ಬೀದಿ ಬದಿ ಅಂಗಡಿಗಳ ತೆರವು: ವ್ಯಾಪಾರಸ್ಥರ ಆಕ್ರೋಶ, ದೊಡ್ಡಬಳ್ಳಾಪುರ ನಗರಸಭೆ ಬಳಿ ಪ್ರತಿಭಟನೆ..!

ದೊಡ್ಡಬಳ್ಳಾಪುರ, (ಸೆ.08): ನಗರದಲ್ಲಿ ಕಳೆದ ಒಂದು ವಾರದಿಂದ ರಸ್ತೆ ಬದಿ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸುತ್ತಿರುವುದನ್ನು ಖಂಡಿಸಿ ಇಂದು ವ್ಯಾಪಾರಿಗಳು ನಗರಸಭೆ ಮುಂಭಾಗ  ಪ್ರತಿಭಟನೆ ನಡೆಸಿದರು.

ಬೀದಿ ಬದಿ ವ್ಯಾಪಾರಿಗಳ ಹೋರಾಟ ಸಮಿತಿ ಹಾಗೂ ಸಿಐಟಿಯು ನೇತೃತ್ವದಲ್ಲಿ ಟಿ.ಬಿ ವೃತ್ತದಿಂದ ಮೆರವಣಿಗೆ ಮೂಲಕ ನಗರಸಭೆಗೆ ತೆರಳಕ ದಿಕ್ಕಾರ ಕೂಗಿ, ಕಚೇರಿ ಮುಂದೆ ಧರಣಿ ನಡೆಸಿದರು.

ಈ ವೇಳೆ ಸಿಐಟಿಯುನ ಜಿಲ್ಲಾಧ್ಯಕ್ಷ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ನಗರಸಭೆ ಆಯುಕ್ತರು, ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನು ಕರೆದು ಒಂದು ವರ್ಷಗಳ ಅಂತರವಾಗಿದೆ, ಈ ಸಮಿತಿಗೆ ನಗರಸಭೆ ಆಯುಕ್ತರೇ ಅಧ್ಯಕ್ಷರಾಗಿರುತ್ತಾರೆ, ಆದರೂ ಸಭೆ ಕರೆಯದೇ ನಿರ್ಲಕ್ಷ್ಯ ಮಾಡಿರುವುದು ಖಂಡನೀಯ ಎಂದರು.

ನಗರಸಭೆ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಏಕಾ ಏಕಿ ಅಂಗಡಿಗಳನ್ನು ತೆರವುಗೊಳಿಸಿರುವುದು ಖಂಡನೀಯ. ಈ ಮೊದಲು ತಳ್ಳುವ ಗಾಡಿ ಮೂಲಕ ವ್ಯಾಪಾರ ಮಾಡುತ್ತಿದ್ದರು.

ತಮ್ಮ ರಕ್ಷಣೆಗೋಸ್ಕರ ಸಾಲ ಮಾಡಿ ವ್ಯಾಪಾರಸ್ಥರು ಸಾವಿರಾರು ರುಪಾಯಿ ಖರ್ಚು ಮಾಡಿ ಪೆಟ್ಟಿ‌ ಅಂಗಡಿಗಳನ್ನು ನಿರ್ಮಾಣ ಮಾಡಿಕೊಂಡಿದ್ದರು,ಆದರೆ ಅಧಿಕಾರಿಗಳು ಇದನ್ನು ಲೆಕ್ಕಿಸದೆ ಜೆಸಿಬಿಗಳ ಮೂಲಕ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದಾಗಿ ವ್ಯಾಪಾರಸ್ಥರು ಬೀದಿ ಪಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷವೇ ನಗರಸಭೆ ಆಯುಕ್ತರಿಗೆ  ಬೀದಿ ಬದಿ ವ್ಯಾಪಾರಿಗಳನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಒಕ್ಕಲೆಬ್ಬಿಸಬಾರದು. ನಗರದಲ್ಲಿ ಅಗತ್ಯವಿರುವ 7 ಕಡೆ ವ್ಯಾಪಾರಿ ವಲಯವನ್ನು ಸ್ಥಾಪಿಸಿ, ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದೆವು, ಆದರೆ, ನಮ್ಮ ಮನವಿಗೆ ಸ್ಪಂದಸಿದ ನಗರ ಸಭೆ ಇದೀಗ ಏಕಾ ಏಕಿ ತೆರವು ಕಾರ್ಯ ನಡೆಸುತ್ತಿರುವುದು ವ್ಯಾಪಾರಸ್ಥರ ಮೇಲೆ  ನಡೆಸುತ್ತಿರುವ ದೌರ್ಜನ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಪತ್ರ ಸ್ವೀಕರಿಸಿದ ನಗರಸಭೆ ಪೌರಾಯುಕ್ತ ಪರಮೇಶ್ ಮಾತನಾಡಿ, ಲೋಕೋಪಯೋಗಿ ಇಲಾಖೆ, ಪೋಲಿಸ್ ಇಲಾಖೆ ಹಾಗೂ ನಗರಸಭೆ ಅಧ್ಯಕ್ಷರು, ಸದಸ್ಯರ ಜೊತೆ  ಸಭೆ ನಡೆಸಿ  ಸೂಕ್ತ  ತೀರ್ಮಾನ ತೆಗೆದುಕೊಳ್ಳಲಾಗುವುದಾಗಿ ಭರವಸೆ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!