Site icon ಹರಿತಲೇಖನಿ

ಜನವರಿ 12 ರಂದು ಹಣ ಜಮೆ: ಸಿಎಂ

ಬೆಂಗಳೂರು, (ಡಿ.27); ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರೆಂಟಿಯಾದ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಡಿ ಪದವೀಧರರಿಗೆ ರೂ.3000, ಡಿಪ್ಲೊಮಾ ಮುಗಿಸಿದವರಿಗೆ ರೂ.1500 ಸಹಾಯಧನ 2 ವರ್ಷಗಳ ಕಾಲ ನೀಡಲಿದ್ದು, ಯಾರು ಅಧಿಕೃತವಾಗಿ ನೋಂದಣಿ ಮಾಡಿಸುತ್ತಾರೋ ಅವರ ಖಾತೆಗೆ ಜನವರಿ 12 ರಂದು ಹಣ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸೌಲಭ್ಯ ಪಡೆಯಲು ಆನ್‌ಲೈನ್‌ನಲ್ಲಿ ಉಚಿತವಾಗಿ ರಿಜಿಸ್ಟರ್ ಮಾಡಿಸಿಕೊಳ್ಳಬಹುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version