ಮೇಷ ರಾಶಿಯ ಜುಲೈ 2024 ರ ಭವಿಷ್ಯ: ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ ಸಾಧ್ಯತೆ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಮೇಷ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಮೊದಲನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 00-30 ಡಿಗ್ರಿಗಳನ್ನು ವ್ಯಾಪಿಸಿದೆ.

ಈ ತಿಂಗಳು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಉದ್ಯೋಗ ವಿಷಯದಲ್ಲಿ ಕಠಿಣ ಸಮಯವನ್ನು ಎದುರಿಸಬೇಕಾಗ ಬಹುದು, ಆದರೆ ಆರ್ಥಿಕವಾಗಿ ಮತ್ತು ಕೌಟುಂಬಿಕವಾಗಿ ಉತ್ತಮ ಸಮಯ ವಾಗಿರುತ್ತದೆ. ಉದ್ಯೋಗದಲ್ಲಿರುವವರಿಗೆ ಈ ತಿಂಗಳು ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ಕೆಲವರು ಉದ್ಯೋಗ ನಷ್ಟ ಅಥವಾ ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಎದುರಿಸಬಹುದು.

ಉನ್ನತ ಅಧಿಕಾರಿಗಳಿಂದ ಕಡಿಮೆ ಬೆಂಬಲ ದೊರೆಯಬಹುದು ಮತ್ತು ಮಾಡಿದ ಕೆಲಸಕ್ಕೆ ಸೂಕ್ತ ಮನ್ನಣೆ ಸಿಗದೇ ಇರಬಹುದು. ಪ್ರಮುಖ ಕೆಲಸಗಳು ಮುಂದೂಡಲ್ಪಡಬಹುದು ಅಥವಾ ಅಡೆತಡೆಗಳನ್ನು ಎದುರಿಸಬಹುದು. ಈ ತಿಂಗಳ ಮೊದಲ ಎರಡು ವಾರಗಳು ಅನುಕೂಲಕರವಾಗಿರುತ್ತವೆ, ಆದರೆ ಕೊನೆಯ ಎರಡು ವಾರಗಳು ಕಠಿಣ ಮತ್ತು ಹೆಚ್ಚು ಕೆಲಸದ ಹೊರೆಯನ್ನು ತರುತ್ತವೆ.

ಆರ್ಥಿಕವಾಗಿ, ಈ ತಿಂಗಳು ಉತ್ತಮ ಆದಾಯ ಮತ್ತು ಅನಿರೀಕ್ಷಿತ ಲಾಭಗಳನ್ನು ತರುತ್ತದೆ. ನಿಮ್ಮ ಸಂಗಾತಿ ಅಥವಾ ಕುಟುಂಬ ಸದಸ್ಯರಿಂದ ಅಚ್ಚರಿಯ ಉಡುಗೊರೆಗಳು ಸಿಗಬಹುದು. ಹೂಡಿಕೆಗಳು ಮತ್ತು ವ್ಯವಹಾರದಿಂದ ಲಾಭಗಳು ದೊರೆಯುತ್ತವೆ. ಹಣ ಹೂಡಿಕೆ ಮಾಡಲು ಬಯಸುವವರು ಈ ತಿಂಗಳ 16ರ ಒಳಗೆ ಹೂಡಿಕೆ ಮಾಡುವುದು ಉತ್ತಮ.

ಕೌಟುಂಬಿಕವಾಗಿ ಉತ್ತಮ ಸಮಯವನ್ನು ಕಳೆಯುವಿರಿ. ಮದುವೆ ಅಥವಾ ಇತರ ಶುಭ ಸಮಾರಂಭಗಳಿಗೆ ಹಾಜರಾಗಬಹುದು ಮತ್ತು ಸಂಬಂಧಿಕರನ್ನು ಭೇಟಿಯಾಗಬಹುದು. ಮದುವೆ ಅಥವಾ ಪ್ರೇಮ ಸಂಬಂಧದ ವಿಷಯದಲ್ಲಿ ಕಾಯುತ್ತಿರುವವರಿಗೆ ಈ ತಿಂಗಳು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ. ನಿಮ್ಮ ಸಂಗಾತಿಯಿಂದ ಹೆಚ್ಚಿನ ಪ್ರೀತಿ ಮತ್ತು ವಾತ್ಸಲ್ಯವನ್ನು ನಿರೀಕ್ಷಿಸ ಬಹುದು. ಈ ತಿಂಗಳ ಮೊದಲ ಭಾಗದಲ್ಲಿ ಪ್ರಯಾಣಗಳು ಹೆಚ್ಚಾಗಿರುತ್ತವೆ.

ಆರೋಗ್ಯದ ವಿಷಯದಲ್ಲಿ, ಈ ತಿಂಗಳು ಸಾಮಾನ್ಯವಾಗಿರುತ್ತದೆ. ಮೊದಲ ಭಾಗದಲ್ಲಿ ಆರೋಗ್ಯ ಚೆನ್ನಾಗಿರುತ್ತದೆ. ಎರಡನೇ ಭಾಗದಲ್ಲಿ, ನಾಲ್ಕನೇ ಮನೆಯಲ್ಲಿ ಸೂರ್ಯನ ಸಂಚಾರದಿಂದಾಗಿ ಎದೆ, ಶ್ವಾಸಕೋಶ ಮತ್ತು ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ನಿಮ್ಮ ಬೆನ್ನು ಮತ್ತು ಕುತ್ತಿಗೆಯ ಬಗ್ಗೆಯೂ ಕಾಳಜಿ ವಹಿಸುವುದು ಅಗತ್ಯ. ಪ್ರಯಾಣದ ಸಮಯದಲ್ಲಿ ಎಚ್ಚರಿಕೆಯಿಂದ ಇರುವುದು ಮುಖ್ಯ. ಕೋಪ ಮತ್ತು ಅಹಂಕಾರಕ್ಕೆ ಒಳಗಾಗಿ ವಾಹನವನ್ನು ವೇಗವಾಗಿ ಚಲಾಯಿಸುವುದನ್ನು ತಪ್ಪಿಸಿ.

ವ್ಯವಹಾರದಲ್ಲಿರುವವರಿಗೆ ಈ ತಿಂಗಳು ಉತ್ತಮ ಸಮಯವಾಗಿದೆ. ವ್ಯವಹಾರದಲ್ಲಿ ಪ್ರಗತಿ ಕಂಡುಬರುತ್ತದೆ, ಆದರೆ ಅದೇ ಸಮಯದಲ್ಲಿ ಹೆಚ್ಚಿನ ಕೆಲಸದ ಹೊರೆ ಮತ್ತು ಅನಿರೀಕ್ಷಿತ ಖರ್ಚುಗಳು ಅಥವಾ ಆರ್ಥಿಕ ನಷ್ಟವನ್ನು ಎದುರಿಸಬೇಕಾಗಬಹುದು. ಪಾಲುದಾರರು ಅಥವಾ ಕೆಲವು ಗ್ರಾಹಕರೊಂದಿಗೆ ಸಣ್ಣ ಸಮಸ್ಯೆಗಳು ಉಂಟಾಗಬಹುದು, ಆದರೆ ಉತ್ತಮ ಗಳಿಕೆಯು ಈ ತಿಂಗಳು ನಿಮಗೆ ಸಹಾಯ ಮಾಡುತ್ತದೆ.

ವಿದ್ಯಾರ್ಥಿಗಳಿಗೆ ಮೊದಲ ಭಾಗವು ಅನುಕೂಲಕರವಾಗಿದ್ದರೂ, ಎರಡನೇ ಭಾಗವು ಸಾಮಾನ್ಯವಾಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಗಮನ ಕೇಂದ್ರೀಕರಿಸಲು ಕಷ್ಟಪಡಬಹುದು. ಅವರು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಅವರು ತಮ್ಮ ಕೋಪ ಮತ್ತು ಅಸಹನೆಯನ್ನು ನಿಯಂತ್ರಿಸಿಕೊಳ್ಳುವ ಅಗತ್ಯವೂ ಇದೆ.

ಮೇಷ ರಾಶಿ: ಅಶ್ವಿನಿ ನಕ್ಷತ್ರ (4 ಚರಣ), ಭರಣಿ ನಕ್ಷತ್ರ (4 ಚರಣ), ಕೃತ್ತಿಕಾ ನಕ್ಷತ್ರ (1ನೇ ಚರಣ) ದಲ್ಲಿ ಜನಿಸಿದವರು ಮೇಷ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಮಂಗಳ (ಮಂಗಳ/ ಕುಜ/ ಅಂಗಾರಕ).

ಮೇಷ ರಾಶಿಗೆ ಸೂಚಿಸಲಾದ ಅಕ್ಷರಗಳು: ಚು, ಚೆ, ಚೋ, ಲ, ಲಿ, ಲು, ಲೆ , ಲೊ, ಅ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!