ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ ಕಾಂಗ್ರೆಸ್, ಕೇಂದ್ರ ‌ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದ ಮಾನ ಮರ್ಯಾದೆ ಇಲ್ಲದ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು, (ಫೆ.12): ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು. ಹಿಂದಿನ ಬಿಜೆಪಿ ಸರ್ಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು. ಈ ಸರ್ಕಾರ ಕಂತು ಕಂತಾಗಿ ನೀಡುವುದು ತಪ್ಪು. ನಾವು 25 ಸಾವಿರ ರೂ. ಪರಿಹಾರ ಕೇಳಿದ್ದರೆ, ಆ ವಿಷಯವನ್ನು ಪ್ರಸ್ತಾಪಿಸಿಲ್ಲ. ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲಾಗಿದೆ ಎಂದು ದೂರಿದರು.

ಮಕ್ಕಳಿಗೆ ಚಿಕ್ಕಿ ಮಿಠಾಯಿ ಕೊಟ್ಟು ಅವರ ಕೈಯಲ್ಲೇ ಶೌಚಾಲಯ ತೊಳೆಸಲಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿತ್ತು. ಮೆಟ್ರೊ ರೈಲು ಯೋಜನೆ ಕೇಂದ್ರ ಸರ್ಕಾರದಿಂದ ಆಗಿದೆ. ಜಲಜೀವನ್ ಮಿಷನ್ ಕೂಡ ಕೇಂದ್ರದ ಕೊಡುಗೆ. ಆದರೂ ಅವೆಲ್ಲ ತಮ್ಮದೇ ಎಂದು ಹೇಳಿಕೊಂಡಿದ್ದಾರೆ. ಹಿಂದೂ ದ್ವೇಷ ಹೆಚ್ಚಿದ್ದು, ಭಯೋತ್ಪಾದನಾ ಚಟುವಟಿಕೆ ಅತಿಯಾಗಿದೆ. ಆದರೂ ಸರ್ವ ಜನಾಂಗದ ಶಾಂತಿಯ ತೋಟ ಎಂದಿದ್ದಾರೆ. ಸರ್ಕಾರ ಕಾನೂನು ಸುವ್ಯವಸ್ಥೆಯನ್ನೇ ಕಾಪಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕನ್ನಡ ಉಳಿವು ಎಂದು ಹೋರಾಟಗಾರರನ್ನು ಜೈಲಿಗೆ ಹಾಕಿದ್ದಾರೆ. ಎಸ್ ಸಿಎಸ್ಪಿ, ಟಿಎಸ್ಪಿ ಹಣವನ್ನು ದಲಿತರಿಗೆ ಬಳಸದೆ ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಒಂದೇ ಒಂದು ಕಾಮಗಾರಿ ನಡೆದಿಲ್ಲ ಎಂದು ಶಾಸಕರು ಹೇಳಿದ್ದಾರೆ. 40 ಪರ್ಸೆಂಟ್ ಕಮಿಶನ್ ಸರ್ಕಾರ ಎಂದು ಗುತ್ತಿಗೆದಾರರು ಹೇಳಿದ್ದಾರೆ ಎಂದು ಹೇಳಿದರು.

ರೈತ ಆತ್ಮಹತ್ಯೆ ಹೆಚ್ಚಳ: ಬರಗಾಲವಿದ್ದರೂ ಕಳೆದ ವರ್ಷಕ್ಕಿಂತ ಆತ್ಮಹತ್ಯೆ ಕಡಿಮೆಯಾಗಿದೆ ಎಂದು ಹೋಲಿಸಿಕೊಂಡಿದ್ದಾರೆ. ಇವರದ್ದೇ ಸರ್ಕಾರದ ಸಚಿವ ಶಿವಾನಂದ ಪಾಟೀಲ್‌ ಅವರು ಪರಿಹಾರ ಪಡೆಯಲೆಂದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೀಳಾಗಿ ಮಾತಾಡಿದ್ದರು. ಆತ್ಮಹತ್ಯೆ ಹೆಚ್ಚಿದ್ದರೂ ಅದನ್ನು ಮುಚ್ಚಿಟ್ಟು ಸುಳ್ಳು ಹೇಳಿದ್ದಾರೆ.

2 ಸಾವಿರ ರೂ. ಪರಿಹಾರ ಎಂದು ಕಾಟಾಚಾರಕ್ಕೆ ಘೋಷಣೆ ಮಾಡಿ, ನಂತರ ಎಲ್ಲರಿಗೂ ಪರಿಹಾರ ನೀಡುವ ಕೆಲಸ ಮಾಡಿಲ್ಲ. ಫ್ರೂಟ್ಸ್ ತಂತ್ರಾಂಶದಲ್ಲಿ ಇನ್ನೂ ನೋಂದಣಿ ಸಮಸ್ಯೆ ಇದೆ. ಇಷ್ಟಿದ್ದರೂ ರೈತರಿಗೆ ಪರಿಹಾರ ನೀಡಿದ್ದೇವೆ ಎಂದೇ ನಾಚಿಕೆ ಇಲ್ಲದೆ ಹೇಳಿಕೊಂಡಿದ್ದಾರೆ ಎಂದು ದೂರಿದರು.

ಹಿಂದೂ-ಮುಸ್ಲಿಮರ ನಡುವೆ ದ್ವೇಷ ಬಿತ್ತುವ ಕೆಲಸವನ್ನು ಸರ್ಕಾರ ಮಾಡಿದೆ. ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ನೀಡುವ ಸರ್ಕಾರ, ಪರಿಹಾರ ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತದೆ ಎಂದರು.

ಕಾಂಗ್ರೆಸ್ ನಿಂದಲೇ ಆರ್ಥಿಕ ಅಸಮಾನತೆ: ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ ಎನ್ನುತ್ತಾರೆ. ಆದರೆ ಗ್ಯಾರಂಟಿಗಾಗಿ ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ, ಶಾಸಕರಿಗೆ ಅನುದಾನ ನೀಡದೆ ಸತಾಯಿಸುತ್ತಿದೆ. ಯಾವ ಯೋಜನೆಗೂ ಹಣ ನೀಡದೆ ಗ್ಯಾರಂಟಿಗೆ ಮಾತ್ರ ಹಣ ಕೊಟ್ಟಿರುವುದೇ ಆರ್ಥಿಕ ಅಸಮಾನತೆ. ದಲಿತರ ಹಣವನ್ನು ಗ್ಯಾರಂಟಿಗಾಗಿ ಬಳಕೆ ಮಾಡಿರುವುದೇ ಆರ್ಥಿಕ ಅಸಮಾನತೆ  ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಕಳೆದ ಐದು ವರ್ಷಗಳಲ್ಲಿ 13.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇಂತಹ ಒಂದೂ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಕಾರು ಮತ್ತು ಮೊಪೆಡ್ ನಡುವೆ ಡಿಕ್ಕಿ (Accident) ಸಂಭವಿಸಿ, ಮೊಪೆಡ್ ಸವಾರ ಗಾಯಗೊಂಡಿದ್ದಾನೆ. ಘಾಟಿ ಕ್ಷೇತ್ರದ ಸುಂಕ ವಸೂಲಿ ಕೇಂದ್ರದ ಬಳಿ

[ccc_my_favorite_select_button post_id="104015"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!