ಬೆಂಗಳೂರು, (ಜುಲೈ.14): ಸಾರಿಗೆ ಇಲಾಖೆಗೆ 13 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲು ತೀರ್ಮಾನ ಮಾಡಿದ್ದು,4000 ಹೊಸ ಬಸ್ಸುಗಳನ್ನು ಖರೀದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಅವರು ಮಾತನಾಡಿದರು.
ಈಗಾಗಲೇ 5 ರ ಪೈಕಿ ಮೂರು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಶಕ್ತಿ ಯೋಜನೆಯನು ಜೂನ್ 11 ರಿಂದ ಜಾರಿಗೆ ಕೊಟ್ಟಿದ್ದೇವೆ. ಈ ರಾಜ್ಯದ ಹೆಣ್ಣುಮ್ಕಳು ಖುಷಿಯಾಗಿದ್ದಾರೆ. ಇವರಿಗೆ ಮಾತ್ರ ಅಸಂತೋಷ. 49.6 ಲಕ್ಷ ಮಹಿಳೆಯರು ಪ್ರತಿನಿತ್ಯ ಓಡಾಡುತ್ತಿದ್ದಾರೆ.
ಉಚಿತ ಬಸ್ಸುಗಳ ಪ್ರಯಾಣ ಹೆಚ್ಚಾಗಿ ನಮ್ಮ ಆದಾಯ ಕೂಡ ಜಾಸ್ತಿಯಾಗಿದೆ. ಕೆಎಸ್ಆರ್ ಟಿ ಸಿ ಯಲ್ಲಿ ಪ್ರಯಾಣ ಮಾಡಿರುವ ಟಿಕೆಟ್ ದರವನ್ನು ಸಾರಿಗೆ ಸಂಸ್ಥೆಗೆ ಸರ್ಕಾರ ಕಟ್ಟಿಕೊಡಲಿದೆ. ಈ ಬಗ್ಗೆ ಸಂಶಯ ಬೇಡ ಎಂದರು.
2800 ಕೋಟಿ ರೂ.ಗಳನ್ನು ಸಾರಿಗೆ ಸಂಸ್ಥೆಗೆ ಒದಗಿಸುತ್ತೇವೆ. ಆ ಮೂಲಕ 13 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲು ತೀರ್ಮಾನ ಮಾಡಿದ್ದು,4000 ಹೊಸ ಬಸ್ಸುಗಳನ್ನು ಖರೀದಿ ಮಾಡಲಾಗುವುದು.
ಶಕ್ತಿ ಯೋಜನೆಯಿಂದ ಪುರುಷರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು. ಈ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಜಾರಿಯಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….