ರಾಜಕೀಯವಾಗಿ ಬೆಳೆಯಬೇಕೆನ್ನುವವರು ಮತದಾರರ ವೈರತ್ವ ಬೆಳೆಸಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

ಗದಗ: (ಜುಲೈ.06): ರಾಜಕೀಯವಾಗಿ ಬೆಳೆಯುವವರು ಮತದಾರರೊಂದಿಗೆ ವೈರತ್ವ ಬೆಳೆಸಿಕೊಳ್ಳಬಾರದು ರಾಜಕಾರಣಿಗಳ ಮನೋಭಾವನೆ ಬದಲಾವಣೆ ಮಾಡಿಕೊಂಡಾಗ ಯಶಸ್ಸು ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಪಟ್ಟಣದ ಜಗದ್ಗುರು ರಂಬಾಪುರಿ ಕಲ್ಯಾಣ ಮಂಟಪದಲ್ಲಿ ಶಿರಹಟ್ಟಿ ಮಂಡಲದ ಕಾರ್ಯಕರ್ತರಿಗೆ ಮುಖಂಡರಿಗೆ ಅಭಿನಂದನೆ ಹಾಗೂ ನೂತನ ಸಂಸರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಆತ್ಮವಿಶ್ವಾಸದಿಂದ ನಡೆದರೆ ಮಾತ್ರ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗುತ್ತದೆ. ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಶೂನ್ಯ ಆಗಿದೆ. ಇದೊಂದು ರೈತ ವಿರೋಧಿ ಸರಕಾರ. ವಿದ್ಯಾರ್ಥಿಗಳ ವಿದ್ಯಾನಿಧಿಯನ್ನು ನಿಲ್ಲಿಸಿದರು, ಬರಗಾಲ ಪರಿಹಾರ ಹಣ ಸರಿಯಾಗಿ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು,

ಶಿರಹಟ್ಟಿ ಕ್ಷೇತ್ರದ ಭಾಗದ ಬಹುದಿನಗಳ ಬೇಡಿಕೆಯಾದ, ಕಾರವಾರ ಇಳಕಲ್  ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ಕೇಂದ್ರ ಸಚಿವರಿಗೆ  ಮನವಿ ಮಾಡಿದ್ದು ಅದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದೇ ರೀತಿ ಯಲವಿಗಿ ಗದಗ ರೈಲ್ವೆ ಮಂಜುರಾತಿ ಆಗಿದ್ದು, ಅದಕ್ಕೆ  ನಾನು ಮುಖ್ಯಮಂತ್ರಿ ಇದ್ದಾಗ ಬಜೆಟ್ ನಲ್ಲಿ  600 ಕೋಟಿ ಹಣ ಇಟ್ಟಿದ್ದೆ ಈ ಸರಕಾರ ಯೋಜನೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ, ಅದನ್ನು ಕಾರ್ಯ ರೂಪಕ್ಕೆ ತರಲು  ಶ್ರಮ ವಹಿಸುತ್ತೇನೆ.

ಆರ್ಥಿಕವಾಗಿ ಶೈಕ್ಷಣಿಕವಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತೇನೆ. ಮುಂಬರುವ ದಿನಗಳಲ್ಲಿ ಜಿ.ಪಂ ತಾ.ಪಂ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಲ್ಲಿ ಕೆಲಸ ಮಾಡಿದರೆ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಪ್ರಸ್ತಾವಿಕವಾಗಿ ಮಾತನಾಡಿದ ಶಾಸಕ ಚಂದ್ರು ಲಮಾಣಿ  ಪಕ್ಷದ ಕಾರ್ಯಕರ್ತರು ಬಸವರಾಜ ಬೊಮ್ಮಾಯಿ ಅವರ ಗೆಲುವಿಗೆ ದುಡಿದಿದ್ದಾರೆ, ಪ್ರತಿ ಮನೆಗೆ ಭೇಟಿ ಕೊಟ್ಟು ಉತ್ಸಾಹದಿಂದ ಕೆಲಸ ಮಾಡಿದ್ದಾರೆ ಕೇಂದ್ರದಲ್ಲಿ ಸಚಿವ ಆಗಬೇಕೆಂಬ ಆಸೆ ಇತ್ತು ಮುಂದಿನ ದಿನಮಾನಗಳಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ಶಿರಹಟ್ಟಿ ಮತ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಬೇಕು, ತುಂಗಾಭದ್ರ ನದಿಯಿಂದ, ರೈತರಿಗೆ ನೀರಾವರಿ ಯೋಜನೆ ತರಬೇಕು, ರಾಜ್ಯ ಸರಕಾರ ಜನತೆಗೆ ಮೊಸ ಮಾಡುತ್ತಿದೆ ಭ್ರಷ್ಟಾಚಾರದಲ್ಲಿ ಮುಳುಗಿದ್ದು ರಾಜ್ಯದ ಲೂಟಿ ಹೊಡಿತಾ ಇದೆ, ಕ್ಷೇತ್ರಕ್ಕೆ ಯಾವುದೆ ಒಂದು ಕಾಮಗಾರಿಗೆ ದುಡ್ಡು  ಕೊಟ್ಟಿಲ್ಲ ಎಂದು ಆರೋಪಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಕಾರ್ಯಕರ್ತರು ಮತದಾರರ ಮನೆಗೆ ಹೋಗಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೀರಿ ಈ ಗೆಲುವು ಕಾರ್ಯಕರ್ತರಿಗೆ ಸಲ್ಲಬೇಕು, ಮುಂದಿನ ದಿನಗಳಲ್ಲಿ ಎಲ್ಲರೂ ಕೂಡಿ ಪಕ್ಷದ ಸಂಘಟನೆ ಮಾಡಬೇಕು ಎಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ ಎಂ ಮಹಾಂತಶೆಟ್ಟರ, ಶಿವಪ್ರಕಾಶ ಮಹಾಜನಶೆಟ್ಟರ, ನಾಗರಾಜ ಕುಲಕರ್ಣಿ, ಸಣ್ಣವೀರಪ್ಪ ಹಳ್ಳೆಪ್ಪನವರ, ಭೀಮಶಿಂಗ ರಾಠೋಡ, ಸಣ್ಣವೀರಪ್ಪ ಹಳ್ಳೆಪ್ಪನವರ, ಜೆಡಿಎಸ್ ತಾಲೂಕ ಅಧ್ಯಕ್ಷ ಪ್ರವೀಣ ಬಾಳಿಕಾಯಿ, ಫಕ್ಕೀರೇಶ ರಟ್ಟೀಹಳ್ಳಿ, ಚಂಬಣ್ಣ ಬಾಳಿಕಾಯಿ, ಎಂ ಆರ್ ಪಾಟೀಲ ನಿಂಗಪ್ಪ ಬನ್ನಿ, ಅಶ್ವಿನಿ ಅಂಕಲಕೋಟಿ ನಾಗರಾಜ ಲಕ್ಕುಂಡಿ, ನಗರ ಬಿಜೆಪಿ ಅಧ್ಯಕ್ಷ ನವೀನ ಬೆಳ್ಳಟ್ಟಿ, ಪೂರ್ಣಜಿ ಕರಾಟೆ, ಶಿವಪ್ರಕಾಶ ಮಹಾಜನಶೆಟ್ಟರ, ಗಂಗಾಧರ ಮೆಣಸಿನಕಾಯಿ, ಹೇಮಗಿರೀಶ ಹಾವನಾಳ, ರವಿ ದಂಡಿನ, ಸೋಮೇಶ ಉಪನಾಳ, ಶಿವಣ್ಣ ಲಮಾಣಿ, ಜಾನು ಲಮಾಣಿ, ಎಂ ಎಸ್ ದೊಡ್ಡಗೌಡ್ರ, ಡಿ ವೈ ಹುನಗುಂದ, ನವೀನ ಹಿರೇಮಠ, ಗಿರೀಶ ಚೌರಡ್ಡಿ ಸೇರಿದಂತೆ  ಶಿರಹಟ್ಟಿ ಮುಂಡರಗಿ ಮಂಡಲದ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!