ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ: ಬಸವರಾಜ ಬೊಮ್ಮಾಯಿ

ಮಂಡ್ಯ, (ಸೆ.08): ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ. ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು  ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದು ಅಭಿಪ್ರಾಯ ಪಟ್ಟರು. 

ನೀರು ಹರಿಸುವುದನ್ನು ನಿಲ್ಲಿಸಬೇಕು: ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ  ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ರಾಜ್ಯ ಸರ್ಕಾರ ಇದುವರೆಗೂ ನಮ್ಮ ರೈತರಿಗೆ 33 ಟಿಎಂಸಿ ನೀರು ಬಿಡಬೇಕಿತ್ತು. ಕೇವಲ 7 ಟಿಎಂಸಿ ನೀರು ಬಿಟ್ಟಿದ್ದಾರೆ, ನಮ್ಮ ರೈತರು ಎಲ್ಲಿಗೆ ಹೋಗಬೇಕು. ಕಾವೇರಿ ಭಾಗದ ಜನರು ನಿಮಗೆ ಬಹುಮತ‌ ನೀಡಿದ್ದಾರೆ. ಅವರಿಗೆ ಇದೇ ಬಹುಮಾನಾನಾ ಎಂದು ಪ್ರಶ್ನಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಮೇಕೆದಾಟು ಬಗ್ಗೆ ಹೇಳಿದ್ದಾರೆ. ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಕಾರ್ಪೊರೇಶನ್ ನವರು ವಿದ್ಯುತ್ ಉತ್ಪಾದನೆಗೆ ನಾಲ್ಕು ಡ್ಯಾಮ್ ಗಳಿಗೆ ಅನುಮತಿ ನೀಡಿದ್ದರು. ಆದರೆ, ತಮಿಳುನಾಡು ವಿರೋಧ ಮಾಡಿತು. ನಾನು 2012 ರಲ್ಲಿ ನೀರಾವರಿ ಸಚಿವನಾಗಿದ್ದಾಗ ಮೇಕೆದಾಟು ಯೋಜನೆ ಮಾಡಲು ತೀರ್ಮಾನಿಸಿ, ಫಿಜಿಬಿಲಿಟಿ ರಿಪೊರ್ಟ್ ಸಿದ್ದಪಡಿಸಿದ್ದೇವು. ಡಿಪಿಆರ್ ಸಿದ್ದಪಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ ಮಾಡಿದರು. ಪ್ರಕರಣ ಕೊರ್ಟ್ ನಲ್ಲಿದೆ ಅಂತ ಹೇಳಿದಾಗ ಒಪ್ಪಲಿಲ್ಲ. ಈಗ ಅವರೇ ಸತ್ಯ ಒಪ್ಪಿಕೊಂಡಿದ್ದಾರೆ ಎಂದರು.

ರೈತ ಸಂಘದವರು ಕಾವೇರಿ ರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡಬಾರದು ಅಂತ ಕಾದು ನೋಡಿದೆವು. ಸಿಡಬ್ಲುಸಿ ಸಭೆ ಕರೆಯುವ ಮೊದಲು ನಾನು ಸಿಎಂಗೆ ಪತ್ರ ಬರೆದಿದ್ದೆ, ಸರ್ವಪಕ್ಷ ಸಭೆ ಕರೆಯುವಂತೆ ಒತ್ತಡ ಹೇರಿದ್ದೇವೆ. ಸರ್ಕಾರ ಈಗಲೂ ನೀರು ಹರಿಸುವುದನ್ನು ತಡೆಯುವಂತೆ ಒತ್ತಡ ಹೇರಲು ವಸ್ತುಸ್ಥಿತಿ ಅರಿಯಲು ಬಂದಿದ್ದೇವೆ ಎಂದರು.

ಕಾಂಗ್ರೆಸ್ ನಿಂದ ಓಲೈಕೆ ರಾಜಕಾರಣ: ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. 

ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ, ಸಂಸದರಾದ ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ ಜೊತೆಯಲ್ಲಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

[ccc_my_favorite_select_button post_id="105692"]
ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ

[ccc_my_favorite_select_button post_id="105676"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 35-40 ವರ್ಷದ ಅಪರಿಚಿತ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇಂದು ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್

[ccc_my_favorite_select_button post_id="105685"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!