ನೂತನ ಸಂಸತ್ ಭವನ ಉದ್ಘಾಟನೆ: ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಮೇ.26): ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಅಲ್ಲದೆ, ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದೇ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಸಂಸತ್ ಭವನ ಉದ್ಘಾಟನೆಗೆ 21 ಪಕ್ಷಗಳು ಬಹಿಷ್ಕಾರ ಹಾಕಿವೆ. ಅದು ಆಯಾ ಪಕ್ಷದ ನಿಲವು. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು. ರಾಷ್ಟ್ರಪತಿ ಗಳಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲವೇ? ಎಂದು ಅವರು ಕೇಳಿದರು.

ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದಾರಾ ಕಾಂಗ್ರೆಸ್ ನಾಯಕರು? ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ? ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಅಂತಾ ನಾಟಕ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಿದ್ದಾರೆ. ಹಾಗಾಗಿ ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೋಗುಟ್ಟಿದ್ದಾರೆ. ಇದರಿಂದ ಬಿಜೆಪಿ ಬಗ್ಗೆ ಜೆಡಿಎಸ್ ಮೃದುಧೋರಣೆ ಅಂತಾ ತಿಳಿಯುವ ಅಗತ್ಯ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು.

ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕೀಯ ಪಕ್ಷಗಳು ಬಹಿಷ್ಕಾರ ಹಾಕಿರುವ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಕಾರ್ಯಕಾರಿಣಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.

ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಹಾಲಿ ಪ್ರಧಾನಿಗಳು ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಜರಾಗುವುದು ತಪ್ಪೇನಲ್ಲ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲಾಗುವುದು ಹಾಗೂ ಪಕ್ಷದ ಸೈದ್ಧಾಂತಿಕ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕಾರ್ಯಕಾರಿಣಿ ಸ್ಪಷ್ಟಪಡಿಸಿದೆ ಎಂದು ಅವರು ಮಾಹಿತಿ ನೀಡಿದರು.

ಹಾಗೆಯೇ, ಸಂಸತ್ ಭವನ ಉದ್ಘಾಟನೆ, ಅದರ ಸುತ್ತಮುತ್ತ ನಡೆಯುವ ಬೆಳವಣಿಗೆಗಳ ಕುರಿತು ಹಾಗೂ ತಾವು ಭಾಗಿಯಾಗುವ ವಿಷಯದಲ್ಲಿ ಮಾಜಿ ಪ್ರಧಾನಿಗಳು ಕಾರ್ಯಕಾರಿಣಿಯಲ್ಲಿ ಸಮಾಲೋಚನೆ ನಡೆಸಿದರು ಎಂಬುದಾಗಿ ಅವರು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಗೂ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಮಾಲೋಚನೆ ನಡೆಸಿತು. ಹಾಗೆಯೇ, ಪಕ್ಷದ ಸದಸ್ಯ ತ್ವ ನೊಂದಣಿ ವಿಚಾರದಲ್ಲಿ, ಕೇರಳ ನಾಯಕರು ಹೆಚ್ಚು ಆದ್ಯತೆ ಕೊಡಬೇಕು ಎಂದು ಸಲಹೆ ಮಾಡಿದರು. ಅದಕ್ಕೂ ಕಾರ್ಯಕಾರಿಣಿ ಒಪ್ಪಿಗೆಯ ಮುದ್ರೆ ಒತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ರೈತರ ಪರವಾಗಿ ಮಾಜಿ ಪ್ರಧಾನಿಗಳ ಹೋರಾಟ: ದೇಶದ ಉದ್ದಗಲಕ್ಕೂ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಬೆಲೆ, ಸಬ್ಸಿಡಿ, ರಸಗೊಬ್ಬರ ಸಮಸ್ಯೆ,  ಇತ್ಯಾದಿ ಸೌಲಭ್ಯ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ದೇಶಾದ್ಯಂತ ರೈತರ ಪರವಾಗಿ ಬೃಹತ್ ಹೋರಾಟವನ್ನು ದೇವೇಗೌಡರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರೂಪಿಸಬೇಕು ಎಂದು ಕೇರಳದ ಜೆಡಿಎಸ್ ಪಕ್ಷದ ಹಿರಿಯ ಶಾಸಕರು ಹಾಗೂ ಸಚಿವರೂ ಆಗಿರುವ ಕೃಷ್ಣನ್ ಕುಟ್ಟಿ ಅವರು ನಿರ್ಣಯ ಮಂಡಿಸಿದರು. ಈ ನಿರ್ಣಯಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಒಪ್ಪಿಗೆ ನೀಡಿತು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಕೇರಳ, ತೆಲಂಗಾಣ, ತಮಿಳುನಾಡು, ಆಂದ್ರ ಪ್ರದೇಶದ ನಾಯಕರು, ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆ ಆಗಿರುವುದರಿಂದ ಕುಮಾರಸ್ವಾಮಿ ಅವರು ಎದೆಗುಂದಬಾರದು ಎಂದು ನನಗೆ ಧೈರ್ಯ ಹೇಳಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು. ಸದಾ ನನ್ನ ಜತೆ ನಿಲ್ಲುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ, ಪಕ್ಷದ ಸಂಘಟನೆ ಹಾಗೂ ಮಹತ್ವದ ರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ದೇಶದ ಬೆಳವಣಿಗೆಗಳ ಬಗ್ಗೆ ಹಾಗೂ ಪಕ್ಷದ ಸಂಘಟನೆ ಹಿತದೃಷ್ಟಿಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಎರಡು ತಿಂಗಳಿಗೆ ಒಮ್ಮೆ ಕರೆಯುವಂತೆ ನಮ್ಮ ಪಕ್ಷದ ಕೇರಳ ರಾಜ್ಯದ ಹಿರಿಯ ನಾಯಕರಾದ ಡಾ. ನೀಲ ಲೋಹಿದಾಸ್ ನಾಡಾರ್ ಅವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕಾರ್ಯಕಾರಿಣಿಯಲ್ಲಿ ಕೇರಳದ ಸಚಿವರೂ, ಪಕ್ಷದ ಹಿರಿಯ ನಾಯಕರಾದ ಕೃಷ್ಣನ್ ಕುಟ್ಟಿ, ಕೇರಳ ರಾಜ್ಯಾಧ್ಯಕ್ಷ ಹಾಗೂ ಶಾಸಕ ಮ್ಯಾಥ್ಯೂ ಥಾಮಸ್, ತಮಿಳುನಾಡು ರಾಜ್ಯಾಧ್ಯಕ್ಷ ಪೊನ್ನುಸ್ವಾಮಿ ಸೇರಿದಂತೆ ಆಂಧ್ರ, ಒರಿಸ್ಸಾ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರಾಖಂಡ ಮುಂತಾದ ರಾಜ್ಯಗಳ ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕರ್ನಾಟಕ, ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ಪ್ರತಿನಿಧಿಗಳು, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಜೆಡಿಎಸ್ ನಗರ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಬಾಗಲಕೋಟೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಮಾವಿನಮರದ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!