ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ತ್ಯಾಗ ಮಾಡಲು ಸಿದ್ದ; ಕಂಗನಾಗೆ ಕಪಾಳಮೋಕ್ಷ ಮಾಡಿದ ಯುವತಿ ಟ್ವಿಟ್

ನವದೆಹಲಿ, (ಜೂ.08): ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಸಿಐಎಸ್‌ಎಫ್‌ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. 

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ ಮಾಡಿದ ಬಗ್ಗೆ ಯಾವುದೇ ಅಳುಕು ತೋರದ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ತಾನು ಮಾಡಿದ ಕೃತ್ಯದ ಬಗ್ಗೆ ಸಮರ್ಥನೆ ನೀಡಿದ್ದು, ರೈತ ಚಳವಳಿಯಲ್ಲಿ ತೊಡಗಿರುವ ಮಹಿಳೆಯರ ಬಗ್ಗೆ ಕಂಗನಾ ರನೌತ್ ಅವಹೇಳನಕಾರಿಯಾಗಿ ಮಾತನಾಡಿದ್ದರು. 

ಕೇಂದ್ರ ಸರ್ಕಾರ ಜಾರಿ ತರಲು ಹೊರಟಿದ್ದ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಮಹಿಳೆಯರನ್ನು ಅವರು 100 ರೂಪಾಯಿಗೆ ಇಂತಹ ಚಳವಳಿಗಳಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಹೇಳಿದ್ದರು. 

ಆ ಹೋರಾಟದಲ್ಲಿ ನನ್ನ ತಾಯಿಯೂ ಇದ್ದರು. ಹೀಗೆ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ನನ್ನೊಳಗೆ ಆಕ್ರೋಶ ಇತ್ತು ಎಂದು ತಾನು ಕಪಾಳಮೋಕ್ಷ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ದೆಹಲಿಗೆ ಹೋಗಲು ಚಂಡೀಗಢ ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾಗೆ ಭದ್ರತಾ ತಪಾಸಣೆ ವೇಳೆ ಮಹಿಳಾ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದರು. 

ಈ ಆರೋಪದ ಮೇಲೆ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್‌ ಜೊತೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆದರೆ. ರೈತ ಪರ ಸಂಘಟನೆಗಳು ಯುವತಿ ಪರ ಬೆಂಬಲಕ್ಕೆ ನಿಂತಿದ್ದು, ಪ್ರತಿಭಟನೆ ನಡೆಸಲು ಮುಂದಾಗಿವೆ.

ದೇಶದಾದ್ಯಂತ ಕಂಗನಾಗೆ ಕಪಾಳಮೋಕ್ಷ ಮಾಡಿದ ಘಟನೆಯ ಕುರಿತು ಪರ ವಿರೋಧ ಚರ್ಚೆಯೂ ನಡೆಯುತ್ತಿದೆ. ಒಂದಷ್ಟು ಜನ ಕಂಗನಾಗೆ ಹೊಡೆದಿದ್ದು ಸರಿ ಅಂದ್ರೆ, ಮತ್ತೊಂದಷ್ಟು ಜನ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು ಅಂತಾ ಹೇಳ್ತಿದ್ದಾರೆ.

ಈ ಎಲ್ಲದರ ನಡುವೆ, ಕಂಗಾನಾಗೆ ಕಪಾಳ ಮೋಕ್ಷ ಮಾಡಿದ್ದ ಯುವತಿ ಕುಲ್ವಿಂದರ್ ಕೌರ್ ಟ್ವಿಟ್ ಮಾಡಿದ್ದು, ನನ್ನ ತಾಯಿಯ ಗೌರವಕ್ಕಾಗಿ ಅಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ನಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಅಲ್ಲದೆ, ಅಲ್ಲದೆ ಮತ್ತೊಂದು ಟ್ವಿಟ್‌ನಲ್ಲಿ ನನಗೆ ಕೆಲಸದ ಬೆದರಿಕೆ ಹಾಕಬೇಡಿ. ನಾನು ರೈತನ ಮಗಳು, ನನ್ನ ಜೀವನದಲ್ಲಿ ಹೇಗೆ ಚೆನ್ನಾಗಿ ಸಂಪಾದಿಸಬೇಕು ಎಂದು ನನಗೆ ತಿಳಿದಿದೆ.

ನನ್ನಲ್ಲಿ ಎಷ್ಟು ಸಾಮರ್ಥ್ಯವಿದೆ ಎಂದರೆ ನಾನು ಕಷ್ಟಪಟ್ಟು ಮತ್ತೆ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮಹಿಳೆಯರೇ.. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಸಹಿಸದೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

ಮಹಿಳೆಯರೇ.. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಸಹಿಸದೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

ಸಿಮೆಂಟ್, ಕಬ್ಬಿಣ, ವೆಹಿಕಲ್, ಮೊಬೈಲ್, ಟಿವಿ, ಪ್ರಿಡ್ಜ್ ಬೆಲೆ ಹೆಚ್ಚಾಗಿದೆ. ಇದೆಲ್ಲಾ ಬಿಜೆಪಿಯವರಿಗೆ‌ ಕಾಣಿಸ್ತಿಲ್ವಾ. ಏನ್ರಿ ಅಶೋಕ್ ,ವಿಜಯೇಂದ್ರ? DK Shivakumar

[ccc_my_favorite_select_button post_id="105164"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
ಕಾರು ಅಪಘಾತ: ನಾಲ್ವರ ದುರ್ಮರಣ..!

ಕಾರು ಅಪಘಾತ: ನಾಲ್ವರ ದುರ್ಮರಣ..!

ನೆಲಮಂಗಲ: ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ದಾಬಸ್‌ ಪೇಟೆಯ ಅಂಚೆಮನೆ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಗೋಪಾಲ್ (60 ವರ್ಷ), ದೀಪಿಕಾ (35 ವರ್ಷ),

[ccc_my_favorite_select_button post_id="105162"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!