ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗೆ ಮುಂದಾಗುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ, (ಆಗಸ್ಟ್.13); ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಅಕ್ರಮಣವನ್ನು ನಿಲ್ಲಿಸಿ, ಹಿಂದೂಗಳಿಗೆ ರಕ್ಷಣೆ ನೀಡಿ ಹಾಗೂ ಸಂತ್ರಸ್ಥರ ನೆರವಿಗೆ ವಿಶ್ವಸಂಸ್ಥೆ ಧಾವಿಸಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯುವ ನಿಟ್ಟಿನಲ್ಲಿ  ವಿಶ್ವಸಂಸ್ಥೆ ಮುಂದಾಗಬೇಕಿದೆ. ಹಾಗೂ ಭಾರತ ದೇಶದ ರಾಷ್ಟ್ರಪತಿಗಳು ಹಾಗೂ ಪ್ರಧಾನ ಮಂತ್ರಿಗಳು ಬಾಂಗ್ಲಾದೇಶದ ಹಿಂದುಗಳ ನೆರವಿಗೆ ನಿಲ್ಲಬೇಕಿದೆ ಎಂದರು.

ಕೇವಲ 3-4 ದೇಶಗಳಲ್ಲಿ ಮಾತ್ರ ಉಳಿದಿರುವ ಹಿಂದುಗಳನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಬಾಂಗ್ಲಾದೇಶದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಿದ್ದಾರೆ  ಅವರ ಮೇಲೆ ಹಿಂಸಾತ್ಮಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಜವಾಬ್ದಾರಿಯುತ ಇಲಾಖೆಗಳು ಮಾತನಾಡಬೇಕಿದೆ. ವಿಶ್ವಸಂಸ್ಥೆ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಹಿಂದು ಹಿತರಕ್ಷಣ ಸಮಿತಿ ಒತ್ತಾಯಿಸುತ್ತದೆ ಎಂದರು.

ಸಮಿತಿಯ ಮುಖಂಡ ನರೇಶ್ ರೆಡ್ಡಿ ಮಾತನಾಡಿ, ನಮ್ಮ  ಪಕ್ಕದ ನೆರೆಯ ಬಾಂಗ್ಲಾದೇಶವು ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾದೇಶದ ಚುನಾಯಿತ ಪ್ರಧಾನಿ  ದೇಶವನ್ನು ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. 

ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ಹಿಂದೂ ಧಾರ್ಮಿಕ ಕೇಂದ್ರಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಮತ್ತು ಹಿಂದೂ ಮನೆಗಳನ್ನು ಗುರಿಯಾಗಿಸಿಕೊಂಡು ತೀವ್ರ ರೀತಿಯ ಧಾಳಿ ನಡೆಯುತ್ತಿದೆ. ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಿಂದೂ ರುದ್ರ ಭೂಮಿಗಳು, ನೂರಾರು ಮಠ ಮಂದಿರಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. 

ಕಾಲಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಶೇಕಡಾ 28ರಷ್ಟಿದ್ದ  ಹಿಂದೂಗಳು ಈಗ ಶೇಕಡಾ 8ಕ್ಕೆ ಬಂದು ಇಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶದಲ್ಲಿರುವ  ಹಿಂದೂಗಳ ಸಂರಕ್ಷಣೆಗೆ ಭಾರತ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಸಮಿತಿಯು ಮನವಿ ಮಾಡುತ್ತದೆ. 

ಗೌರವಾನ್ವಿತ ರಾಷ್ಟ್ರಪತಿಯವರಿಗೆ ಹಿಂದೂ ಹಿತರಕ್ಷಣಾ ಸಮಿತಿಯ ಮೂಲಕ ಆಗ್ರಹ ಪಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡರಾದ ಭಾಸ್ಕರ್ ಭಗತ್, ರವಿಕುಮಾರ್, ಮುದ್ದಪ್ಪ, ನಾಗೇಶ್, ವೆಂಕಟರಾಜು, ನರಸಿಂಹಮೂರ್ತಿ, ಡಾ. ನಾರಾಯಣ, ಶ್ರೀನಿವಾಸ್ ಗುರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಗುಡುಗು ಮಿಂಚು ಸಹಿತ ಬಿಳುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ Harithalekhani

[ccc_my_favorite_select_button post_id="105609"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!