Dap: ದೊಡ್ಡಬಳ್ಳಾಪುರದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ.. ಕೃಷಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತಸಂಘದ ಆಕ್ರೋಶ

ದೊಡ್ಡಬಳ್ಳಾಪುರ, (ಜುಲೈ.16): ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರಾಗಿ,ಮುಸುಕಿನಜೋಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ. ಆದರೆ ಬಿತ್ತನೆಗೆ ಅಗತ್ಯ ಇರುವ ಡಿಎಪಿ ರಸಗೊಬ್ಬರ ದೊರೆಯದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

‘ಅತಿ ಹೆಚ್ಚು ರಸಗೊಬ್ಬರ ಮಾರಾಟ ಮಾಡುವ ನಗರದ ಟಿಎಪಿಎಂಸಿಎಸ್ ಸೇರಿದಂತೆ ಯಾವುದೇ ರಸಗೊಬ್ಬರ ಮಾರಾಟಗಾರರ ಬಳಿಯು ಡಿಎಪಿ ರಸಗೊಬ್ಬರ ದಾಸ್ತಾನು ಇಲ್ಲದಾಗಿದೆ. ಸಾಮಾನ್ಯವಾಗಿ ರಾಗಿ ಬಿತ್ತನೆ ಸಂದರ್ಭದಲ್ಲಿ ಬಹುತೇಕ ಎಲ್ಲಾ ರೈತರು ಮೂಲ ಗೊಬ್ಬರವಾಗಿ ಡಿಎಪಿ ರಸಗೊಬ್ಬರವನ್ನೇ ಹೆಚ್ಚಾಗಿ ಬಳಸುತ್ತಾರೆ.

ಈ ವಾಸ್ತವ ತಿಳಿದು ಸಹ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ರಸಗೊಬ್ಬರ ರೈತರಿಗೆ ದೊರೆಯುವಂತೆ ಮಾಡಬೇಕು. ಮಳೆ ಬೀಳುವ ಸಮಯದಲ್ಲಿ ಬಿತ್ತನೆ ಮಾಡದೇ ರಸಗೊಬ್ಬರ ದೊರೆತಾಗ ಬಿತ್ತನೆ ಮಾಡಲು ಸಾಧ್ಯವೇ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಮುಖಂಡ ಮುತ್ತೇಗೌಡ ಪ್ರಶ್ನೆ ಮಾಡಿದ್ದಾರೆ. 

ಇತರೆ ರಸಗೊಬ್ಬರಗಳಿಗೆ ಹೋಲಿಕೆ ಮಾಡಿದರೆ ಡಿಎಪಿ ರಸಗೊಬ್ಬರಕ್ಕೆ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡಬೇಕಿದೆ. ಹಾಗಾಗಿಯೇ ಡಿಎಪಿ ರಸಗೊಬ್ಬರ ಸರಬರಾಜು ಕಡಿಮೆ ಮಾಡಿದೆ. ರೈತರಿಗೆ ಅಗತ್ಯ ಗೊಬ್ಬರ ದೊರೆತರೆ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಸರ್ಕಾರ ತಕ್ಷಣ ರೈತರಿಗೆ ಅಗತ್ಯ ಇರುವಷ್ಟು ಡಿಎಪಿ ರಸಗೊಬ್ಬರ ಸರಬರಾಜು ಮಾಡಬೇಕು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

‘ನಾವು ಮುಂಗಡವಾಗಿಯೇ ಹಣ ಪಾವತಿಸಲು ಸಿದ್ದ.ಆದರೆ ರಸಗೊಬ್ಬರವೇ ಸರಬರಾಜು ಮಾಡುತ್ತಿಲ್ಲ. ಬಿತ್ತನೆ ಸಮಯದಲ್ಲಿ ಹೆಚ್ಚಾಗಿ ರೈತರು ಖರೀದಿ ಮಾಡುವುದೇ ಡಿಎಪಿ. ಆದರೆ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡಿದರೆ ಮಾತ್ರ ಡಿಎಪಿ ನೀಡುತ್ತೇವೆ ಎಂದು ರಸಗೊಬ್ಬರ ಕಂಪನಿಗಳು ನಮಗೆ ಷರತ್ತು ವಿಧಿಸುತ್ತಾರೆ. ರೈತರಿಗೆ ನಾವು ಈ ಷರತ್ತು ವಿಧಿಸುತ್ತ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡುವಂತೆ ಹೇಳಲು ಹೋದರೆ ಪ್ರತಿಭಟನೆ ನಡೆಸುತ್ತಾರೆ. ಹಾಗಾಗಿಯೇ ಕಂಪನಿಗಳುವರು ಎಷ್ಟು ಸರಬರಾಜು ಮಾಡಿದರೆ ಅಷ್ಟನ್ನು ಮಾತ್ರ ಮಾರಾಟ ಮಾಡುತ್ತೇವೆ’ ಎನ್ನುತ್ತಾರೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿ ಮಾಲೀಕರೊಬ್ಬರು. 

ತಾಲ್ಲೂಕಿನಲ್ಲಿ ಈ ವರ್ಷದ ಮುಂಗಾರಿನಲ್ಲಿ 19,220 ಹೆಕ್ಟೇರ್ ಪ್ರದೇಶದಲ್ಲಿ ರೈತರು ರಾಗಿ ಬಿತ್ತನೆ ಮಾಡುವ ಗುರಿಯನ್ನು ಅಂದಾಜಿಸಲಾಗಿದೆ. ಇಲ್ಲಿಯವರೆಗೆ 1,413 ಹೆಕ್ಟೇರ್ ಪ್ರದೇಶದಲ್ಲಿ, ಅಂದರೆ ಶೇ.7.35ರಷ್ಟು ಬಿತ್ತನೆಯಾಗಿದೆ.  ಹಾಗೆಯೇ ಮುಸುಕಿನಜೋಳ 5,690 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ 667 ಹೆಕ್ಟೇರ್ ಪ್ರದೇಶದಲ್ಲಿ,ಅಂದರೆ ಶೇ.11.72 ರಷ್ಟು ಬಿತ್ತನೆಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!