ದೊಡ್ಡಬಳ್ಳಾಪುರ: ಕೆರೆಯಂಗಳದಲ್ಲಿ‌ ಮೇಯುತ್ತಿದ್ದ ಹಸು ಮೇಲೆ ಚಿರತೆ ದಾಳಿ..!

ದೊಡ್ಡಬಳ್ಳಾಪುರ, (ಜುಲೈ.09); ಕೆರೆಯಂಗಳದಲ್ಲಿ ಮೇಯುತ್ತಿದ್ದ ಹಸುವಿನ (ಪಡ್ಡೆ) ಮೇಲೆ ಚಿರತೆ ದಾಳಿ ನಡೆಸಿ, ಬಲಿ ಪಡೆದಿರುವ ಘಟನೆ ಬೆಟ್ಟದ ಸೊಣ್ಣೇನಹಳ್ಳಿಯಲ್ಲಿ ಸಂಭವಿಸಿದೆ.

ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಗೆ ಒಳಪಡುವ ಬೆಟ್ಟದ ಸೊಣ್ಣೇನಹಳ್ಳಿ ಗ್ರಾಮದ ಮೃತ್ಯುಂಜಯ ಮೂರ್ತಿ ಎನ್ನುವವರು ಪ್ರತಿ ನಿತ್ಯದಂತೆ ಇಂದು ಕೂಡ ಗ್ರಾಮದ ಹೊರವಲಯದಲ್ಲಿರುವ ಕೆರೆಯಂಗಳದಲ್ಲಿ ಜಾನುವಾರುಗಳನ್ನು ಮೇಸಲು ತೆರಳಿದ್ದಾರೆ.

ಸಂಜೆ ನಾಲ್ಕು ಗಂಟೆ ಸುಮಾರಿಗೆ ಹಸುವೊಂದರ ಮೇಲೆ ಚಿರತೆ ದಾಳಿ ನಡೆಸಿದ್ದು, ಕುತ್ತಿಗೆಗೆ ಬಾಯಿಂದ ಕಚ್ಚಿದೆ. ಇದನ್ನು ಗಮನಿಸಿದ ಮೃತ್ಯುಂಜಯ ಮೂರ್ತಿ ಹಾಗೂ ಇತರೆ ರೈತರು ಕೂಗಾಡಿದಾಗ ಹಸುವನ್ನು ಬಿಟ್ಟು ಚಿರತೆ ಪರಾರಿಯಾಗಿದೆ.

ಆದರೆ ಸ್ಥಳಕ್ಕೆ ತೆರಳಿ ನೋಡಿದಾಗ ಹಸು ಸಾವನಪ್ಪಿರುವುದು ತಿಳಿದು ಬಂದಿದ್ದು, ಕೂಡಲೇ ಎಚ್ಚೆತ್ತ ರೈತರು ಇತರೆ ಹಸು, ಕರುಗಳನ್ನು ಊರಿಗೆ ಕರೆತಂದಿದ್ದಾರೆ. ಮತ್ತೆ ಗ್ರಾಮಸ್ಥರೊಂದಿಗೆ ಸ್ಥಳಕ್ಕೆ ತೆರಳಿ ನೋಡಿದಾಗ, ಹಸು ಬಿಟ್ಟು ಪರಾರಿಯಾಗಿದ್ದ ಚಿರತೆ, ಮತ್ತೆ ಬಂದು ಹಸುವನ್ನು ಸುಮಾರು ನೂರು ಮೀಟರ್ ದೂರಕ್ಕೆ ಎಳೆದೊಯ್ದು ಭಕ್ಷಿಸಲು ಮುಂದಾಗಿದ್ದು, ರೈತರನ್ನು ಕಂಡು ಮತ್ತೆ ಪರಾರಿಯಾಗಿದೆ.

ಈ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಪದೆ ಪದೇ ಕಂಡು ಬರುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆ ಸೆರೆ ಹಿಡಿಯಲು ಕ್ರಮಕೈಗೊಳ್ಳುವುದರ ಜೊತೆಗೆ, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸರ್ಕಾರದಿಂದ ಪರಿಹಾರ ದೊರಕಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!