದ್ಯಮ ಉದ್ಯಮಿಗಳ ಕೈ ಸಿಲುಕಿ ಪತ್ರಕರ್ತರು ಬಸವಳಿಯುವಂತಾಗಿದ್ದು, ಸರ್ಕಾರ ಪತ್ರಕರ್ತರ ನೆರವಿಗೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಪತ್ರಕರ್ತರು ಕಾಳಜಿಯುತ ವೃತ್ತಿ ನಡೆಸಬೇಕಿದೆ. ಅತಿ ಹೆಚ್ಚು ಪತ್ರಿಕೆಗಳನ್ನು ಮಾದ್ಯಮಪಟ್ಟಿಗೆ ಸೇರಿಸದೆ ಜಾಹಿರಾತು ವರಮಾನದ ವಂಚನೆಯಾಗುತ್ತಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆ ಗಮನ ಹರಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ಗಂಗರಾಜ ಶಿರವಾರ ಮಾತನಾಡಿ, ಪತ್ರಕರ್ತರಿಗೆ ಎಲ್ಲರ ಜೊತೆ ಸಂವಹನ ಅಗತ್ಯವಾಗಿದೆ. ಅದೇ ರೀತಿ ಪತ್ರಕರ್ತರ ಸಂಘ ಚಟುವಟಿಕೆಯಿಂದಿರಲು, ಪತ್ರಕರ್ತರ ಒಂದು ವೇದಿಕೆಗೆ ತರಲು ಈ ಕಾರ್ಯಕ್ರಮ ಪೂರಕವಾಗಿದೆ. ಪತ್ರಕರ್ತರಿಗೆ ಕಾರ್ಯಾಲಯ ಹಾಗೂ ನಿವೇಶನ ದೊರಕಿಸಿಕೊಡಲು ನಗರಸಭೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಪತ್ರಕರ್ತರ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಮುರಳಿ ಮೋಹನ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಫೀ ಉಲ್ಲಾ,ಕಾರ್ಯದರ್ಶಿ ಶಾಂತಮೂರ್ತಿ, ನಿಕಟ ಪೂರ್ವ ಕಾರ್ಯದರ್ಶಿ ಆರ್.ರಮೇಶ್,ವಿಶ್ವಾಮಿತ್ರ ಪೌಂಡೇಷನ್ ಅಧ್ಯಕ್ಷ ಹೊಸಕೋಟೆ ಜಿ.ಶ್ರೀನಿವಾಸ್, ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಡಿ.ಶ್ರೀಕಾಂತ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು , ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಸಂಘಟನಾ ಕಾರ್ಯದರ್ಶಿ ಪರಮೇಶ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಖಜಾಂಚಿ ಜೆ.ಮುನಿರಾಜು, ಉಪಾಧ್ಯಕ್ಷರಾದ ಕೆ.ಸಿ.ರುದ್ರೇಶ್, ಅನ್ನಪೂರ್ಣ,ಆರ್.ಶ್ರೀಧರ್, ಕಾರ್ಯದರ್ಶಿಗಳಾದ ಮುನಿಸ್ವಾಮಿ, ಪಿ.ಶಿವಶಂಕರ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!