ಈ ದಿನದ ವಿಶೇಷ: ಖಾಯಂ ಮುಖ್ಯಮಂತ್ರಿ ಚಂದ್ರು ಜನ್ಮದಿನ

ಹಿರಿಯ ನಟ, ರಂಗಕರ್ವಿು, ರಾಜಕಾರಣಿ ಡಾ. ಮುಖ್ಯಮಂತ್ರಿ ಚಂದ್ರು (ಮೂಲ ಹೆಸರು ಚಂದ್ರಶೇಖರ). ಕರ್ನಾಟಕದ ‘ಖಾಯಂ ಮುಖ್ಯಮಂತ್ರಿ’ ಎಂದೇ ಜನಪ್ರಿಯರಾಗಿರುವ ಅವರು ಇತ್ತೀಚೆಗಷ್ಟೇ 70ಕ್ಕೆ ಕಾಲಿಟ್ಟಿದ್ದಾರೆ. 

ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಪ್ರಸಿದ್ಧರಾಗಿದ್ದಾರೆ. ಇವರ ಮೂಲ ಹೆಸರು ಚಂದ್ರಶೇಖರ್. ರಾಜಕೀಯದಲ್ಲೂ ಗಣನೀಯ ಹೆಸರಾಗಿದ್ದಾರೆ.

ಚಂದ್ರು ಅವರು ಹುಟ್ಟಿದ್ದು ಆಗಸ್ಟ್ 28,1953 ರಂದು ನೆಲಮಂಗಲ ತಾಲೂಕಿನ ಹೊನ್ನಸಂದ್ರದಲ್ಲಿ. ತಂದೆ ಎನ್.ನರಸಿಂಹಯ್ಯ, ತಾಯಿ ತಿಮ್ಮಮ್ಮ.. ಚಂದ್ರು ಮೂಲ ಹೆಸರು ಚಂದ್ರಶೇಖರ್. ಮನೆಯಲ್ಲಿ ಬಡತನ ಜೊತೆಗೆ ಮಗ ತುಂಬಾ ತುಂಟ. ಹೀಗಾಗಿ ತಂದೆ ತಾಯಂದಿರು ಮಗನನ್ನು ಸಿದ್ಧಗಂಗಾ ಮಠಕ್ಕೆ ಸೇರಿಸಿದರು. ಮುಂದೆ ಅವರು ಬಿಎಸ್ಸಿ ಓದಿದರು.

ಚಂದ್ರು ಅವರ ವೃತ್ತಿಬದುಕಿಗೆ ತಿರುವು ನೀಡಿದ್ದು ‘ಮುಖ್ಯಮಂತ್ರಿ’ ನಾಟಕ. ಈ ನಾಟಕದಲ್ಲಿನ ಮುಖ್ಯಮಂತ್ರಿ ಪಾತ್ರ ಅವರಿಗೆ ಅದೆಷ್ಟು ಜನಪ್ರಿಯತೆ ತಂದುಕೊಟ್ಟಿತು ಎಂದರೆ ಜನ ಅವರನ್ನು ಸದಾ ‘ಮುಖ್ಯಮಂತ್ರಿ’ ಎಂದೇ ಗುರುತಿಸುತ್ತಾರೆ. ಈ ನಾಟಕದಲ್ಲಿ ಅವರು ನಟಿಸಿದ್ದೇ ಆಕಸ್ಮಿಕವಂತೆ. ‘ಮುಖ್ಯಮಂತ್ರಿ’ ನಾಟಕದ ಕುರಿತೇ ಆತ್ಮಚರಿತ್ರೆಯಲ್ಲಿ ಒಂದು ಅಧ್ಯಾಯವನ್ನು ಚಂದ್ರು ಬರೆದಿದ್ದಾರೆ. ಮುಂಚೆ ಮುಖ್ಯಮಂತ್ರಿ ಪಾತ್ರವನ್ನು ಟಿ.ಎಸ್. ಲೋಹಿತಾಶ್ವ ಮಾಡಬೇಕಿತ್ತಂತೆ. 

ಚಂದ್ರು ನಿರ್ದೇಶಿಸಬೇಕಿತ್ತಂತೆ. ಆದರೆ, ಅನಾರೋಗ್ಯದಿಂದಾಗಿ ಲೋಹಿತಾಶ್ವ ಅವರಿಗೆ ನಟಿಸುವುದಕ್ಕೆ ಸಾಧ್ಯವಾಗದಿದ್ದರಿಂದ, ಅನಿವಾರ್ಯವಾಗಿ ಮುಖ್ಯಮಂತ್ರಿ ಪಾತ್ರವನ್ನು ಮಾಡುವುದಕ್ಕೆ ಚಂದ್ರು ಒಪ್ಪಬೇಕಾಯಿತಂತೆ.

ಮುಖ್ಯಮಂತ್ರಿ ಚಂದ್ರು ಕಳೆದ 44 ವರ್ಷಗಳಿಂದ ನೇಮಕಗೊಳ್ಳದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಿದ್ದಾರೆ. ‘ಮುಖ್ಯಮಂತ್ರಿ’ ಹೆಸರಿನ ನಾಟಕದಲ್ಲಿ ಅವರು ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಿದ್ದಾರೆ.

ಚಂದ್ರು ಅವರಿಗೆ ಆಕಸ್ಮಿಕವಾಗಿ ಬಂದ ಈ ಪಾತ್ರದ ಖ್ಯಾತಿ ಮತ್ತು ರಾಜಕೀಯ ಅದೃಷ್ಟವನ್ನು ತಂದುಕೊಟ್ಟಿದೆ. ಇದುವರೆಗೆ 800 ಕ್ಕೂ ಬಾರಿ ಪ್ರದರ್ಶನಗೊಂಡಿರುವ ಈ ನಾಟಕವನ್ನು ಆರ್‌ ಗುಂಡೂರಾವ್‌ನಿಂದ ಹಿಡಿದು ಸಿದ್ದರಾಮಯ್ಯವರೆಗೆ 14 ಮುಖ್ಯಮಂತ್ರಿಗಳು ನೋಡಿದ್ದಾರೆ.

ರಂಗಭೂಮಿಯ ಸ್ನೇಹಿತರಿಂದ ಉತ್ತೇಜಿತರಾಗಿ 1975ರಲ್ಲಿ ‘ತಾಯಿ’ ನಾಟಕದಲ್ಲಿ ಸಮುದಾಯದ ಪ್ರಸನ್ನರು ನೀಡಿದ ಪಾತ್ರದಿಂದ ಚಂದ್ರು ಅಪಾರ ಯಶಸ್ಸು ಪಡೆದರು. ಮುಖ್ಯಮಂತ್ರಿ ನಾಟಕದಲ್ಲಿ ಅಭಿನಯದಿಂದ ಬಂದ ಪ್ರಸಿದ್ಧಿ ಜೊತೆಗೆ ‘ಮುಖ್ಯಮಂತ್ರಿ ಚಂದ್ರು’ ಎಂಬ ಖಾಯಂ ಹೆಸರು ಬಂದದ್ದು ಈಗ ಇತಿಹಾಸ. 

ಅವರು ಬಿ.ವಿ. ರಾಜಾರಾಂ ಜೊತೆ ಸೇರಿ ನಿರ್ದೇಶಿಸಿದ ನಾಟಕ ಅಚಲಾಯತನ. ನಂತರ ಹಲವಾರು ನಾಟಕಗಳ ನಿರ್ದೇಶನ ಮಾಡಿದ ಚಂದ್ರು ಅವರ ಮೋಡಗಳು, ಮೂಕಿ ಟಾಕಿ, ಎಲ್ಲಾರು ಮಾಡುವುದು. ಗರ್ಭಗುಡಿ, ಕತ್ತಲೆ ದಾರಿದೂರ, ಕಾಲಿಗುಲ, ಭರತಪ್ಪನ ಸೊಂಟಕ್ಕೆ ಗಂಟೆ, ಕೇಳು ಜನಮೇಜಯ, ಕಂಬಳಿಸೇವೆ, ಹೋಂ ರೂಲು ಮುಂತಾದುವು ಜನಪ್ರಿಯವೆನಿಸಿದವು. 

ಮುಖ್ಯಮಂತ್ರಿ, ತಾಯಿ, ಕತ್ತಲೆ ದಾರಿದೂರ, ಘಾಸಿರಾಂ ಕೊತ್ವಾಲ್‌, ಕಾಲಿಗುಲ, ನಮ್ಮೊಳಗೊಬ್ಬ ನಾಜೂಕಯ್ಯ, ಆಸ್ಫೋಟ ಮುಂತಾದ ನಾಟಕಗಳ ಪ್ರಮುಖ ಪಾತ್ರಧಾರಿಯಾಗಿದ್ದ ಚಂದ್ರು ಅವರನ್ನು ಮುಂದೆ ಚಿತ್ರರಂಗ ತನ್ನವರನ್ನಾಗಿಸಿಕೊಂಡಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!