ಕಟ್ಟೆ ಪಂಚಾಯಿತಿ ಮೂಲಕ ಬಾವ – ಬಾಮೈದನ ನಡುವಿನ ಕಲಹ ದೂರಾಗಿಸಿದ ದೊಡ್ಡಬೆಳವಂಗಲ ಪೊಲೀಸರು…! ರೈತ ಸಂಘದ ನೆರವು

ದೊಡ್ಡಬಳ್ಳಾಪುರ, (ಜೂ.01); ರಸ್ತೆ ವಿಚಾರವಾಗಿ ಆರಂಭವಾಗಿದ್ದ ಸಂಬಂಧಿಕರ ನಡುವೆ ಉಂಟಾಗಿದ್ದ ಕಲಹ ದೊಡ್ಡಬೆಳವಂಗಲ ಪೊಲೀಸರು ಹಾಗೂ ರೈತ ಸಂಘದ ಮುಖಂಡರು ನಡೆಸಿದ ಕಟ್ಟೆ ಪಂಚಾಯಿತಿಯಿಂದಾಗಿ  ಒಂದಾಗಿ ಬಾಳುವುದಾಗಿ ಬಾವ – ಬಾಮೈದ ಪ್ರಮಾಣ ಮಾಡಿರುವ ಘಟನೆ ತಾಲೂಕಿನ ಗಾಣದಾಳು ಗ್ರಾಮದಲ್ಲಿ ನಡೆದಿದೆ.

ದೂರು – ಪ್ರತಿ ದೂರಿನ ಮೂಲಕ ನ್ಯಾಯಲಯದ ಬಾಗಿಲಿಲು ತಟ್ಟುವ ಪರಿಸ್ಥಿತಿಯಲ್ಲಿದ್ದ ಬಾವ – ಬಾಮೈದ ನಡುವಿನ ಕಲಹಕ್ಕೆ ಪೊಲೀಸರು, ರೈತ ಸಂಘದವರು ಸಂಧಾನ ನಡೆಸಿ, ಮುಂದೆ ಬೆಳೆಯುತ್ತಲೇ ಹೋಗುತ್ತಿದ್ದ ಕಲಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಣದಾಳು ಗ್ರಾಮದಲ್ಲಿ ಬಾವ – ಬಾಮೈದರಾದ ಮಂಜುನಾಥ ಮತ್ತು ಶಂಕರ್ ನಡುವೆ ರಸ್ತೆ ವಿಚಾರವಾಗಿ ಜಗಳ ಮಾಡಿಕೊಂಡಿದ್ದರು. ಇದರ ನಡುವೆ ಶಂಕರ ಅವರು ತೋಟ ಮಾಡಿಕೊಂಡಿದ್ದ 53 ಅಡಕೆ ಗಿಡಗಳನ್ನು ಅಪರಿಚಿತ ದುಷ್ಕರ್ಮಿಗಳು ಕತ್ತರಿಸಿಹಾಕಿದ್ದರು‌.

ಇದು ಮಂಜುನಾಥ್ ಮಾಡಿರುವ ಕೃತ್ಯವೆಂದು ಶಂಕರ ದೂರು ನೀಡಿದರೆ, ಶಂಕರ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆಂದು ಮಂಜುನಾಥ್ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿತ್ತು.

ಕೇವಲ ರಸ್ತೆ ವಿಚಾರವಾಗಿ ಆರಂಭವಾದ ಬಾವ – ಬಾಮೈದ ನಡುವಿನ ಕಲಹ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ವಿಚಾರ ತಿಳಿದ ದೊಡ್ಡಬೆಳವಂಗಲ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್, ರೈತ ಸಂಘದ ಪದಾಧಿಕಾರಿಗಳೊಂದಿಗೆ ಗಾಣದಾಳು ಗ್ರಾಮಕ್ಕೆ ತೆರಳಿ ಮಂಜುನಾಥ ಮತ್ತು ಶಂಕರ್ ಅವರ ಜೊತೆ ಈ ಹಿಂದಿನ ಕಾಲದಂತೆ ಕಟ್ಟೆ ನ್ಯಾಯ ಪಂಚಾಯಿತಿ ಮಾಡಿಸಿದರು.

ಈ ವೇಳೆ ಶಂಕರನ ತೆಂಗಿನ ಗಿಡಗಳನ್ನು ಕತ್ತರಿಸಿಲ್ಲ ಎಂದು ಮಂಜುನಾಥ್ ದೇವರ ಮೇಲೆ ಪ್ರಮಾಣ ಮಾಡಿದರು. ಇದರಿಂದಾಗಿ ಶಂಕರನಲ್ಲಿದ್ದ ಸಂದೇಹ ದೂರಾದಂತೆ ಕಂಡು ಬಂತು. ನಂತರ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ದ್ವೇಷದಿಂದ ಉಂಟಾಗುತ್ತಿರುವ ಅವಾಂತರಗಳ ಕುರಿತು ವಿವರಿಸಿ, ಕೆಲ ಸಂದೇಶಗಳನ್ನು ಹೇಳಿ, ದ್ವೇಷ, ಕೋಪ, ಅಸೂಯೆ ತೊರೆದು ಶಾಂತಿ ಸಹಬಾಳ್ವೆಯಿಂದ ಜೀವನ ಮಾಡುವಂತೆ ಸಲಹೆ ನೀಡಿದರು. 

ಇದಕ್ಕೆ ಸಾಥ್ ನೀಡಿದ ಸ್ಥಳೀಯ ರೈತ ಸಂಘದ ಮುಖಂಡರೂ ಕೂಡ ಸಹೋದರರಿಗೆ ತಿಳಿಹೇಳಿ ಸಹಬಾಳ್ವೆಯ ಪಾಠ ಮಾಡಿದರು. ಬುದ್ದಿ ಮಾತಿಗೆ ಸಮ್ಮತಿ ಸೂಚಿಸಿದ ಬಾವ – ಬಾಮೈದ ಪರಸ್ಪರ ಕೈಕುಲುಕಿ ಅನೋನ್ಯವಾಗಿ ಜೀವನ ನಡೆಸುವ ವಾಗ್ದಾನ ಮಾಡಿದರು. 

ಇದೇ ವೇಳೆ ನಾಶವಾಗಿದ್ದ ಶಂಕರನ ಗಿಡಗಳ ಜಾಗದಲ್ಲಿ ಮತ್ತೆ ಗಿಡಗಳನ್ನು ನೆಟ್ಟು ಪೊಲೀಸರು, ರೈತ ಸಂಘದವರು, ಶಂಕರಿಗೆ ಆಗಿದ್ದ ಸಮಯ, ಹಣದ ನಷ್ಟವನ್ನು ಬರಿಸುವ ಪ್ರಯತ್ನ ಮಾಡಿ ಪ್ರಶಂಸಗೆ ಪಾತ್ರರಾದರು.

ಒಟ್ಟಾರೆ ಪೊಲೀಸ್ ಠಾಣೆ ಮೆಟ್ಟಿಲೇರಿ ಕೋರ್ಟು, ಕಚೇರಿ ಅಲೆಯ ಬೇಕಾಗಿದ್ದ ಬಾವ – ಬಾಮೈದರಿಬ್ಬರು ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಹಾಗೂ ರೈತ ಸಂಘದ ಕಾಳಜಿಯಿಂದ ಅನೋನ್ಯವಾಗಿ ಬಾಳುವಂತಾಗಿದ್ದು ಪ್ರಶಂಸೆಗೆ ಕಾರಣವಾಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!