ಮುಂಬೈ, (ಜೂ.02): ಬಾಲಿವುಡ್ ನಟಿ, ಉಪೇಂದ್ರ ಸಿನಿಮಾ ನಾಯಕಿ ರವೀನಾ ಟಂಡನ್ ಅವರ ಮೇಲೆ ಜನರು ಗುಂಪು ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಮುಂಬೈನ ಬಾಂದ್ರಾದಲ್ಲಿ ಶನಿವಾರ ರಾತ್ರಿ ನಡೆದಿದೆ.
ಈ ಘಟನೆಯನ್ನು ಪೊಲೀಸರು ಕೂಡ ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ. ಅಜಾಗರೂಕತೆಯ ಕಾರು ಚಾಲನೆ ಜನರ ಆಕ್ರೋಶಕ್ಕೆ ಕಾರಣ ಎಂದು ತಿಳಿದುಬಂದಿದೆ.
ಈ ಕುರಿತು ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಖಾರ್ ಪೊಲೀಸ್ ಠಾಣೆಯ ಡೈರಿಯಲ್ಲಿ ಘಟನೆಯನ್ನು ನಮೂದಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ನಟಿ ರವೀನಾ ಕೂಡಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರವಿನಾ ಕಾರು ಚಾಲಕ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಲಾಗಿದೆ. ಇದರಿಂದ ಕೋಪಗೊಂಡ ಜನರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಕಾರಿನಿಂದ ಕೆಳಗಿಳಿದು ಬಂದ ತಕ್ಷಣವೇ ಜನರು ರವೀನಾರನ್ನು ತಳ್ಳಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ದಯವಿಟ್ಟು ನನ್ನ ಹೊಡಿಯಬೇಡಿ” ಎಂದು ರವೀನಾ ಹೇಳುತ್ತಿರುವುದು ಕೇಳಿಬಂದಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….