ದೊಡ್ಡಬಳ್ಳಾಪುರ, (ಆಗಸ್ಟ್.15): ಭಾರತೀಯ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಆಗಸ್ಟ್ 15. ಪ್ರತಿ ವರ್ಷದಂತೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ತಾಲೂಕಿನ ಮಳೇಕೋಟೆ ಕ್ರಾಸ್ ಸಮೀಪದಲ್ಲಿರುವ ಶ್ರೀ ಜಗದ್ಗುರು ಚಂದ್ರಶೇಖರ ಸ್ವಾಮೀಜಿ ಗ್ರಾಮೀಣ (ಎಸ್.ಜೆ.ಸಿ.ಆರ್) ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯಣ್ಣ ಹಾಗೂ ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ನೆರವೇರಿಸಿದರು.
ಈ ವೇಳೆ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಅಪ್ಪಯಣ್ಣ, ಭಾರತ ದೇಶಕ್ಕೆ ಸ್ವಾತಂತ್ರ್ಯಸಿಗಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗರರನ್ನು ಸ್ಮರಿಸಿದರು. ಹಾಗೂ ಅವರಂತೆ ಎಲ್ಲರೂ ರಾಷ್ಟ್ರಾಭಿಮಾನ ಬೆಳಸಿಕೊಳ್ಳಲು ತಿಳಿಸಿದರು.
ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು ಮಾತನಾಡಿ, ಸ್ವಾತಂತ್ರ್ಯ ಪಡೆದ ನಂತರ ನಮ್ಮ ದೇಶ ಅಭಿವೃದ್ಧಿಯ ಕಡೆ ಮುನ್ನಡೆಯುತ್ತಿರುವ ರೀತಿ ಹಾಗೂ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ದೇಶದ ಮುನ್ನಡೆಗೆ ಸದಾ ಚಿಂತನೆ ಮಾಡಬೇಕಾಗಿ ತಿಳಿಸಿದರು.
ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಹೋರಾಟಗಾರರ ಬಗ್ಗೆ ಮಾತನಾಡಿದರು. ಹಾಗೆಯೇ ದೇಶಾಭಿಮಾನ ಬೆಳೆಸುವ ಹಾಡಿಗೆ ವಿದ್ಯಾರ್ಥಿಗಳಗೆ ನೃತ್ಯಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯಕುಮಾರ್.ಹೆಚ್.ಎಲ್., ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….