ಹೊಸಹಳ್ಳಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ; ಕೆವಿಕೆ ವಿಜ್ಞಾನಿಗಳಿಂದ ಹಲವು ಮಹತ್ವದ ಮಾಹಿತಿ

ದೊಡ್ಡಬಳ್ಳಾಪುರ, (ಆಗಸ್ಟ್.29); ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಕೃಷಿ ಜಮೀನಿನಲ್ಲಿ ಅಡಿಕೆ ಬೆಳೆ ಹೆಚ್ಚಾಗುತ್ತಿರುವುದು ಕಳೆದ ಎರಡು ಮೂರು ವರ್ಷಗಳಿಂದ ಕಂಡು ಬರುತ್ತಿದೆ.  

ಹೊಸದಾಗಿ ಅಡಿಕೆ ನಾಟಿ ಮಾಡಿದ ಜಮೀನುಗಳಲ್ಲಿ ಅಡಿಕೆ ಸಾಲುಗಳ ಮಧ್ಯೆ ಇರುವ ಭಾಗದಲ್ಲಿ ವಿವಿಧ ರೀತಿಯ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಸಮರ್ಪಕವಾಗಿ ಜಾಗ ಬೆಳೆಸಿಕೊಂಡು ರೈತರು ಉತ್ತಮ ಇಳುವರಿ ಪಡೆಯಬಹುದು ಎನ್ನುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಹೊಸದಾಗಿ ನಾಟಿ ಮಾಡಿದ ಅಡಿಕೆ ತೋಟಗಳಲ್ಲಿ ಬೆಳೆಯ ಬಹುದಾದ ಅಂತರ ಬೆಳೆಗಳು: ಸೂಕ್ತ ಆಹಾರ ಬೆಳೆಗಳು – ರಾಗಿ, ಅಲಸಂದೆ, ಹೆಸರು, ಉದ್ದು, ಹುರುಳಿಕಾಳು ಇತ್ಯಾದಿಗಳನ್ನು ನಾಟಿ ಮಾಡಿದ 3 ರಿಂದ 5 ವರ್ಷಗಳ ಕಾಲ ಬೆಳೆಯಬಹುದಾಗಿದೆ.

ವಿಶೇಷವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ವಾತಾವರಣದ ಸಾರಜನಕವನ್ನು ಅವುಗಳು ಬೇರುಗಂಟಿನಲ್ಲಿರುವ ರೈಜೋಬಿಯಂ ಸೂಕ್ಷ್ಮಾಣುವಿನ ಮೂಲಕ ಸ್ಥಿರೀಕರಿಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುತ್ತವೆ ಎಂದು ಕೇಂದ್ರದ ಮಣ್ಣು ವಿಜ್ಞಾನಿ ಡಾ.ಪಿ.ವೀರನಾಗಪ್ಪರವರು ತಾಂತ್ರಿಕ ಮಾಹಿತಿ ನೀಡಿದರು.

ಅಡಿಕೆಯನ್ನು 7 x 8 ಅಡಿ, 8 x 8 ಅಡಿ, 9x 9 ಅಡಿ, 8 x 9 ಅಡಿ ವಿವಿಧ ಅಂತರದಲ್ಲಿ ರೈತರು ನಾಟಿ ಮಾಡುತ್ತಿದ್ದಾರೆ. ಅಡಿಕೆಯಲ್ಲಿ ಪೋಷಕಾಂಶಗಳ ಮಹತ್ವ ಮತ್ತು ನೀರು ನಿರ್ವಹಣೆ, ಬೇಸಿಗೆಯಲ್ಲಿ ತೇವಾಂಶ ಹಾಗೂ ಬೆಳೆಯ ರಕ್ಷಣೆಯ ಕುರಿತು ಉಪನ್ಯಾಸ ನೀಡಿದರು. 

ಕೇಂದ್ರದ ಮುಖ್ಯಸ್ಥರಾದ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ಬಯಲು ಸೀಮೆಯಲ್ಲಿ ಅಡಿಕೆ ಬೆಳೆಯಲು ಅನುಸರಿಸಬೇಕಾದ ಕೆಲವು ಪದ್ಧತಿಗಳ ಕುರಿತು ಮಾಹಿತಿ ನೀಡಿದರು.

ಅಡಿಕೆಗೆ ಸೂಕ್ತ ತೋಟಗಾರಿಕೆ ಬೆಳೆಗಳು: ಬೀನ್ಸ್, ಕ್ಯಾರೆಟ್, ಬೀಟ್‌ರೂಟ್, ಕಡ್ಡಿ ಬೀನ್ಸ್, ಬಾಳೆ, ಚಪ್ಪರದ ಅವರೆ ಇತ್ಯಾದಿಗಳನ್ನು ಮೊದಲು 3 ವರ್ಷಗಳವರೆಗೆ ಬೆಳೆಯಬಹುದು. 

ಹತ್ತು ವರ್ಷಗಳ ನಂತರ ಅಡಿಕೆಯಲ್ಲಿ ಅಂತರ ಬೆಳೆಯಾಗಿ ವೀಳ್ಯದೆಲೆ, ಕಾಳು ಮೆಣಸು, ಏಲಕ್ಕಿ, ಕೊಕೋನಾ, ಜಾಯಿಕಾಯಿ ಇತ್ಯಾದಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಯಬಹುದಾಗಿದ್ದು ರೈತರು ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆಯೆಂದು ತಿಳಿಸಿದರು.  

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯವಸಾಯ ಪೂರಕ ಚಟುವಟಿಕೆಗಳಿಗೆ ಮಂತಾರ್ ಲೀ ಸೋಷಿಯಲ್ ಇನ್ನೋವೇಷನ್ ಫೆಡರೇಶನ್, ಬೆಂಗಳೂರು ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಕಾರ್ಪೋರೇಟ್ ಸೇವಾ ಜವಾಬ್ದಾರಿ ಉಪಕ್ರಮಗಳ ಅಡಿಯಲ್ಲಿ ಪ್ರಾಯೋಜಿಸಲಾಗುತ್ತಿದೆ ಎಂದು ರೋಹಿಣಿ ಅವರು ತಿಳಿಸಿದರು.

ಕೇಂದ್ರದ ವತಿಯಿಂದ ರೈತರುಗಳಿಗೆ ಅಡಿಕೆ ಬೆಳೆಯಲ್ಲಿ ಪ್ರಾತ್ಯಕ್ಷಿಕೆಗಳು, ಸುಗಂಧರಾಜ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಪದ್ಧತಿಗಳು ಕುರಿತು ಹಲವು ತರಬೇತಿ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಸ್ಥರು ತಿಳಿಸಿದರು. 

ಕಾರ್ಯಕ್ರಮದಲ್ಲಿ ಹೊಸಹಳ್ಳಿ ಗ್ರಾಮದ ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಗುಡುಗು ಮಿಂಚು ಸಹಿತ ಬಿಳುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ Harithalekhani

[ccc_my_favorite_select_button post_id="105609"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!