ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಂಸದ ಬಿ.ಎನ್.ಬಚ್ಚೇಗೌಡ ಸೂಚನೆ

ಬೆಂ.ಗ್ರಾ.ಜಿಲ್ಲೆ, (ಸೆ.15): ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅತೀ ಕಡಿಮೆಯಾಗಿದ್ದು ನಾಲ್ಕು ತಾಲ್ಲೂಕುಗಳನ್ನು ತೀವ್ರ ಬರ ತಾಲ್ಲೂಕು ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಅಗತ್ಯವಿರುವ ವರದಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕೇಂದ್ರ ತಂಡ ಜಿಲ್ಲೆಗೆ ಭೇಟಿ ನೀಡಿದಾಗ ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆ ಅಧಿಕಾರಿಗಳು ಕೇಂದ್ರ ತಂಡಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗುತ್ತಿದ್ದು ಅವಶ್ಯವಾಗಿರುವ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಪೂರೈಕೆ, ಆಹಾರ ಪೂರೈಸಲು ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಿ ಎಂದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಿರ್ಮಾಣವಾಗಬೇಕಾಗಿರುವ ಮನೆಗಳು,  ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಬೇಕು ಎಂದು ಹೇಳಿದರು.

ಕಂದಾಯ ಇಲಾಖೆಯಡಿ ಬರುವ ಕಂದಾಯ ಮನವಿಗಳು ಸೇರಿದಂತೆ ಸಕಾಲ ದಲ್ಲಿ ಸಲ್ಲಿಸುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದರು.

 ಶಾಲಾ ಕಾಲೇಜು ಕಟ್ಟಡ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿ ಬರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳು ಪೂರ್ಣಗೊಳಿಸಿ , ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಕನ್ನಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯು ವಿಳಂಬವಾಗುತ್ತಿದ್ದು, ಇದರಿಂದಾಗಿ ಕಾಮಗಾರಿ ವೆಚ್ಚವು ಹೆಚ್ಚಾಗಲಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸಂಸದರು ನಿರ್ದೇಶಿಸಿದರಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ವಸತಿರಹಿತರಿಗೆ ನಿವೇಶನ ಗುರುತಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಅಕ್ಷರ ದಾಸೋಹ ಯೋಜನೆಯಡಿ 72402 ಶಾಲಾ ಮಕ್ಕಳಿಗೆ ಹಾಲು, ಬಾಳೆಹಣ್ಣು, ಮೊಟ್ಟೆ ಬಿಸಿಯೂಟ ನೀಡಲಾಗುತ್ತಿದ್ದು ಇದರಿಂದಾಗಿ ಶಾಲಾ ಮಕ್ಕಳ ಹಾಜರಾತಿ ಹೆಚ್ಚಳಗೊಂಡಿದೆ ಎಂದು ಶಿಕ್ಷಣ ಹಾಗೂ ಅಕ್ಷರ ದಾಸೋಹ ಅಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು.

ಜಲಜೀವನ್ ಮಿಷನ್ ಯೋಜನೆ ಅಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ಎಂದರಲ್ಲದೆ ಪ್ರತಿಯೊಂದು ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು.

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿ ಬರುವಂತಹ ಗಂಗ ಕಲ್ಯಾಣ ಯೋಜನೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದರು.

ಸರ್ಕಾರಿ ಯೋಜನೆಗಳನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಕ್ಕೆ ತರಬೇಕು, ಅಧಿಕಾರಿಗಳು ಸಮಯಪ್ರಜ್ಞೆ ಪಾಲಿಸಿ ಕರ್ತವ್ಯವನ್ನು ಜವಾಬ್ದಾರಿಯಾಗಿ ನಿರ್ವಹಿಸಬೇಕು. ಜಿಲ್ಲೆಯನ್ನು ಎಲ್ಲಾ ವಿಧದಲ್ಲೂ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ ಕೆ.ಎನ್, ಉಪ ಕಾರ್ಯದರ್ಶಿ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="105658"]
ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ

[ccc_my_favorite_select_button post_id="105676"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 35-40 ವರ್ಷದ ಅಪರಿಚಿತ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇಂದು ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್

[ccc_my_favorite_select_button post_id="105685"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!