ಬೆಂಗಳೂರು, (ಆಗಸ್ಟ್.22): ಅಶ್ಲೀಲ ಸಂದೇಶ ಕಳಿಸಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಕೊಲೆ ಕೇಸ್ನಲ್ಲಿ ನ್ಯಾಂಗ ಬಂಧನದಲ್ಲಿರುವ ಖ್ಯಾತ ನಟ ದರ್ಶನ್ ಅವರು ನಟಿ ರಚಿತಾ ರಾಮ್ ಅವರೊಂದಿಗೆ ಮಾತನಾಡಿದ್ದು, ಕಾನೂನಿನಲ್ಲಿ ನಂಬಿಕೆ ಇದೆ. ಆದಷ್ಟು ಬೇಗ ಹೊರಗೆ ಬರ್ತಿನಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಅವರನ್ನು ಭೇಟಿಯಾಗಿ ಬಂದ ಬಳಿಕ ಮಾಧ್ಯಮಳೊಂದಿಗೆ ಮಾತನಾಡಿ, ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಕಷ್ಟ ಆಗುತ್ತೆ ಅವರನ್ನು ಆ ರೀತಿ ನೋಡಲು ಕಷ್ಟ ಆಗುತ್ತೆ.
ಹೇಳಿಬಿಟ್ಟು ಬಂದೆ ನಿಮ್ಮನ್ನ ಅಭಿಮಾನಿಗಳು, ನಾವು ತುಂಬಾ ಮಿಸ್ ಮಾಡ್ಕೋತಾ ಇದ್ದೀವಿ ಆದಷ್ಟು ಬೇಗ ಹೊರಬನ್ನಿ ಎಂದು. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ. ಆದಷ್ಟು ಬೇಗ ಹೊರಗೆ ಬರ್ತೀನಿ ಅಂತ ದರ್ಶನ್ ಹೇಳಿದ್ದಾರೆ ಅಂತ ರಚಿತ ರಾಮ್ ಹೇಳಿದ್ದಾರೆ.
ನಾನು ಅವರ ಬ್ಯಾನರ್ನಿಂದಲೇ ಇಂಟ್ರಡ್ಯೂಸ್ ಆಗಿದ್ದು. ಅವರು ನನಗೆ ಅವಕಾಶ ಕೊಡಲು ನೋ ಅಂದಿದ್ರೆ, ಬಿಂದ್ಯಾ ರಚಿತಾ ರಾಮ್ ಆಗುತ್ತಿರಲಿಲ್ಲ. ಅವರನ್ನ ನೋಡಿದ ಕೂಡಲೇ ನಾವೆಲ್ಲಾ ಭಾವುಕರಾದ್ವಿ, ಅವರೇ ನಮಗೆ ಧೈರ್ಯ ಹೇಳಿದ್ರು, ಸಮಾಧಾನ ಮಾಡಿದ್ರು ಎಂದು ರಚಿತಾ ಹೇಳಿದ್ದಾರೆ.
ಅವರನ್ನು ನೋಡಿದ ಮೇಲೆ ನನಗೆ ನಿರಾಳವಾಯ್ತು, ಆರೋಗ್ಯ ವಿಚಾರಿಸಿದಾಗ ಐ ಆ್ಯಮ್ ಫೈನ್ ಅಂದ್ರು. ಕಾನೂನು ಪ್ರಕ್ರಿಯೆ ಬಗ್ಗೆ ಅವರೇ ಮಾತನಾಡಬೇಕು, ನಾವೇನೇ ಮಾತಾಡಿದ್ರು ಅದು ತಪ್ಪಾಗುತ್ತೆ, ಅವರ ಋಣ ನಮ್ಮ ಕುಟುಂಬದ ಮೇಲಿದೆ, ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ ಎಂದು ದೇವರಲ್ಲಿ ಕೇಳಿಕೊಳ್ತೀನಿ ಎಂದು ರಚಿತಾ ರಾಮ್ ತಿಳಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….