ಫಸಲ್ ವಿಮೆಗೆ ಹಣ ಕಟ್ಟಿದ ದೊಡ್ಡಬಳ್ಳಾಪುರದ ರೈತರಿಗೆ ಭಾರೀ ಮೋಸ..!?; ಕೇಳೋರ್ ಯಾರು ಅನ್ನದಾತರ ಗೋಳು

ದೊಡ್ಡಬಳ್ಳಾಪುರ, (ಜೂ.15); ತೀವ್ರವಾಗಿ ಕಾಡಿದ ಬರದ ನಡುವೆಯೂ ಕೇಂದ್ರ ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಫಸಲ್‌ ವಿಮೆ ಯೋಜನೆಯು ತಾಲೂಕಿನ ರೈತರ ಕೈಹಿಡಿಯದೆ ಹೋಗಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿಮೆ ಕಟ್ಟಿದ ರೈತರ ಆಕ್ರೋಶ ವ್ಯಕ್ತವಾಗಿದೆ‌.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಸದ್ಯದ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ವಿಮಾ ಕಂಪನಿಗಳ ಪರವಾಗಿದ್ದು, ವಿಮೆ ಕಂಪನಿ ಮತ್ತು ಕೃಷಿ ಅಧಿಕಾರಿಗಳು ಷಾಮೀಲಾಗಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪ ರೈತರದ್ದಾಗಿದೆ.

ಕಳೆದ ವರ್ಷ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 15545 ರೈತರು ಒಟ್ಟು ಫಸಲ್ ವಿಮೆಗೆ ಹಣ ಕಟ್ಟಿದ್ದು, ದೊಡ್ಡಬಳ್ಳಾಪುರ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದ್ದರೂ ಕೂಡ ಕೇವಲ 4111ಮಂದಿ ರೈತರಿಗೆ ಮಾತ್ರ ಪರಿಹಾರ ನೀಡಲಾಗಿದೆ.

ಇದರಲ್ಲಿ ರಾಗಿ ಬೆಳೆಗೆ ವಿಮೆ ಮಾಡಿಸಿದ ದೊಡ್ಡಬಳ್ಳಾಪುರ ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, 2023-24 ನೇ ಸಾಲಿನಲ್ಲಿ 12966 ರೈತರು ರಾಗಿ ಬೆಳೆಗೆ ವಿಮೆ ಹಣ ಪಾವತಿಸಿದರೆ, ಬಂದಿರುವುದು ಕೇವಲ 2668 ಮಂದಿಗೆ ಮಾತ್ರ.

ಉಳಿದಂತೆ ಜೋಳದ ಬೆಳೆಗೆ 2008 ರೈತರು ವಿಮೆ ಮಾಡಿಸಿದ್ದು, 1428 ರೈತರಿಗೆ ಮಾತ್ರ ಪರಿಹಾರ ದೊರೆತಿದೆ‌. ಅನಾವೃಷ್ಟಿಯಿಂದ ವ್ಯಾಪಕ ಬೆಳೆ ನಷ್ಟ ಸಂಭವಿಸಿದರೂ ವಿಮಾ ಕಂಪನಿ ತಾಲೂಕಿನ ರೈತರಿಗೆ ಅನ್ಯಾಯ ಎಸಗಿದೆ ಎಂಬ ಆರೋಪ ರೈತರದ್ದು.

ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಒಪ್ಪಂದದಂತೆ ಜಾರಿ ಮಾಡಲಾಗಿದೆ. ಆದರೆ, ವಿಮಾ ಕಂಪನಿ ಆಯ್ಕೆ, ನಿಯಮಾವಳಿ ರಚನೆ ಅಧಿಕಾರ ಕೇಂದ್ರ ಸರಕಾರಕ್ಕಿದ್ದು, ಅನುಷ್ಠಾನ ಮಾತ್ರ ರಾಜ್ಯ ಸರಕಾರದ್ದಾಗಿದೆ. ಇಷ್ಟಾದರೂ, ಯೋಜನೆಯಿಂದ ರೈತ ಸಮುದಾಯಕ್ಕೂ ಅನುಕೂಲವಾಗುತ್ತಿಲ್ಲ. ನಷ್ಟ ಪರಿಹಾರಕ್ಕೆ ನಿಯಮಾವಳಿ ತೊಡಕುಗಳು ರೈತ ಹಿತಾಸಕ್ತಿಗೆ ವಿರುದ್ಧವಾಗಿವೆ.

ಫಸಲ್‌ ಬಿಮಾ ಯೋಜನೆ ರೈತರ ಶ್ರಮದಲ್ಲಿ ವಿಮಾ ಕಂಪನಿಗಳು ಲಾಭ ಮಾಡಿಕೊಳ್ಳಲು ಪೂರಕವಾಗಿದೆ. ಕಂತು ಪಾವತಿಸಿ ಬೆಳೆ ವಿಮೆ ಮಾಡಿಸಿದ ರೈತರಿಗೆ, ಬೆಳೆ ನಷ್ಟವಾದರೂ ಪರಿಹಾರ ಮೊತ್ತ ಸಮರ್ಪಕವಾಗಿ ಸಿಗುತ್ತಿಲ್ಲ. ನಷ್ಟ ಪರಿಹಾರ ಬಯಸಿದ ಸಂದರ್ಭದಲ್ಲಿ ವಿಮಾ ಕಂಪನಿಗಳು ನಿಯಮಾವಳಿ ತೊಡಕು ಮುಂದಿಟ್ಟು ವಂಚಿಸುತ್ತಿವೆ ಎಂಬ ದೂರುಗಳಿವೆ. ಹೀಗಾಗಿ,ರೈತರಿಗೆ ಅನುಕೂಲವಾಗದ ಸದ್ಯದ ಯೋಜನೆ ಮುಂದುವರಿಸುವುದಕ್ಕೆ ಅರ್ಥವಿಲ್ಲ

ವಿಮಾ ಕಂಪನಿಗಳಿಂದ ರೈತರಿಗೆ ಆಗುತ್ತಿರುವ ಈ ಮೋಸದಲ್ಲಿ ಬ್ಯಾಂಕ್‌ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಷಾಮೀಲಾಗುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.

ಅಲ್ಲದೆ ನಿರಂತರ ಅನಾವೃಷ್ಟಿಯಿಂದ ನೊಂದಿರುವ ರೈತರ ಗಾಯದ ಮೇಲೆ ವಿಮೆ ಕಂಪನಿಗಳು ಬರೆ ಎಳೆಯುತ್ತಿರುವುದು ಕಣ್ಣಿಗೆ ಕಾಣುತ್ತಿದ್ದರು ಯಾವುದೇ ರಾಜಕಾರಣಿಗಳು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು ಅನ್ನದಾತರಿಗೆ ಮಾಡುತ್ತಿರುವ ದ್ರೋಹ ಎಂಬ ಆಕ್ರೋಶ ರೈತರದ್ದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!