ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ರೌಡಿಶೀಟರ್‌ಗೆ ಗುಂಡು..!

ನೆಲಮಂಗಲ, (ಸೆ.01); ಹೆದ್ದಾರಿಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ರೌಡಿಶೀಟರ್ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಶನಿವಾರ ನಡೆದಿದೆ.

ಗಾಯಾಳು ರೌಡಿಶೀಟರ್ ಜಯಂತ್​ ಎಂಬಾತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಬಸ್​ಪೇಟೆಯ ಶಿವಗಂಗೆ ಕಂಬಾಳು ನಡುವಿನ ನೀಲಗಿರಿ ತೋಪಿನ ಬಳಿ ರೌಡಿಶೀಟರ್​ ದರೋಡೆಗೆ ಯತ್ನಿಸುತ್ತಿರುವ ವಿಷಯ ತಿಳಿದು ದಾಬಸ್​ಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

ಈ ವೇಳೆ ಪೊಲೀಸರು ರೌಡಿಶೀಟರ್​ಗೆ ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ನಂತರ ಬಂಧಿಸಲು ಹೋದ ಹೆಡ್​ ಕಾನ್​ಸ್ಟೇಬಲ್​ ಇಮ್ರಾನ್​ ಖಾನ್​ ಮೇಲೆ ರೌಡಿಶೀಟರ್​ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಇನ್​ಸ್ಪೆಕ್ಟರ್​ ಬಿ.ರಾಜು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯ ಬಲಗಾಲಿಗೆ ಗುಂಡು ಬಿದ್ದಿದೆ.

ಗಾಯಗೊಂಡ ಹೆಡ್ ಕಾನ್​ಸ್ಟೇಬಲ್ ಇಮ್ರಾನ್ ಖಾನ್​ ಅವರನ್ನು ದಾಬಸ್‌ಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿಶೀಟರ್ ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ಕಳ್ಳತನ, ದರೋಡೆ ಸೇರಿದಂತೆ 56 ಪ್ರಕರಣಗಳಿವೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….