ಬೆಳ್ತಂಗಡಿ, (ಆ.28): ‘ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ನಿಂದಿಸುತ್ತಿರುವ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಡಾ.ಹೆಗ್ಗಡೆ ಕುಟುಂಬದವರ ಪರ ಕೋರ್ಟ್ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಸೌಜನ್ಯ ಹತ್ಯೆ ಪ್ರಕರಣದ ಕುರಿತು ಈಗಾಗಲೇ ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಅನ್ನೂ ಸಲ್ಲಿಸಿದ್ದು, ಪ್ರಕರಣದಲ್ಲಿ ಬಂಧಿತ ಸಂತೋಷ್ ರಾವ್ ನನ್ನು ನ್ಯಾಯಾಲಯವೇ ನಿರಪರಾಧಿ ಎಂದು ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆಗಳು ಆರಂಭವಾಗಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….