ದೊಡ್ಡಬಳ್ಳಾಪುರ, (ಮೇ.27): ಎಬಿ ಕೇಬಲ್ ಅಳವಡಿಕೆ ಕಾರ್ಯದ ಹಿನ್ನೆಲೆಯಲ್ಲಿ ಬೆಸ್ಕಾಂ ನಗರದ ಘಟಕದ ಪ್ರಮುಖ ಭಾಗಗಳಲ್ಲಿ ನಾಳೆ (ಭಾನುವಾರ) ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಎಇಇ ಮಂಜುನಾಥ್ ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಬೆಸ್ಕಾಂ ನಗರ ಘಟಕ ವ್ಯಾಪ್ತಿಯಲ್ಲಿ ಎಬಿ ಕೇಬಲ್ ಅಳವಡಿಸುತ್ತಿರುವ ಕಾರಣ ಮೇ.28 ರಂದು ಬೆಳಗ್ಗೆ 10:00 ರಿಂದ ಸಂಜೆ 4:00 ರವರೆಗೆ ಡಿ ಕ್ರಾಸ್, ಮಾರುತಿ ನಗರ, ಚಿಕ್ಕಪೇಟೆ, ಎಲೆಪೇಟೆ, ಕುಂಬಾರಪೇಟೆ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ವೃತ್ತ, ಲಕ್ಷ್ಮಿ ಚಿತ್ರಮಂದಿರದ ವ್ಯಾಪ್ತಿ, ಆಸ್ಪತ್ರೆ ವೃತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….