ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಆ, 23): ನಾಡಿನ  ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. 

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು. 

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು . ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು. 

ಕುಂ.ವೀರಭದ್ರಪ್ಪ, ಡಾ:ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ  ಅತಿ ಹೆಚ್ಚು ಬೆದರಿಕೆಗಳು ಬಂದಿವೆ.  ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ,  ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.

ಸಾರ್ವಜನಿಕ ಪ್ರತಿಭಟನೆಗಳನ್ನು  ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು. 

ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ:ವಸುಂಧರಾ ಭೂಪತಿ  ತಿಳಿಸಿದರು. 

ರಾಜ್ಯ ಶಿಕ್ಷಣ ನೀತಿ: ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆ ಯನ್ನು ಜಾರಿಗೆ ತರಲು  ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು  ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶ ಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.  

ಸೌಜನ್ಯ ಪ್ರಕರಣ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ  ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.

ಹಿರಿಯ ಸಾಹಿತಿಗಳಾದ ಡಾ: ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ: ವಸುಂಧರಾ ಭೂಪತಿ, ಡಾ:ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್.ಎನ್.ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವ H.D.Kumaraswamy

[ccc_my_favorite_select_button post_id="105039"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!